ಕುಮಾರಸ್ವಾಮಿ ಪಂಥಾಹ್ವಾನಕ್ಕೆ ಸಿದ್ಧ:ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಮೇ 20:“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ ಶಿವಕುಮಾರ್ ಅವರು ಬುಧವಾರ ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಆ ಭಾಗದ ರೈತರೊಂದಿಗೆ ಸಭೆ…

Read More

ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಮೇ 15: “ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಸದಾಶಿವನಗರದ ನಿವಾಸದ ಬಳಿ ಅವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು…

Read More

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ಬೆಂಗಳೂರು, ಏ. 17:ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ….

Read More

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ: ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಏ.13:“ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ…

Read More

ಖ್ಯಾತ ಸಾಹಿತಿ, ರಾಗಂ ಅವರಿಗೆ ಕರ್ನಾಟಕ ಸುಮನಸಾಧಕ ಪ್ರಶಸ್ತಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಮಾ. 26:ಬೆಂಗಳೂರಿನ ಖ್ಯಾತ ಟಿವಿ ವಾಹಿನಿಯಾದ ಸುಮನ ಟಿವಿಯವರು ಕೊಡ ಮಾಡುವ 2026 ನೇ ಸಾಲಿನ ಕರ್ನಾಟಕ ಸುಮನ ಸಾಧಕ ಪ್ರಶಸ್ತಿಯನ್ನು ಮೂಲತಃ ವಿಜಯಪುರ ಮೂಲದ ಬೆಂಗಳೂರಿನ ಪ್ರಖ್ಯಾತ ಸಾಹಿತಿ, ಸಂಶೋಧಕ, ಇಂಗ್ಲೀಷ ಪ್ರಾಧ್ಯಾಪಕ, ಸಾಹಿತ್ಯ ಲೋಕದಲ್ಲಿ ‘ ರಾಗಂ ‘ ಎಂದೆ ಪ್ರಸಿದ್ಧಿಯನ್ನು ಪಡೆದಿರುವ ನೂರಾರು ಮೌಲ್ಯಾಧಾರಿತ ಕೃತಿಯನ್ನು ಕನ್ನಡ ಸಾರಸತ್ವ ಲೋಕಕ್ಕೆ ನೀಡಿದ ರಾಜಶೇಖರ ಜಿ ಮಠಪತಿಯವರಿಗೆ ಸುಮನ ಸಾಧಕ ಪ್ರಶಸ್ತಿ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಾನವ ಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾ. 21:ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರುರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ…

Read More

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾರ್ಚ್ 17:“ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.“ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ…

Read More

ಸಪ್ತಸಾಗರ ಸಂಪಾದಕ ರುದ್ರಪ್ಪ ಆಸಂಗಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಮಾ. 14:ಸಪ್ತಸಾಗರ ದಿನ ಪತ್ರಿಕೆ ಸಂಪಾದಕ ಹಾಗೂ ಸಂಜೆವಾಣಿ ಜಿಲ್ಲಾ ವರದಿಗಾರ ರುದ್ರಪ್ಪ ಆಸಂಗಿ ಸೇರಿದಂತೆ ರಾಜ್ಯದ 31 ಗಣ್ಯರಿಗೆ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ಶುಕ್ರವಾರ ಸಂಜೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ವಿಜಯಪುರದ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು 4 ದಶಕಗಳ ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿರುವುದನ್ನು ಪರಿಗಣಿಸಿ ಮಾಧ್ಯಮ ಅಕಾಡೆಮಿಯ 2025ನೇ…

Read More

ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಪ್ರತಿ ಟನ್‌ಗೆ ಸರ್ಕಾರದಿಂದ 50 ರೂ. ನೆರವು- ಸಕ್ಕರೆ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಬೆಂಗಳೂರು, ಫೆ. 25: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ 50 ರೂ.ಗಳ ಆರ್ಥಿಕ ನೆರವಿನ ಮೊತ್ತ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ…

Read More

ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ.19:“ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.ಅಸ್ಸಾಂ ರಾಜ್ಯಕ್ಕೆ ತೆರಳುವುದಕ್ಕೆ ಮುಂಚಿತವಾಗಿ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು.ಏನಾದರೂ ಕಸ ವಿಲೇವಾರಿಗೆ ಬಿಡುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆ…

Read More