ಪ್ರತಿಭಾವಂತ ವಿದ್ಯಾರ್ಥಿ ಹಾದಿಮನಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಜು. 11:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಸುಮಿತ ಶಿವಪುತ್ರ ಹಾದಿಮನಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೀಳಗಿಯಲ್ಲಿ ಸನ್ಮಾನಿಸಲಾಯಿತು.ಬೀಳಗಿ ನಗರದ ಗಾಂಧಿ ನಗರ ಬಡಾವಣೆಯ ವಿದ್ಯಾರ್ಥಿ ಹಾದಿಮನಿ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.99.04ರಷ್ಟು ಅಂಕ ಪಡೆದು ಕೀರ್ತಿ ತಂದಿದ್ದಾರೆ.ಈ ಪ್ರತಿಭಾವಂತ ವಿದ್ಯಾರ್ಥಿಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಅವರ…

Read More

ಅನಿಲ ಪೈಪ್‌ಲೈನ್ ಬಳಿ ಸುರಕ್ಷತೆ ಪಾಲಿಸಿ: ಥಿಂಕ್ ಗ್ಯಾಸ್ ಜಾಗೃತಿ ಅಭಿಯಾನ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜು.2:ಭೂಗತ ಅನಿಲ ಪೈಪ್‌ಲೈನ್‌ಗಳ ಸುರಕ್ಷತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಥಿಂಕ್ ಗ್ಯಾಸ್ ಸಂಸ್ಥೆ ಬಾಗಲಕೋಟೆ ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಶೇಷ ಸುರಕ್ಷತಾ ಜಾಗೃತಿ ಅಭಿಯಾನ ಆರಂಭಿಸಿದೆ.ಅನಿಲ ಪೈಪ್‌ಲೈನ್‌ಗಳ ಸಮೀಪ ಯಾವುದೇ ಉತ್ಖನನ ಕಾರ್ಯ ಕೈಗೊಳ್ಳುವ ಮುನ್ನ ಸಂಬಂಧಿತ ಇಲಾಖೆ ಹಾಗೂ ಥಿಂಕ್ ಗ್ಯಾಸ್ ಸಂಸ್ಥೆಯೊಂದಿಗೆ ಸಮನ್ವಯ ಸಾಧಿಸುವಂತೆ ಸರ್ಕಾರಿ ಇಲಾಖೆ, ಗುತ್ತಿಗೆದಾರರು, ಯುಟಿಲಿಟಿ ಸಂಸ್ಥೆಗಳು ಹಾಗೂ ಖಾಸಗಿ ಉತ್ಖನನ ಏಜೆನ್ಸಿಗಳಿಗೆ ಮನವಿ ಮಾಡಲಾಗಿದೆ. ಅನಧಿಕೃತ ಉತ್ಖನನದಿಂದ ಭೂಗತ ಅನಿಲ…

Read More

ಬಾಗಲಕೋಟೆಯಲ್ಲಿ ಜೂ. 15 ರಂದು ಸುಧಾರಿತ ನರರೋಗ, ಅಪಸ್ಮಾರ ಉಚಿತ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜೂ. 13:ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನರರೋಗ ಮತ್ತು ಅಪಸ್ಮಾರ (ಫಿಟ್ಸ್) ರೋಗಿಗಳಿಗೆ ಇಲ್ಲೊಂದು ಅತ್ಯುತ್ತಮ ಅವಕಾಶ ಲಭ್ಯವಾಗಿದೆ. ಜಾಗತಿಕ ಮಟ್ಟದ ಆರೋಗ್ಯ ಸೇವೆಗೆ ಹೆಸರಾಗಿರುವ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಜೂ. 15ರಂದು ಸುಧಾರಿತ ನರರೋಗ ಮತ್ತು ಅಪಸ್ಮಾರ ಚಿಕಿತ್ಸಾ ವಿಶೇಷ ಸಮಾಲೋಚನಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಜೂನ್ 15 ರಂದು ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಈ…

Read More

ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಏ. 3:ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಬಿಜೆಪಿಗೆ ಸೋಲಿನ ಭಯ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ…

Read More

ಕಾರಜೋಳ ಹೇಳಿಕೆ ಹಾಸ್ಯಾಸ್ಪದ:ಎಂಬಿಪಿ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಎ. 3:ಯುಕೆಪಿ ಯೋಜನೆ ಕುರಿತು ಎ. 8 ರಂದು ಬಹಿರಂಗವಾಗಿ ಚರ್ಚೆಗೆ ಬರುವಂತೆ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಹಾಕಿರುವ ಸವಾಲು ಹಾಸ್ಯಾಸ್ಪದವಾಗಿದೆ ಎಂದು ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ನಿಮಿತ್ತ ಭಗವತಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು, ವಿಧಾನ ಸಭೆ ಉಪಚುನಾವಣೆ ಪ್ರಚಾರ ಪ್ರಕ್ರಿಯೆ ಎ.7 ರಂದು ಸಂಜೆ ಮುಗಿಯುತ್ತದೆ. ಹೀಗಾಗಿ ದಿ. 8 ರಂದು…

Read More

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಮಾ. 23: ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಹಿರಿಯ ಶಾಸಕರ ಅಗಲಿಕೆಯಿಂದ ತೆರವಾಗಿ ಆಕಸ್ಮಿಕವಾಗಿ ಎದುರಾದ ಚುನಾವಣೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನಗಳೇ ಇದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.ಸೋಮವಾರ ಬಾಗಲಕೋಟೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಉಮೇದುವಾರಿಕೆ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ, 2028…

Read More

ಹೆಚ್.ವೈ. ಮೇಟಿಯವರ ಆತ್ಮಕ್ಕೆ ಶಾಂತಿ ದೊರೆಯಬೇಕಾದರೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ ಜನರು ಉಮೇಶ್ ಮೇಟಿಯವರಿಗೆ ಆಶೀರ್ವದಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಸಪ್ತಸಾಗರ ವಾರ್ತೆ,ಬಾಗಲಕೋಟೆ,ಮಾ.23:ಮಾಜಿ ಶಾಸಕ ದಿವಂಗತ ಹೆಚ್. ವೈ. ಮೇಟಿಯವರಿಗೆ ಗೌರವ, ಅವರ ಆತ್ಮಕ್ಕೆ ಶಾಂತಿ ದೊರೆಯಬೇಕಾದರೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ ಜನರು ಉಮೇಶ್ ಮೇಟಿಯವರಿಗೆ ಆಶೀರ್ವದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಸೋಮವಾರ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಯವರ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದು ನಂತರ ಕಾರ್ಯಕರ್ತರುಗಳನ್ನು ಉದ್ದೇಶಿಸಿ ಮಾತನಾಡಿದರು. ಮೇಟಿಯವರು ಜಾತ್ಯತೀತ ವ್ಯಕ್ತಿರಾಜ್ಯದಲ್ಲಿ ಎರಡು ಉಪಚುನಾವಣೆಗಳು ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ನಡೆಯುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ…

Read More

ಇದು ಧರ್ಮ ಹಾಗೂ ಅಧರ್ಮ, ಸತ್ಯ ಹಾಗೂ ಸುಳ್ಳಿನ ನಡುವಿನ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಮಾ. 23:“ಎರಡು ವಿಚಾರಕ್ಕೆ ಈ ಉಪಚುನಾವಣೆ ನಡೆಯಲಿದೆ. ಇದು ಧರ್ಮ ಹಾಗೂ ಅಧರ್ಮ, ಸತ್ಯ ಹಾಗೂ ಸುಳ್ಳಿನ ನಡುವಣ ಚುನಾವಣೆಯಾಗಿದೆ. ಬಿಜೆಪಿಯವರು ಏನಿದ್ದರೂ ಸುಳ್ಳು ಆಶ್ವಾಸನೆ ನೀಡುವುದು. ಆದರೆ ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ. ಬಸವಣ್ಣನವರ ನಾಡಿನಲ್ಲಿ ನುಡಿದಂತೆ ನಡೆಯುತ್ತೇವೆ. ಎಲ್ಲಾ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ಬಾಗಲಕೋಟೆ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ನಾಮಪತ್ರ ಸಲ್ಲಿಕೆ ಬಳಿಕ ಶಿವಕುಮಾರ್ ಅವರು…

Read More

ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯದಿಂದ ಶಾಸಕ ಚಿಮ್ಮನಕಟ್ಟಿಗೆ ಸನ್ಮಾನ

ಸಪ್ತಸಾಗರ ವಾರ್ತೆ, ಬಾದಾಮಿ, ಮಾ. 22ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರಿಗೆ ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯದ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಅವರ ಗೃಹ ಕಚೇರಿಯಲ್ಲಿ ಆಯೋಜಿಸಲಾಯಿತು.ವಿಧಾನಸಭಾ ಅಧಿವೇಶನದಲ್ಲಿ ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಎದುರಾಗುತ್ತಿರುವ ಸಮಸ್ಯೆಯನ್ನು ಚುಕ್ಕೆ ಗುರುತಿನ ಪ್ರಶ್ನೆಯ ಮೂಲಕ ಸದನದಲ್ಲಿ ಪ್ರಸ್ತಾಪಿಸಿದ್ದಕ್ಕಾಗಿ ಸಮುದಾಯದ ಮುಖಂಡರು ಮತ್ತು ಬಂಧುಗಳು ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಮಾತನಾಡಿ, ಸಿಳ್ಳೆಕ್ಯಾತ–ಕಿಳ್ಳೆಕ್ಯಾತರು ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯವಾಗಿದ್ದು, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ…

Read More

ಇರ್ಫಾನ್ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 25:ನಗರದ ಇರ್ಫಾನ್ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಪತ್ರಿಕೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಬೀಳಗಿ ಅವರಿಗೆ ಡಿ. 27 ರಂದು ಬೆಳಗ್ಗೆ 10:30ಕ್ಕೆ ದಾವಣಗೆರೆಯ ವಿದ್ಯಾನಗರ ಬಡಾವಣೆಯಲ್ಲಿ ಇರುವ ಜಿಲ್ಲಾ ಕನ್ನಡ ಪರಿಷತ್ ಕುವೆಂಪು ಕನ್ನಡ ಭವನದಲ್ಲಿ ನಡೆಯುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ 6ನೇ ರಾಜ್ಯ ಭಾವೈಕ್ಯತೆ ಸಮ್ಮೇಳನದಲ್ಲಿ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ…

Read More