ಸಾತಿಹಾಳ ಬಳಿ ಬಸ್ ಪಲ್ಟಿ : 20 ಪ್ರಯಾಣಿಕರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13:
ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆ
ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಬಳಿ ನಡೆದಿದೆ.
KA 28- F1958 ನಂಬರಿನ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಜಮೀನಿನಲ್ಲಿ ಪಲ್ಟಿಯಾಗಿ ಬಿದ್ದಿದೆ.
ಬಸ್ ನಲ್ಲಿದ್ದ 20 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗಾಯಾಳುಗಳಿಗೆ ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್ ಸಹೋದರ ಸಚಿನಗೌಡ ಸಹಾಯ ನೀಡಿದರು.
ದೇವರಹಿಪ್ಪರಗಿ ಪೊಲೀಸ್ ಠಾಣೆಯ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

Share this