ದೇವರನಿಂಬರಗಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಭೀಮನಗೌಡ ಬಿರಾದಾರ ಎಂಬುವರ ಮೇಲೆ ನಾಲ್ವರು ಮುಸುಕಧಾರಿ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.ಬಿರಾದಾರನಿಗೆ ತಲೆ ಹಾಗೂ ಎದೆಗೆ ಗುಂಡು ತಗುಲಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಬಿರಾದಾರ ಈತನು ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಹಾಗೂ ಬಲಗೈ ಭಂಟನಾಗಿದ್ದ ವ್ಯಕ್ತಿ.ಬಿರಾದಾರ ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್…

Read More

ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…

Read More

ಕೊಲೆ ಆರೋಪಿಗಳಿಬ್ಬರ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ನಿನ್ನೆಯಷ್ಟೇ ನಗರದಲ್ಲಿ ನಡೆದ ಸುಶೀಲ್ ಕಾಳೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ ನಡೆಸಿದಾಗ ಪೊಲೀಸರು ಪ್ರತಿಯಾಗಿ ಆರೋಪಿಗಳಿಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರ ಕಾಲುಗಳಿಗೆ ಗಾಯಗಳಾದ ಘಟನೆ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಟ್ಟಂಗಿಹಾಳ ರಸ್ತೆಯಲ್ಲಿ ನಡೆದಿದೆ.ಆಕಾಶ ಕಲ್ಲವ್ವಗೋಳ (24), ಸುಭಾಸ ಬಗಲಿ (20) ಗಾಯಗೊಂಡ ಆರೋಪಿಗಳು.ಇಬ್ಬರು ಆರೋಪಿಗಳಿಗೆ ಕಾಲಿಗೆ ಗುಂಡು ತಗಲಿದ್ದು, ಆರೋಪಿಗಳನ್ನು ಜಿಲ್ಲಾ…

Read More

ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…

Read More

ಯುವಕನ ಶವ ಪತ್ತೆ: ಕೊಲೆ ಶಂಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ಕೊಲೆಯಾದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ತಾಲೂಕಿನ ಅರಕೇರಿ ಬಳಿ ಶುಕ್ರವಾರ ಪತ್ತೆಯಾಗಿದೆ.ಬಿಳಿನಸಿದ್ದ ದುಂಡಪ್ಪ ಒಡೆಯರ್ (33) ಶವವಾಗಿ ಪತ್ತೆಯಾಗಿರುವ ಯುವಕ.ಅರಿಕೇರಿ ಗ್ರಾಮದ ಕರಾಡ ದೊಡ್ಡಿಯ ರಸ್ತೆಯಲ್ಲಿ ಗುಪ್ತಾಂಗ, ಕತ್ತು ಹಾಗೂ ಇತರೆ ಭಾಗಗಳಿಗೆ ಗಾಯಗಳಾಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ಅರಕೇರಿ ಗ್ರಾಮದ ನಿವಾಸಿ ಬಿಳನಸಿದ್ದಅಪರಿಚಿತರಿಂದ ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ಕೊಲೆಯಾದ ಯುವಕನ ಸಂಬಂಧಿಕರ ಆಕ್ರಂದ್ರನ ಮುಗಿಲು ಮುಟ್ಟಿತ್ತು. ಪೊಲೀಸರು ಮುಂದಿನ…

Read More