ಮಾದಕ ದ್ರವ್ಯ-ವಸ್ತು ಕಡಿವಾಣಕ್ಕೆ ಶಾಲಾ-ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಮೂಲಕ ಜಾಗೃತಿ ಮೂಡಿಸಿ -ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.17: ಜಿಲ್ಲೆಯಲ್ಲಿ ಮಾದಕ ದ್ರವ್ಯ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಸ್ಥಾಪಿಸಿ, ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ದ್ರವ್ಯ-ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಶಾಲಾ ಕಾಲೇಜ್‍ಗಳಲ್ಲಿ ನಿರ್ಮಿಸಿದ…

Read More

ಸೆ. 20ರಂದು ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:220/110/11ಕೆ.ವಿ ಬಸವನ ಬಾಗೇವಾಡಿ ಸ್ವೀಕಾರ-ಕೇಂದ್ರದ 100 ಎಮ್.ವಿ.ಎ-1, 2 ಮತ್ತು 3 ಪರಿವರ್ತಕಗಳ ಮೇಲೆ ಬರುವ ಎಲ್ ಐ ಎಸ್‌ಗಳಾದ ಬಳೂತಿ, ಮಸೂತಿ, ಹನಮಾಪುರ ಮತ್ತು ಮುಳವಾಡ, 110ಕೆವ್ಹಿ ಚಿಮ್ಮಲಗಿ ಹಾಗೂ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ,ಮಟ್ಟಿಹಾಳ, ಮಲಘಾಣ,ರೋಣಿಹಾಳ, ಮುಕರ್ತಿಹಾಳ, ನಿಡಗುಂದಿ, ದಿಂಡವಾರ, ಕನಕಾಲ, ಉಕ್ಕಲಿ ಹಾಗೂ ನಂದಿಹಾಳ, ಉಪ ಕೇಂದ್ರಗಳಲ್ಲಿ ಹಾಗೂ 13ಕೆ.ವ್ಹಿ ಲಿಂಗದಳ್ಳಿ ಎಲ್.ಐ.ಎಸ್ ಹಾಗೂ 33ಕೆವ್ಹಿ ಮನಗೂಳಿ, ಮುತ್ತಗಿ, ಹೂ.ಹಿಪ್ಪರಗಿ, ದೇವರ ಗೆಣ್ಣೂರ…

Read More

ನಾಳೆ ಕುರುಬ ಸಮಾಜದ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ. 22ರಿಂದ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕುರುಬ ಸಮಾಜದ ಪೂರ್ವಭಾವಿ ಸಭೆಯನ್ನು ಸೆ. 18ರಂದು ಬೆಳಗ್ಗೆ 11-30 ಗಂಟೆಗೆ ಮಧುವನ ಹೋಟೆಲ್ ಸಭಾಂಗಣದಲ್ಲಿ ಕರೆಯಲಾಗಿದೆ.ಗಣತಿದಾರರು ತಮ್ಮ ಮನೆಗೆ ಬಂದಾಗ ಸರ್ಕಾರದಿಂದ ಸಾಮಾಜಿಕ, ಶಿಕ್ಷಣ, ಆರ್ಥಿಕ ಹಾಗೂ ಉದ್ಯೋಗ ಇತ್ಯಾದಿ ಸರ್ಕಾರದ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ನಮ್ಮ ಸಮಾಜದ ಬಂಧುಗಳು ಧರ್ಮ ಕಾಲಂ 8″ರಲ್ಲಿ ಹಿಂದೂ ಎಂದು…

Read More

ಸಚಿವ ಶಿವಾನಂದ ಪಾಟೀಲರನ್ನು ಅಭಿನಂದಿಸಿದ ಮಾಜಿ ಸಚಿವ ಎಸ್.ಅರ್. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17 : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವರಾದ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ…

Read More

ಬ್ಯಾಂಕ್ ದರೋಡೆ: ಶೀಘ್ರದಲ್ಲಿ ಆರೋಪಿಗಳ ಬಂಧನ- ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:ಚಡಚಣ ಎಸ್ ಬಿ ಐ ಬ್ಯಾಂಕ್ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಶೀಘ್ರದಲ್ಲಿ ದರೋಡೆಕೋರರನ್ನು ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಝಳಕಿ ಪ್ರವಾಸಿ ಮಂದಿರದಲ್ಲಿ ಸುದ್ದಿದಾರರಿಗೆ ಮಾಹಿತಿ ನೀಡಿ, ನಿನ್ನೆ ಸಾಯಂಕಾಲ6-30‌ ರಿಂದ 7-30 ರ ವೇಳೆ ದರೋಡೆ ನಡೆದಿದೆ. ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ ಘಟನೆ ನಡೆದಿದೆ.ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಬ್ಯಾಂಕ್ ಖಾತೆ ಮಾಡುವ ನೆಪದಲ್ಲಿ ಬಂದು ಬ್ಯಾಂಕಿನ ಒಳಗಡೆ ಕುಳಿತಿದ್ದ.ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ…

Read More

ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ಬೆಂಗಳೂರು ಇವರ ಮೂಲಕ ಶಿಶಿಕ್ಷು (ಅಪ್ರೆಂಟಿಶಿಪ್) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಐಟಿಐನಲ್ಲಿನ ಫಿಟ್ಟರ್, ಟರ್ನರ್, ಮಷಿನಸ್ಟ್, ಇಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ ಕಂ ಆಪರೇಟರ್ ಮತ್ತು ಎಮ್.ಆರ್.ಎಸಿ ಟ್ರೇಡಗಳಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು, ಜಿಲ್ಲಾ ಉದ್ಯೋಗಾಧಿಕಾರಿ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು https://apprenticeshipindia.gov.in ವೆಬ್‌ಸೈಟ್ ಮೂಲಕ…

Read More

ಇಗ್ನೋ: ಜುಲೈ ಆವೃತ್ತಿ ಪ್ರವೇಶಾತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.16: ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಜುಲೈ 2025 ಆವೃತ್ತಿಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ. ಜುಲೈ-2025ರ ಮರು ಪ್ರವೇಶಾತಿಗೆ ಪುನಃ ನೋಂದಣಿ Link://onlinerr.ignou.ac.in ಲಿಂಕ್ ಬಳಸಿಕೊಂಡು 200 ರೂ. ವಿಳಂಬ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಸಂಖ್ಯೆ: 08352-252006, email: rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮ ದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.16:ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು.ಆಸಕ್ತ…

Read More

ವಿಜಯಪುರ- ಚಿಕ್ಕಲಕಿ ಬಸ್ ಗೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ನಗರದಿಂದ ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರಕ್ಕೆ ಇಂದು ಮಂಗಳವಾರ ಯಕ್ಕುಂಡಿ‌ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಗರಿಸಲಾಗಿದ್ದ ಎರಡು ಬಸ್ಸುಗಳ ಸಂಚಾರಕ್ಕೆ ತಾಲೂಕು ಗ್ಯಾರಂಟಿ ಯೋಜನೆಗಳ‌ ಸಮಿತಿ‌ ಅಧ್ಯಕ್ಷ ಮಲ್ಲು ದಳವಾಯಿ ಮತ್ತು ಬ್ಲಾಕ್ ಕಾಂಗ್ರೆಸ್ ಈರಗೊಂಡ ಬಿರಾದಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲು ದಳವಾಯಿ, ಸಚಿವ ಎಂ. ಬಿ. ಪಾಟೀಲ‌ ಅವರ…

Read More

ಯುಕೆಪಿ 3ನೇ ಹಂತದ ಯೋಜನೆ: ಮುಳುಗಡೆಯಾಗುವ ಪ್ರತಿ ಎಕರೆ ಭೂಮಿಗೆ 30-40 ಲಕ್ಷ ಪರಿಹಾರ ನಿಗದಿ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.16:“ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.25 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂಸ್ವಾಧೀನ…

Read More