saptsagar_admin

ಬ್ಯಾಂಕ್ ದರೋಡೆ: ಶೀಘ್ರದಲ್ಲಿ ಆರೋಪಿಗಳ ಬಂಧನ- ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:ಚಡಚಣ ಎಸ್ ಬಿ ಐ ಬ್ಯಾಂಕ್ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಶೀಘ್ರದಲ್ಲಿ ದರೋಡೆಕೋರರನ್ನು ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಝಳಕಿ ಪ್ರವಾಸಿ ಮಂದಿರದಲ್ಲಿ ಸುದ್ದಿದಾರರಿಗೆ ಮಾಹಿತಿ ನೀಡಿ, ನಿನ್ನೆ ಸಾಯಂಕಾಲ6-30‌ ರಿಂದ 7-30 ರ ವೇಳೆ ದರೋಡೆ ನಡೆದಿದೆ. ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ ಘಟನೆ ನಡೆದಿದೆ.ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಬ್ಯಾಂಕ್ ಖಾತೆ ಮಾಡುವ ನೆಪದಲ್ಲಿ ಬಂದು ಬ್ಯಾಂಕಿನ ಒಳಗಡೆ ಕುಳಿತಿದ್ದ.ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ…

Read More

ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16:ಮುಸುಕುಧಾರಿ ದರೋಡೆಕೋರರ ಗುಂಪೊಂದು ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿಗೆ ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ.ಐದಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರಿಂದ ಈ ಕೃತ್ಯ ನಡೆದಿದ್ದು, ಮಿಲಿಟರಿ ಮಾದರಿ ಬಟ್ಟೆಯಲ್ಲಿ ಕೈಯಲ್ಲಿ ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿನ‌ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿಗಳಿಗೆ ಹೆದರಿಸಿ ಕೈಕಾಲು ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.ಬ್ಯಾಂಕಿನಲ್ಲಿದ್ದ…

Read More

ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ಬೆಂಗಳೂರು ಇವರ ಮೂಲಕ ಶಿಶಿಕ್ಷು (ಅಪ್ರೆಂಟಿಶಿಪ್) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಐಟಿಐನಲ್ಲಿನ ಫಿಟ್ಟರ್, ಟರ್ನರ್, ಮಷಿನಸ್ಟ್, ಇಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ ಕಂ ಆಪರೇಟರ್ ಮತ್ತು ಎಮ್.ಆರ್.ಎಸಿ ಟ್ರೇಡಗಳಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು, ಜಿಲ್ಲಾ ಉದ್ಯೋಗಾಧಿಕಾರಿ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು https://apprenticeshipindia.gov.in ವೆಬ್‌ಸೈಟ್ ಮೂಲಕ…

Read More

ಇಗ್ನೋ: ಜುಲೈ ಆವೃತ್ತಿ ಪ್ರವೇಶಾತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.16: ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಜುಲೈ 2025 ಆವೃತ್ತಿಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ. ಜುಲೈ-2025ರ ಮರು ಪ್ರವೇಶಾತಿಗೆ ಪುನಃ ನೋಂದಣಿ Link://onlinerr.ignou.ac.in ಲಿಂಕ್ ಬಳಸಿಕೊಂಡು 200 ರೂ. ವಿಳಂಬ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಸಂಖ್ಯೆ: 08352-252006, email: rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮ ದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.16:ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು.ಆಸಕ್ತ…

Read More

ವಿಜಯಪುರ- ಚಿಕ್ಕಲಕಿ ಬಸ್ ಗೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ನಗರದಿಂದ ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರಕ್ಕೆ ಇಂದು ಮಂಗಳವಾರ ಯಕ್ಕುಂಡಿ‌ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಗರಿಸಲಾಗಿದ್ದ ಎರಡು ಬಸ್ಸುಗಳ ಸಂಚಾರಕ್ಕೆ ತಾಲೂಕು ಗ್ಯಾರಂಟಿ ಯೋಜನೆಗಳ‌ ಸಮಿತಿ‌ ಅಧ್ಯಕ್ಷ ಮಲ್ಲು ದಳವಾಯಿ ಮತ್ತು ಬ್ಲಾಕ್ ಕಾಂಗ್ರೆಸ್ ಈರಗೊಂಡ ಬಿರಾದಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲು ದಳವಾಯಿ, ಸಚಿವ ಎಂ. ಬಿ. ಪಾಟೀಲ‌ ಅವರ…

Read More

ಯುಕೆಪಿ 3ನೇ ಹಂತದ ಯೋಜನೆ: ಮುಳುಗಡೆಯಾಗುವ ಪ್ರತಿ ಎಕರೆ ಭೂಮಿಗೆ 30-40 ಲಕ್ಷ ಪರಿಹಾರ ನಿಗದಿ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.16:“ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.25 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂಸ್ವಾಧೀನ…

Read More

ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2 ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಈ ಸ್ವಚ್ಛತೆಯೇ ಸೇವೆ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ…

Read More

ಬಿಎಲ್ ಡಿಇ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯದಲ್ಲಿ ದೃಷ್ಟಿಕೋನ ಕಂಕಣ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025 ಶನಿವಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಗಾವಿಯ ಐ.ಸಿ.ಎಂ.ಆರ್ ಎನ್.ಐ.ಟಿ.ಎಂನ ಡಾ. ಬನಪ್ಪ ಉಂಗೆರ ಮಾತನಾಡಿ, ಫಾರ್ಮಾ ಪದವೀಧರರಿಗೆ ಭವಿಷ್ಯದಲ್ಲಿ ಹೊಸ ಔಷಧ ಅನ್ವೇಷಣೆ ಮತ್ತು ಸೂತ್ರೀಕರಣ ವಿನ್ಯಾಸ ಹಾಗೂ ಕ್ಲಿನಿಕಲ್ ಸಂಶೋಧನೆಯಲ್ಲಿ ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಬಿ. ಫಾರ್ಮ್ಸ್ ಸಂಯೋಜಕ ಡಾ. ಶ್ರೀಧರಕುಮಾರ ಬಿರಾದಾರ ಮತ್ತು…

Read More

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ

ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆಸಪ್ತಸಾಗರ ವಾರ್ತೆ ವಿಜಯಪುರ, ಸೆ. 15: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕ ರಾಮನಗೌಡ ಪಾಟೀಲ…

Read More