ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 8: ಮನುಕುಲಕ್ಕೆ ಸುಂದರ ಬದುಕಿನ ದಾರಿ ತೋರಿದ ಜಗತ್ತಿನ ಶ್ರೇಷ್ಠ ಸಂತ ಸಿದ್ಧೇಶ್ವರ ಸ್ವಾಮೀಜಿಯವರ ಜೀವನ, ಚಿಂತನೆಗಳು ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿಯಾಗಿವೆ ಎಂದು ನಿಜಶರಣಾನಂದ ಸ್ವಾಮೀಜಿಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಕಲ್ಲಯಾರೂಢ ಮಠದಲ್ಲಿ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ 3ನೇ ಗುರುನಮನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.ಅಧ್ಯಾತ್ಮದ ಮೇರು ಪರ್ವತ, ಸದ್ಗುಣಗಳ ಪ್ರತಿರೂಪವಾಗಿದ್ದ ಸಿದ್ದೇಶ್ವರ ಶ್ರೀಗಳು ಸರಳ ಜೀವನ, ಆಳವಾದ ಆಧ್ಯಾತ್ಮಿಕ ಜ್ಞಾನದೊಂದಿಗೆ ಜಾತಿ, ಮತ, ಪಂಥದ ಭೇದಭಾವವಿಲ್ಲದೆ ಎಲ್ಲರಿಗೂ ತತ್ವಶಾಸ್ತ್ರವನ್ನು ಅರ್ಥವಾಗುವ ಭಾಷೆಯಲ್ಲಿ…


