ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ್
ಸಪ್ತಸಾಗರ ವಾರ್ತೆ,ಬೆಂಗಳೂರು, ಆ 19:ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ “ವಿಶ್ವ ಛಾಯಾಗ್ರಾಹಕ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ “Love at First Sight” ಎಂದು…


