ಪ್ರತಿಭಾವಂತ ವಿದ್ಯಾರ್ಥಿ ಹಾದಿಮನಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಜು. 11:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಸುಮಿತ ಶಿವಪುತ್ರ ಹಾದಿಮನಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೀಳಗಿಯಲ್ಲಿ ಸನ್ಮಾನಿಸಲಾಯಿತು.ಬೀಳಗಿ ನಗರದ ಗಾಂಧಿ ನಗರ ಬಡಾವಣೆಯ ವಿದ್ಯಾರ್ಥಿ ಹಾದಿಮನಿ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.99.04ರಷ್ಟು ಅಂಕ ಪಡೆದು ಕೀರ್ತಿ ತಂದಿದ್ದಾರೆ.ಈ ಪ್ರತಿಭಾವಂತ ವಿದ್ಯಾರ್ಥಿಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಅವರ…

Read More

ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆ ಅವರ ಜೀವನದ ಅವಿಭಾಜ್ಯ ಅಂಗವಾಗಬೇಕು. ಅವು ಇಡೀ ಜೀವನದ ಯಶಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ನಗರದ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ,…

Read More

ಎಸ್‌ ಐ ಆರ್‌ ಗೆ ಸಹಾಯವಾಣಿ ಕೇಂದ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್ ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ.ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ…

Read More

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ತುಳಸಿರಾಮ್ ಬನಸೋಡೆ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಜಿಲ್ಲೆಯ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಆರೋಪದ ಮೇರೆಗೆ ವಿಜಯಪುರ ನಗರದ ಗಣೇಶನಗರ ನಿವಾಸಿ, ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ *ತುಳಸಿರಾಮ್ ತಂದೆ ಪಂಡಿತ ಹರಿಜನ @ ಬನಸೋಡೆ (27) ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಕರ್ನಾಟಕ ಅಕ್ರಮ ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಮಾದಕ ದ್ರವ್ಯ ಅಪರಾಧಿಗಳು, ಜೂಜುಕೋರರು,…

Read More

ಆಷಾಢ ಮಾಸ ಅಂಗವಾಗಿ ನಾಳೆ ವಿಜಯಪುರದಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ವಿಜಯಪುರ ಸೈಕ್ಲಿಂಗ್ ಗ್ರೂಪ್ (ವಿಸಿಜಿ) ವತಿಯಿಂದ ಆಷಾಢ ಮಾಸದ ಅಂಗವಾಗಿ ಪಂಡರಪುರಕ್ಕೆ ವಿಶೇಷ ಸೈಕಲ್ ಯಾತ್ರೆಯನ್ನು ಜುಲೈ 11ರಂದು (ಶನಿವಾರ) ಆಯೋಜಿಸಲಾಗಿದೆ ಎಂದು ವಿಸಿಜಿ ಸಂಘಟನಾ ಕಾರ್ಯದರ್ಶಿ ಸೋಮಶೇಖರ ಸ್ವಾಮಿ ತಿಳಿಸಿದ್ದಾರೆ.ವಿಜಯಪುರದ ಬಿ.ಎಂ. ಪಾಟೀಲ ವೃತ್ತದಿಂದ ಶನಿವಾರ ಬೆಳಿಗ್ಗೆ 5.30ಕ್ಕೆ ಯಾತ್ರೆಗೆ ಚಾಲನೆ ದೊರೆಯಲಿದ್ದು, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ಚಾಲನೆ ನೀಡಲಿದ್ದಾರೆ. ವಿಸಿಜಿ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಉಪಸ್ಥಿತರಿರಲಿದ್ದಾರೆ.ಈ ಯಾತ್ರೆಯಲ್ಲಿ ಡಾ. ರವಿ ಚೌಧರಿ, ವಿಸಿಜಿ ಉಪಾಧ್ಯಕ್ಷ ಶಿವನಗೌಡ…

Read More

ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

“ಜನರು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ; ಈಗ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸುವ ಜವಾಬ್ದಾರಿ ನಮ್ಮದು.” “ಅಧಿಕಾರಿಗಳು ಜನರ ಮಧ್ಯೆ ಇರಬೇಕು; ಕಚೇರಿಗಳ ಗೋಡೆಗಳ ನಡುವೆ ಅಲ್ಲ.” “ಅಭಿವೃದ್ಧಿ, ಪಾರದರ್ಶಕತೆ ಮತ್ತು ಶಿಸ್ತು – ಸರ್ಕಾರದ ಮೂರು ಮೂಲಮಂತ್ರಗಳು.” ಸಪ್ತಸಾಗರ ವಾರ್ತೆ,ಬೆಳಗಾವಿ, ಜು. 9: ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಮತ್ತು ಅಧಿಕಾರಿಗಳ ಹೊಣೆಗಾರಿಕೆ ಕುರಿತು ಸ್ಪಷ್ಟ ಹಾಗೂ…

Read More

ನರೇಗಲ್–ರಟ್ಟಿಹಳ್ಳಿ ಹಿಂದೂ ಕುಟುಂಬಗಳಿಗೆ ₹4.50 ಲಕ್ಷ ಆರ್ಥಿಕ ನೆರವು: ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಸಪ್ತಸಾಗರ ವಾರ್ತೆ,ಹಾವೇರಿ, ಜು. 9: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ವ್ಯಾಪಾರಿ ಶಿವಾಜಿರಾವ್ ಬೈರೋಜಿರಾವ್ ಅವರ ಕುಟುಂಬಕ್ಕೆ ಹಾಗೂ ಹಾನಗಲ್ಲ ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಮನೆಗಳಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿ ಒಟ್ಟು ₹4.50 ಲಕ್ಷ ಆರ್ಥಿಕ ನೆರವು ನೀಡಿದರು.ರಟ್ಟಿಹಳ್ಳಿಯಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಶಿವಾಜಿರಾವ್ ಬೈರೋಜಿರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ ಯತ್ನಾಳ್, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ₹2.50 ಲಕ್ಷ ಪರಿಹಾರ…

Read More

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಪ್ತಸಾಗರ ವಾರ್ತೆ ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ…

Read More

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ; ಬೆಂಗಳೂರಿನಲ್ಲಿ ಆರೋಪಿ ಸೆರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ತಾನು ಡಿಎಸ್‌ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಪೊಲೀಸ್ ಹಾಗೂ ಇತರೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಜಿಲ್ಲೆಯ ಎಪಿಎಂಸಿ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವರಗೋಡದಿನ್ನಿ ಗ್ರಾಮದ ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್‌ಕುಮಾರ (31) ಎಂದು ಗುರುತಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲೂ ಆರೋಪ 2014ರಲ್ಲಿ…

Read More

‘ಮನೆ ಮನೆಗೆ’ ಎಂದ ಸರ್ಕಾರ… ‘ಶಿಬಿರಕ್ಕೆ ಬನ್ನಿ’ ಎಂದ ಅಧಿಕಾರಿಗಳು?:

ವೃದ್ಧರು, ಅಂಗವಿಕಲರು, ದಿನಗೂಲಿ ಕಾರ್ಮಿಕರಿಗೆ ಹೆಚ್ಚಿದ ಸಂಕಷ್ಟ ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ,ವಿಜಯಪುರ, ಜು. 4:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಚುನಾವಣಾ ಆಯೋಗದ ಉದ್ದೇಶ ಸ್ಪಷ್ಟ—ಪ್ರತಿಯೊಬ್ಬ ಅರ್ಹ ಮತದಾರನ ಮನೆ ಬಾಗಿಲಿಗೆ ತೆರಳಿ ಮಾಹಿತಿ ಪರಿಶೀಲಿಸಿ, ದಾಖಲೆಗಳನ್ನು ಸಂಗ್ರಹಿಸಿ, ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು. ಈ ಉದ್ದೇಶಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡುವ ಜವಾಬ್ದಾರಿಯನ್ನು ನೀಡಲಾಗಿದೆ.ಆದರೆ ವಿಜಯಪುರ ಸೇರಿದಂತೆ ಹಲವು ಭಾಗಗಳಿಂದ…

Read More