ಬಾಬು ಜಗಜೀವನ ರಾಮ ಸಮ ಸಮಾಜ ನಿರ್ಮಾಣದ ಹರಿಕಾರ-ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 5: ಹಸಿವು ಮುಕ್ತ ಭಾರತಕ್ಕೆ ಶ್ರಮಿಸಿದ ಬಾಬುಜಿ ಅವರು ಹಸಿರು ಕ್ರಾಂತಿಗೆ ಅಡಿಪಾಯ ಹಾಕಿ, ಸರ್ವ ಜನಾಂಗದ ಕಲ್ಯಾಣಕ್ಕೆ ಶ್ರಮಿಸಿ, ಸಮ ಸಮಾಜ ನಿರ್ಮಾಣಕ್ಕೆ ಬದುಕಿನುದ್ದಕ್ಕೂ ಹೋರಾಡಿದ್ದರು. ಅವರ ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ರವಿವಾರ ಬಾಬು ಜಗಜೀವನ ರಾಮ ಅವರ 119 ನೇ ಜಯಂತಿ ನಿಮಿತ್ತ ಹಮ್ಮಿಕೊಂಡ ಸಮತಾ ದಿವಸಕ್ಕೆ ಚಾಲನೆ ನೀಡಿ…


