ದುಡಿಯುವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದದ್ದು ಸಹಕಾರ ಚಳವಳಿ: ಕೆ.ವಿ.ಪ್ರಭಾಕರ
ಸಪ್ತಸಾಗರ ವಾರ್ತೆ, ಬೆಂಗಳೂರು, ಆ 23: 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಸ್ವಾತಂತ್ರ್ಯ ಚಳವಳಿಕ ಜೊತೆ ಜೊತೆಗೇ ನಡೆದದ್ದು ನಮ್ಮ…


