ದುಡಿಯುವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದದ್ದು ಸಹಕಾರ ಚಳವಳಿ: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ 23: 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಸ್ವಾತಂತ್ರ್ಯ ಚಳವಳಿಕ ಜೊತೆ ಜೊತೆಗೇ ನಡೆದದ್ದು ನಮ್ಮ…

Read More

ಆ. 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- ಸಹಕಾರಕ್ಕೆ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ.22:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯ್ಕ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ…

Read More

ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

ಸಪ್ತಸಾಗರ ವಾರ್ತೆ,ಬೆಂಗಳೂರು ಆ.22:ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.ಬಾಲಭವನದಲ್ಲಿ ನಡೆದ “ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.*ಈ…

Read More

ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಆ 19:ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ “ವಿಶ್ವ ಛಾಯಾಗ್ರಾಹಕ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ “Love at First Sight” ಎಂದು…

Read More

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…

Read More