saptsagar_admin

ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡಿ -ರಿಷಿ ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.1: ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಸೋಮವಾರ ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಮಟ್ಟದಲ್ಲಿ…

Read More

ಮೆಡಿಕಲ್ ಕಾಲೇಜ್ ಹೋರಾಟ: ನಾಳೆ ಬೃಹತ್ ಪ್ರತಿಭಟನಾ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 30:74 ದಿನ ಪೂರೈಸಿದ ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟವು ನಾಳೆ 75 ನೇ ದಿನಕ್ಕೆ ಕಾಲಿಡುತ್ತಿದೆ. ರಾಜ್ಯ ಸರ್ಕಾರ ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಎಸಗಿರುವ ದ್ರೋಹವನ್ನು ಖಂಡಿಸಿ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಶಿವಾಜಿ ವೃತ್ತದಿಂದ ಗಾಂಧಿವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಜನಗಳ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ 20000 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ, ಯುವಜನ, ಮಹಿಳಾ, ಕೃಷಿ…

Read More

ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳಬೇಕು-ಡಾ. ವಿಜಯಾ ಕೋರಿಶೆಟ್ಟರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 30ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿ ಡಾ. ವಿಜಯಾ ಕೋರಿಶೆಟ್ಟರ ಹೇಳಿದರು.ಪರೀಕ್ಷಾ ವಿಭಾಗ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ ಗರ್ಲ್ಸ್ ಅಂಡ್ ಎಸ್.ಸಿ./ ಎಸ್.ಟಿ ಸ್ಟೂಡೆಂಟ್ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಸಮಾಜ ಬದಲಾವಣೆ ಆದಂತೆ ಶೈಕ್ಷಣಿಕ ವ್ಯವಸ್ಥೆ ಬದಲಾವಣೆ ಆಗುತ್ತಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ…

Read More

ವಚನಗಳಿಂದ ಸಮ ಸಮಾಜದ ನಿರ್ಮಾಣ ಸಾಧ್ಯ- ಬಸವರಾಜ ಜಾಲವಾದಿ

ಸಪ್ತಸಾಗರ ವಾರ್ತೆ, ವಿಜಯಪುರ, ನ.30: ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ವಿಶಿಷ್ಟವಾಗಿ ಮೂಡಿ ಬಂದಿದ್ದು, ಗದ್ಯವೂ ಅಲ್ಲದ, ಪದ್ಯವೂ ಅಲ್ಲದ ಒಂದು ಸಾಹಿತ್ಯದ ಪ್ರಕಾರವಾಗಿದ್ದು, ಸರಳ ಭಾಷೆಯಲ್ಲಿ ಅತ್ಯಂತ ಗಹನವಾದ ವಿಚಾರಗಳನ್ನು ವ್ಯಕ್ತಪಡಿಸಿದ ವಚನ ಸಾಹಿತ್ಯದ ಮೂಲಕ ಶರಣ, ಶರಣೆಯರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನೀವೆಲ್ಲ ನಡೆದಾಗ ಮಾತ್ರ ಸಮ ಸಮಾಜದ ನಿರ್ಮಾಣ ಸಾಧ್ಯ ಎಂದು ಕೂಡಗಿಯ ರಾಜ್ಯ ಅತ್ಯುತ್ತಮ ಉಪನ್ಯಾಸಕರ ಪ್ರಶಸ್ತಿ ಪುರಸ್ಕೃತ ಬಸವರಾಜ ಜಾಲವಾದಿ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ…

Read More

ವೃಕ್ಷಥಾನ್ ಹೆರಿಟೇಜ್ ರನ್: ಡಿ.5,6ರಂದು ಟಿ ಶರ್ಟ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 30: ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿ ಮಾಡಿರುವ ಓಟಗಾರರಿಗೆ ಟಿ-ಶರ್ಟ್ ಹಾಗೂ ಬಿಬ್ ವಿತರಣೆ ಮತ್ತು ಪೂರ್ವಭಾವಿ ಕಾರ್ಯಕ್ರಮಗಳು ಡಿಸೆಂಬರ್ 5 ಮತ್ತು 6 ರಂದು ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿವೆ. ಟಿ–ಶರ್ಟ್ ಮತ್ತು ಬಿಬ್ ವಿತರಣೆ ಡಿಸೆಂಬರ್ 5 ಮತ್ತು 6 ರಂದು ಟಿ-ಶರ್ಟ್ ಮತ್ತು ಬಿಬ್ ವಿತರಿಸಲಾಗುವುದು. ಈಗಾಗಲೇ ನೋಂದಣಿ ಮಾಡಿಸಿರುವ ಓಟಗಾರರು ಸೂಕ್ತ ನೋಂದಣಿ ದಾಖಲೆಗಳೊಂದಿಗೆ ಆಗಮಿಸಿ, ಟಿ-ಶರ್ಟ್ ಮತ್ತು…

Read More

ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಸಹಾಯಕಾರಿ: ಕೊಣ್ಣೂರ

ಸಪ್ತಸಾಗರ ವಾರ್ತೆ ವಿಜಯಪುರ, ನ. 30: ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಸಮತೋಲನವನ್ನು ಕಾಪಾಡಲು ಪ್ರೋತ್ಸಾಹ ನೀಡುತ್ತವೆ ಎಂದು ಅಂತಾರಾಷ್ಟ್ರೀಯ ವಿಕಲಚೇತನ ಕ್ರಿಕೆಟ್ ಪಟು ರಾಜೇಶ ಕೊಣ್ಣೂರ ಹೇಳಿದ್ದಾರೆ.ಶನಿವಾರ ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳು ಪಾಠದಷ್ಟೆ ಆಟಕ್ಕೂ ಮಹತ್ವ ಕೊಡಬೇಕು. ಪೋಷಕರೂ ತಮ್ಮ ಮಕ್ಕಳಿಗೆ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ನಿರ್ದೇಶಕ…

Read More

ವೃಕ್ಷಥಾನ್ ಹೆರಿಟೇಜ್ ರನ್: ನಾಲ್ವರಿಗೆ ಸನ್ಮಾನಕ್ಕೆ ನಿರ್ಧಾರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 29: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ದಿನದಂದು ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ, ಕ್ರೀಡೆ, ಪ್ರವಾಸೋದ್ಯಮಕ್ಕೆ ಉತ್ತೇಜನ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಲ್ಕು ಜನರಿಗೆ ಗೌರವ ಸನ್ಮಾನ ಮಾಡಲು ಕೋರ್ ಕಮಿಟಿ ನಿರ್ಧರಿಸಿದೆ.ಕೆಂಗಲಗುತ್ತಿ ಶಿಕ್ಷಕ ಹಣಮಂತ ಕಾತರಕಿ, ವಿಜಯಪುರ ಎ.ಎಸ್.ಐ ನೌಕರ ಮೌಲಾಸಾಬ ಮೈನುದ್ದೀನಸಾಬ ಇಂಗಳೇಶ್ವರ, ನವಿಮುಂಬೈನ ಓಟಗಾರ ಶ್ರೇಯಸ ಯಶವಂತ ರಾವ ಹಾಗೂ ವಿಜಯಪುರ ನಗರದ ಹೆಡ್ ಕಾನಸ್ಟೇಬಲ್ ಭೀಮಾಶಂಕರ ಮಾಡಗ್ಯಾಳ…

Read More

ನಾಳೆ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸಪ್ತಸಾಗರ ವಾರ್ತೆ, ವಿಜಯಪುರ ನ.29:ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ಮುಖ್ಯ ಏರು ಕೊಳವೆ ಮಾರ್ಗದಲ್ಲಿ ನೀರು ಸೋರುವಿಕೆಯಾಗುತ್ತಿರುವ ದುರಸ್ತಿ ಕಾಮಗಾರಿಯನ್ನು ಜಲ ಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ಹಿನ್ನಲೆಯಲ್ಲಿ ನ.30ರಂದು ವಿಜಯಪುರ ನಗರಕ್ಕೆ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಜಲಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಇಡೀ ಜಗತ್ತಿಗೆ ಶಿಕ್ಷಣ ಕೊಟ್ಟ ದೇಶ ನಮ್ಮ ಭಾರತ- ಯತ್ನಾಳ್

ಸಪ್ತ ಸಾಗರ ವಾರ್ತೆ ವಿಜಯಪುರ, ನ. 29: ಯಾವ ದೇಶ ತನ್ನ ಇತಿಹಾಸವನ್ನು ಮರೆಯುತ್ತದೆಯೋ ಅದಕ್ಕೆ ಭವಿಷ್ಯವಿಲ್ಲ. ಇಡೀ ಜಗತ್ತಿಗೆ ಶಿಕ್ಷಣ ಕೊಟ್ಟ ದೇಶ ನಮ್ಮ ಭಾರತ. ನಮ್ಮತನವನ್ನು ಉಳಿಸಿಕೊಂಡು ಶಿಕ್ಷಣ ಕೊಟ್ಟಿದೆ ಎಂದು ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಸಿ.ಬಿ.ಎಸ್.ಇ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಶಿಕ್ಷಣವು ವೈಜ್ಞಾನಿಕ ತಳಹದಿಯ ಮೇಲಿದೆ. ಅದನ್ನು…

Read More

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಿ- ಸಾವುಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 29:ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ. ಸಾವುಕಾರ ಅವರು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಶವಂತರಾಯಗೌಡ ಅವರುಒಬ್ಬ ಜಾತ್ಯಾತೀತ ನಾಯಕರಾಗಿದ್ದು, ಎಲ್ಲ ಸಮುದಾಯದವರ ಪ್ರೀತಿಗೆ ಪಾತ್ರರಾಗಿದ್ದಾರೆ. ಮತಕ್ಷೇತ್ರದಲ್ಲಿ ಅವರ ಅಧಿಕಾರಾವಧಿಯಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ನಡೆದಿರುತ್ತವೆ. ಇವರೊಬ್ಬ ತಳಮಟ್ಟದ ಹಾಗೂ ಸಜ್ಜನ ರಾಜಕಾರಣಿಯಾಗಿದ್ದು, ಅಂದರೆ ಮೂರು ಬಾರಿ…

Read More