ಕಾನಿಪ ಸಂಘದ ಸದಸ್ಯರಿಗೆನೇತ್ರ ಚಿಕಿತ್ಸೆ ಉಚಿತ : ಡಾ. ಪ್ರಭುಗೌಡ
ಸಪ್ತಸಾಗರ ವಾರ್ತೆ, ವಿಜಯಪುರ, ನ. 20:ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಸಿಕೊಳ್ಳುವ ಪತ್ರಕರ್ತರು ಆಧುನಿಕ ಸಮಾಜದ ಕೈಗನ್ನಡಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆಂದು ನೇತ್ರ ತಜ್ಞ ಡಾ.ಪ್ರಭುಗೌಡ ಪಾಟೀಲ ಬಣ್ಣಿಸಿದರು.ನಗರದ ತಮ್ಮ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಭಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನೂತನ ಪದಾಧಿಕಾರಿಗಳಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ತಮ್ಮ ಲೇಖನಿಯ ಮೂಲಕ ಸಮಾಜದ ಕಣ್ತೆರೆಸುವ ಕಾರ್ಯದಲ್ಲಿ ತೊಡಗಿರುವ ಪತ್ರಕರ್ತರ ಕಣ್ಣುಗಳ ರಕ್ಷಣೆಗಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಸದಸ್ಯರಿಗೆ ಶೀಘ್ರದಲ್ಲಿಯೇ ’ಫ್ಯಾಮಿಲಿ ಕಾರ್ಡ್’ ಮಾಡಿಕೊಡುವುದಾಗಿ ತಿಳಿಸಿದ…


