ಬದ್ಧತೆ ಇದ್ದಾಗ ಸುಸಜ್ಜಿತ ಸಮಾಜ ನಿರ್ಮಾಣ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಪ್ತಸಾಗರ ವಾರ್ತೆ, ವಿಜಯಪುರ, ಜ. 9: ಸಾರ್ವಜನಿಕ ಕ್ಷೇತ್ರದಲ್ಲಿ ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.ವಿಜಯಪುರದ ಲೋಣಿಯಲ್ಲಿ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜ್ಞಾನ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.ಶಿಕ್ಷಣ, ಕುಡಿಯುವ ನೀರು, ಆಸ್ಪತ್ರೆಯಂತಹ ವಿಷಯದಲ್ಲಿ ರಾಜಕಾರಣ ಮಾಡದಿದ್ದರೆ ಸುಸಜ್ಜಿತ ಸಮಾಜ ಸಾಧ್ಯ. ಹಿಂದಿನವರು ನಿಸ್ವಾರ್ಥ ಮನೋಭಾವದಿಂದ ಸಂಸ್ಥೆಗಳನ್ನು ಕಟ್ಟಿದ್ದಾರೆ ಎಂದು…


