ರೈಲುಗಳ ಸೇವೆ ಪುನರಾರಂಭ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಮಾ. 23:ವಂದಾಲ ಹಾಗೂ ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ (ಎಲ್‌ಸಿ ಸಂಖ್ಯೆ 62) ಕಾಮಗಾರಿಗಳ ಹಿನ್ನೆಲೆ ಭಾಗಶಃ ರದ್ದುಗೊಂಡಿದ್ದ ಕೆಳಕಂಡ ರೈಲುಗಳನ್ನು ಇದೀಗ ತಮ್ಮ ನಿಯಮಿತ ಮಾರ್ಗದಲ್ಲಿ ಎಂದಿನಂತೆ ಸಂಚರಿಸಲು ಪುನಃಸ್ಥಾಪಿಸಲಾಗಿದೆ.ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ–ವಿಜಯಪುರ ವಿಶೇಷ ರೈಲು, ಮಾರ್ಚ್ 24ರಂದು, ಬಾಗಲಕೋಟೆ–ವಿಜಯಪುರ ನಡುವಿನ ಭಾಗಶಃ ರದ್ದತಿ ಹಾಗೂ ಬಾಗಲಕೋಟೆಯಲ್ಲಿ ಅಂತ್ಯಗೊಳ್ಳುವಂತೆ ತಿಳಿಸಲಾಗಿತ್ತು. ಇದೀಗ ಈ ರೈಲು ತನ್ನ ಪೂರ್ಣ ನಿಯಮಿತ ಮಾರ್ಗವಾದ ಎಸ್‌ಎಸ್‌ಎಸ್ ಹುಬ್ಬಳ್ಳಿ–ವಿಜಯಪುರದವರೆಗೆ ಸಂಚರಿಸಲಿದೆ.ಅದೇ…

Read More

ರೈಲ್ವೆ ಗ್ರಾಹಕರಿಗೆ ಸಿಹಿ ಸುದ್ದಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಫೆ. 10: ರೈಲ್ವೆಗ್ರಾಹಕರಿಗೆ ಸಿಹಿ ಸುದ್ದಿ. ರೇಲ್ವೆ ಸೇವೆ ಎಲ್ಲವೂ ಒಂದೇ ಕಡೆ ಸಿಗುವಂತೆ ರೈಲ್ವೆ ಇಲಾಖೆ ರೈಲ್ಒನ್ ಸೂಪರ್ ಆ್ಯಪ್ ಅಭಿವೃದ್ಧಿ ಪಡಿಸಿದೆ.ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ ‘ರೈಲ್ಒನ್‘ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನು ಒದಗಿಸುತ್ತದೆ. ಈ ಅಪ್ಲಿಕೇಶನ್ ಹಲವಾರು ಪ್ರಯಾಣಿಕ ಸೌಲಭ್ಯಗಳನ್ನು ಒಂದೇ ಅಪ್ಲಿಕೇಶನ್’ನಲ್ಲಿ ಒಳಗೊಂಡಿದ್ದು, ರೈಲ್ವೆ ಪ್ರಯಾಣವನ್ನು…

Read More

ಕರ್ನಾಟಕವು ರೈಲ್ವೆ ಮೂಲ ಸೌಕರ್ಯದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಫೆ. 3:ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಮತ್ತು ನಿರಂತರ ಹೂಡಿಕೆಯಲ್ಲಿ ನಡೆದ ಐತಿಹಾಸಿಕ ಹೆಚ್ಚಳದಿಂದ ಕರ್ನಾಟಕವು ರೈಲ್ವೆ ಮೂಲಸೌಕರ್ಯದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೇಳಿದರು.ರೈಲ್ವೆ ಸಚಿವ ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ 2026-27ರ ಬಜೆಟ್ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು.2009–14ರ ಅವಧಿಯಲ್ಲಿ ₹835 ಕೋಟಿಯಾಗಿದ್ದ ರಾಜ್ಯಕ್ಕೆ ಸರಾಸರಿ ವಾರ್ಷಿಕ ರೈಲ್ವೆ ಬಜೆಟ್ ಹಂಚಿಕೆ, 2026–27ರಲ್ಲಿ ₹7,748…

Read More

ನೈಋತ್ಯ ರೈಲ್ವೆಯ 70ನೇ ರೈಲ್ವೆ ಸಪ್ತಾಹ ಆಚರಣೆ: ಸಾಧಕ ನೌಕರರು ಮತ್ತು ಘಟಕಗಳಿಗೆ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಜ. 24:ನೈಋತ್ಯ ರೈಲ್ವೆಯು ತನ್ನ 70ನೇ ರೈಲ್ವೆ ಸಪ್ತಾಹವನ್ನು ನಗರದ ಗದಗ ರಸ್ತೆಯಲ್ಲಿರುವ ಚಾಲುಕ್ಯ ರೈಲ್ವೆ ಸಂಸ್ಥೆಯಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸೇವೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ನೌಕರರು ಹಾಗೂ ಅತ್ಯುತ್ತಮ ಪ್ರದರ್ಶನ ನೀಡಿದ ವಿವಿಧ ವಿಭಾಗಗಳಿಗೆ ಈ ಸಂದರ್ಭದಲ್ಲಿ ಗೌರವ ಸಲ್ಲಿಸಲಾಯಿತು.ಕಾರ್ಮಿಕ ಅಧಿಕಾರಿ ಸೂರ್ಯ ಪ್ರಕಾಶ್ ಅವರು ಕಾರ್ಯಕ್ರಮದ ಸ್ವಾಗತ ಭಾಷಣ ಕೋರಿದರು. ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು,…

Read More