ಸ್ವಂತ ಅಕ್ಕನ ಕೈಯಲ್ಲಿ ತಮ್ಮನ ಅಂತ್ಯ!

ಸಪ್ತಸಾಗರ ವಾರ್ತೆ,ಚಡಚಣ, ಜು. 11: ಕುಟುಂಬದೊಳಗಿನ ಕಲಹವೇ ರಕ್ತಸಿಕ್ತ ದುರಂತಕ್ಕೆ ಕಾರಣವಾದ ಬೆಚ್ಚಿಬೀಳಿಸುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಸಮೀಪ ಶನಿವಾರ ಸಂಜೆ ನಡೆದಿದೆ.ಗಂಡ–ಹೆಂಡತಿ ನಡುವಿನ ದೀರ್ಘಕಾಲದ ವೈಮನಸ್ಸಿನ ನಡುವೆ, ಸ್ವಂತ ಅಕ್ಕನೇ ತನ್ನ ತಮ್ಮನ ಹತ್ಯೆ ನಡೆಸಿದ ಆರೋಪ ಕೇಳಿಬಂದಿದ್ದು, ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಹಲಸಂಗಿ ಗ್ರಾಮದ ಬಾಬುಸಾ ಮಹಾದೇವ ಜಮಾದಾರ (35) ಕೊಲೆಯಾದ ದುರ್ದೈವಿ. ಘಟನೆಯಲ್ಲಿ ಅಪ್ಪಾಸಾಹೇಬ ಮುಂಕಾಸೆ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ…

Read More

ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸತ್ಯವೇಣಿ (38), ಅವರ ಪುತ್ರರಾದ ಹರಿವೆಂಕಟರಾಮ್ (20) ಹಾಗೂ ಜಶ್ವಂತ (18) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ (41) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಈ ಕುಟುಂಬದ KA-33 N-4689 ನೋಂದಣಿಯ ಕ್ರೆಟಾ ಕಾರನ್ನು ಹರಿವೆಂಕಟರಾಮ್ ಚಾಲನೆ ಮಾಡುತ್ತಿದ್ದರು. ಈ…

Read More

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ–ಬೈಕ್ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ನಗರದ ಹೊರವಲಯದ ಸೊಲ್ಲಾಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿ-50 (ಎನ್‌ಎಚ್-50)ರಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪಾದಚಾರಿ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ವಿಜಯಪುರ ಮೂಲದ ಭೂಷಣ್ ನಾಯಕ (24) ಹಾಗೂ ಗಗನ್ ಪರಮೇಶ (19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಬಿಲಾಲ್ ಜಾತಗಾರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಇಬ್ಬರೂ ಯುವಕರು…

Read More

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ನಗರದ ಚಪ್ಪರಬಂದ್ ಗಲ್ಲಿಯಲ್ಲಿ 36 ವರ್ಷದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.ಮೃತನನ್ನು ಉಮರಸಾಬ್ ಪಟೇಲ್ (36) ಎಂದು ಗುರುತಿಸಲಾಗಿದೆ. ಆರೋಪಿಗಳು ಕಬ್ಬಿಣದ ರಾಡ್ ಹಾಗೂ ಸ್ಕ್ರೂ (ಚೂಪಾದ ಕಬ್ಬಿಣದ ವಸ್ತು) ಬಳಸಿ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.ಉಮರಸಾಬ್ ಶನಿವಾರ ರಾತ್ರಿ ತನ್ನ ಕೆಲ ಗೆಳೆಯರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಇದೇ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಜಗಳಕ್ಕೆ…

Read More

ವಿಜಯಪುರದಲ್ಲಿ ಆಟೋ ಚಾಲಕನ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 20:ನಗರದ ಬಂಜಾರ ಕ್ರಾಸ್ ಸಮೀಪ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಹತ್ಯೆಯಾದ ವ್ಯಕ್ತಿಯನ್ನು ಖಾಜಾ ಅಮೀನ್ ದರ್ಗಾ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ ವಿಲಾಸ ನಡುವಿನಮನಿ (30) ಎಂದು ಗುರುತಿಸಲಾಗಿದೆ. ಕುಟುಂಬದ ನಿರ್ವಹಣೆಗಾಗಿ ಆಟೋ ಚಾಲನೆ ಮಾಡುತ್ತಿದ್ದ ವಿಲಾಸ ಅವರು ಬಂಜಾರ ಕ್ರಾಸ್ ಪ್ರದೇಶದಲ್ಲಿ ಇದ್ದ ವೇಳೆ ದುಷ್ಕರ್ಮಿಗಳ ದಾಳಿಗೆ ಗುರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವಿಲಾಸ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ…

Read More

ಜಮೀನು ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಆರು ಜನರ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 30:ಜಮೀನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಶುಕ್ರವಾರ ಸಂಜೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.ಚಂದು ನಿರಾಳೆ(56), ದುಂಡಪ್ಪ ನಿರಾಳೆ(65), ಶಿವಪುತ್ರ ನಿರಾಳೆ(60), ರಾಹುಲ್ ನಿರಾಳೆ(35), ಸಮರ್ಥ ನಿರಾಳೆ(24), ಶಬ್ಬೀರ್ ನದಾಫ್(50) ಕೊಲೆಯಾದವರು.ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಇತರ ಪೊಲೀಸ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ….

Read More

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು

ಸಪ್ತಸಾಗರ ವಾರ್ತೆ, ವಿಜಯಪುರ, ಏ. 14:ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ ದುರ್ಘಟನೆ ನಗರ ಹೊರ ವಲಯದ ಅಲಿಯಾಬಾದ ಬಳಿ ನಡೆದಿದೆ.ಗ್ರಾ.ಪಂ ಸದಸ್ಯ ರಾಜು ಕುರಿ ಎಂಬುವರು ಗುಂಡೇಟಿಗೆ ಬಲಿಯಾಗಿದ್ದಾರೆ.ದುಷ್ಕರ್ಮಿಗಳು ರಾಜುನ ಮೇಲೆ 6 ಸುತ್ತು ಗುಂಡು ಹಾರಿಸಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆಪಾಂಗರುನ ದೊಡ್ಡಿ ನಿವಾಸಿಯಾಗಿದ್ದ ರಾಜು ಕುರಿಯು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು…

Read More

ದೇವರನಿಂಬರಗಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಭೀಮನಗೌಡ ಬಿರಾದಾರ ಎಂಬುವರ ಮೇಲೆ ನಾಲ್ವರು ಮುಸುಕಧಾರಿ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.ಬಿರಾದಾರನಿಗೆ ತಲೆ ಹಾಗೂ ಎದೆಗೆ ಗುಂಡು ತಗುಲಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಬಿರಾದಾರ ಈತನು ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಹಾಗೂ ಬಲಗೈ ಭಂಟನಾಗಿದ್ದ ವ್ಯಕ್ತಿ.ಬಿರಾದಾರ ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್…

Read More

ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…

Read More

ಕೊಲೆ ಆರೋಪಿಗಳಿಬ್ಬರ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ನಿನ್ನೆಯಷ್ಟೇ ನಗರದಲ್ಲಿ ನಡೆದ ಸುಶೀಲ್ ಕಾಳೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ ನಡೆಸಿದಾಗ ಪೊಲೀಸರು ಪ್ರತಿಯಾಗಿ ಆರೋಪಿಗಳಿಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರ ಕಾಲುಗಳಿಗೆ ಗಾಯಗಳಾದ ಘಟನೆ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಟ್ಟಂಗಿಹಾಳ ರಸ್ತೆಯಲ್ಲಿ ನಡೆದಿದೆ.ಆಕಾಶ ಕಲ್ಲವ್ವಗೋಳ (24), ಸುಭಾಸ ಬಗಲಿ (20) ಗಾಯಗೊಂಡ ಆರೋಪಿಗಳು.ಇಬ್ಬರು ಆರೋಪಿಗಳಿಗೆ ಕಾಲಿಗೆ ಗುಂಡು ತಗಲಿದ್ದು, ಆರೋಪಿಗಳನ್ನು ಜಿಲ್ಲಾ…

Read More