ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ: ಸಿಎಂ ಡಿ.ಕೆ. ಶಿವಕುಮಾರ್
ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 06: “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು…


