ಬಸವನ ಬಾಗೇವಾಡಿ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ನ.19 :ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಬಸವನ ಬಾಗೇವಾಡಿ ತಾಲೂಕಿನ ವಿವಿಧ ಕಚೇರಿಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.ತಾಲೂಕು ಆಡಳಿತ ಸೌಧದಲ್ಲಿರುವ ಭೇಟಿ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದ ಪ್ರಗತಿ ಪರಿಶೀಲನೆ ನಡೆಸಿದರು.ಕಚೇರಿಯ ವಿವಿಧ ವಿಭಾಗಗಳ ಬಾಕಿಯಿರುವ ಕಡತ-ವಹಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕಚೇರಿ ಕಾರ್ಯ ನಿಮಿತ್ತ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿದ್ದು, ಸಕಾಲದಲ್ಲಿ ಅವರ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಡಲು ಸೂಚನೆ ನೀಡಿದರು. ಅಟಲಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ,ಕಡತಗಳ…

Read More

ವಿವಿಧ ಯೋಜನೆಯಡಿ ಅನುದಾನವನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಿ -ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ, ವಿಜಯಪುರ,ನ.19:ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ನಿಗದಿಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಪ್ರಗತಿ ಸಾಧಿಸಬೇಕು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು.ಯಾವುದೇ ಕಾರಣಕ್ಕೂ ಬಿಡುಗಡೆಯಾದ…

Read More

22ರಂದು ಅಲೊಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 19: ಒಂದೇ ಸೂರಿನಡಿ ಅಲೊಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ನಗರದ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆಯಲ್ಲಿ ನವೆಂಬರ್ 22 ರಂದು ಶನಿವಾರ ನಡೆಯಲಿದೆ.ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗೆ ಈ ಶಿಬಿರ ನಡೆಯಲಿದ್ದು, ಅಲೋಪಥಿ ಚಿಕಿತ್ಸೆಗಳು, ಬೆಂಬಲಿತ ಸೇವೆಗಳು, ಆಯುರ್ವೇದ ಚಿಕಿತ್ಸೆಗಳು ಲಭ್ಯವಿರಲಿವೆ. ಈ ಶಿಬಿರದಲ್ಲಿ ಅಲೋಪತಿ ಚಿಕಿತ್ಸೆಗಳಾದ ವೈದ್ಯಕೀಯ…

Read More

ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ವಿಭಾಗಕ್ಕೆಜಮಖಂಡಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ನ.19:ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅಬ್ದುಲಪೀರಾ ರಜಾಕಸಾಬ ಜಮಖಂಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಹಾಗೂ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ ಅವರ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಅವರ ಹಾಗೂ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಆದೇಶದ ಮೇರೆಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ವಿಜಯಪುರ ಜಿಲ್ಲಾ…

Read More

ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರೀಯ ಪುರಸ್ಕಾರ: ವಿಜಯಪುರ ಜಿಪಂ ಸಿಇಒ ರಿಷಿ ಆನಂದಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರಮಟ್ಟದ ದಕ್ಷಿಣದ ರಾಜ್ಯಗಳಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಲಭಿಸಿದ್ದು, ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ “ರಾಷ್ಟ್ರೀಯ ಜಲ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ ಅವರು ಜಿಪಂ ಸಿಇಒ ರಿಷಿ ಆನಂದ….

Read More

ತಾಲೂಕು-ಜಿಲ್ಲಾಮಟ್ಟದ ವಿಶೇಷ ಚೇತನರ ಕ್ರೀಡಾಕೂಟ:ನೋಂದಣಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ಐದು ತಾಲೂಕುಗಳಲ್ಲಿ ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ ಆಯೋಜಿಸಲಾಗಿದೆ.ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ನವೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ವೈ.ಚಿಂಚಲಿ-ಮೊಬೈಲ ಸಂಖ್ಯೆ: 9449939580, ರವಿ ರಾಠೋಡ-ಮೊಬೈಲ ಸಂಖ್ಯೆ: 903555337, ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ಮಳಗೊಂಡ-ಮೊಬೈಲ ಸಂಖ್ಯೆ: 9632315492, ಪರಶುರಾಮ ಭೋಸಲೆ-ಮೊಬೈಲ ಸಂಖ್ಯೆ: 9972441464, ಸಿಂದಗಿ ತಾಲೂಕು…

Read More

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More

20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 18: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ ಸಂಯುಕ್ತಾಶ್ರಯದಲ್ಲಿ ವಿಶ್ವ ಮೂಲವ್ಯಾಧಿ ದಿನಾಚರಣೆಯ ಅಂಗವಾಗಿ ನವೆಂಬರ್ 20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7…

Read More

ಇನಕ್ಯೂಬೆಶನ್ – ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ,ನ.17: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಇನಕ್ಯೂಬೆಶನ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಿಕ್ಯಾಬ್ ಇನ್ ಸ್ಟಿಟ್ಯೂಟ್ ಆಫ್ ಇಂಜನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.ಸಿಡಾಕ್‌ನ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ ಮಾತನಾಡಿ, ಇಂಜಿನಿಯರಿಂಗ್ ಪದವಿಯ ನಂತರ ಸ್ವಂತ ಉದ್ಯಮ ಸ್ಥಾಪಿಸಲು ಪಡೆಯಬೇಕಾದ ಅಗತ್ಯ ವೃತ್ತಿ…

Read More

ಅಜಾದ್ ಅವರ ಕೊಡುಗೆ ಉನ್ನತ ಶಿಕ್ಷಣಕ್ಕೆ ಅಮೂಲ್ಯ: ಡಾ. ರಾಮು ಸಜ್ಜನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಮೌಲಾನಾ ಅಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ಮುದ್ದೇಬಿಹಾಳದ ಎಂ.ಜಿ.ವಿ.ಸಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಅಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ ಮೌಲಾನಾ ಅಜಾದ್ ಅವರ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಶಿಕ್ಷಣ…

Read More