ಬಸವನ ಬಾಗೇವಾಡಿ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಭೇಟಿ
ಸಪ್ತಸಾಗರ ವಾರ್ತೆ,ವಿಜಯಪುರ, ನ.19 :ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಬಸವನ ಬಾಗೇವಾಡಿ ತಾಲೂಕಿನ ವಿವಿಧ ಕಚೇರಿಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.ತಾಲೂಕು ಆಡಳಿತ ಸೌಧದಲ್ಲಿರುವ ಭೇಟಿ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದ ಪ್ರಗತಿ ಪರಿಶೀಲನೆ ನಡೆಸಿದರು.ಕಚೇರಿಯ ವಿವಿಧ ವಿಭಾಗಗಳ ಬಾಕಿಯಿರುವ ಕಡತ-ವಹಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕಚೇರಿ ಕಾರ್ಯ ನಿಮಿತ್ತ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿದ್ದು, ಸಕಾಲದಲ್ಲಿ ಅವರ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಡಲು ಸೂಚನೆ ನೀಡಿದರು. ಅಟಲಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ,ಕಡತಗಳ…


