ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯ:ಹಿರೇಮಠ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2 : ಕಾರ್ಮಿಕರು ದೇಶದ ಆಸ್ತಿ, ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಅಗತ್ಯ. ಅಂತಹ ಸ್ಮಾರ್ಟ್ ಕಾರ್ಡ್ ಬಾಗಿಲಿಗೆ ಒದಗಿಸುವ ಕಾರ್ಯ ನಡೆಯುತ್ತಿರುವುದು ಸಂತಸದ ಸಂಗತಿ ಎಂದು ಸಿದ್ಧೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಹೇಳಿದರು.ನಗರದ ಜೋರಾಪುರ ಪೇಟೆಯ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಸಂಘಟಿತರಿಗೆ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ…

Read More

ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತ- ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ಅನುಭವ ಮಂಟಪವು ಶರಣ ಚಳವಳಿಯ ಹೃದಯವಾಗಿತ್ತು. ಇಲ್ಲಿ ಮಹಿಳೆಯರು ಮೌನ ಶ್ರೋತೃಗಳಾಗಿರಲಿಲ್ಲ. ಅವರು ತರ್ಕಕಾರ್ತಿಯರು, ಪ್ರಶ್ನಕರೂ ಮತ್ತು ವಚನ ರಚನಾಕಾರರೂ ಆಗಿದ್ದರು. ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಪುರುಷ ಶರಣರ ಮುಂದೆ ಧೈರ್ಯವಾಗಿ ಮಾತನಾಡಿದರು. ಹೀಗಾಗಿ ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತವಾಗಿದ್ದಾರೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 12ನೇ…

Read More

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ

ಸಪ್ತಸಾಗರ ವಾರ್ತೆ,ದಾವಣಗೆರೆ, ಏ. 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗುರುವಾರ ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಪೊಲೀಸರು ನೊಂದವರ ಭರವಸೆಯ ಆಶಾಕಿರಣ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು…

Read More

ಅಕ್ಕಮಹಾದೇವಿ ಕನ್ನಡ ಸಾಹಿತ್ಯದ ದೃವತಾರೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 2: ಅಕ್ಕಮಹಾದೇವಿ ಅಧ್ಯಾತ್ಮಿಕ ಸ್ವಾತಂತ್ರ್ಯದ ಸಂಕೇತ. ಅವರ ವಚನಗಳು ಕನ್ನಡ ಸಾಹಿತ್ಯದ ಅತ್ಯುನ್ನತ ಅನುಭಾವ ಕಾವ್ಯವಾಗಿದ್ದು, ಅವು ವೈರಾಗ್ಯ, ಭಕ್ತಿ ಮತ್ತು ಸ್ತ್ರೀವಾದದ ಮಿಶ್ರಣವಾಗಿವೆ.ಆಕೆಯ ವಚನಗಳು ಇಂದಿಗೂ ಪ್ರಸ್ತುತವಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ನಗರದ ಬಂಜಾರಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಕ್ಕಮಹಾದೇವಿ ಜಯಂತಿ ಆಚರಣೆಯಲ್ಲಿ ‘ಅಕ್ಕಮಹಾದೇವಿಯ ವಚನಗಳ ಪ್ರಸ್ತುತತೆ’ ಕುರಿತು ಅವರು ಮಾತನಾಡಿದರು.ಅಕ್ಕಳು ತನ್ನ ವಚನಗಳಲ್ಲಿ ಬುದ್ದಿಗಿಂತ ಭಾವಕ್ಕೆ,ಮಾತಿಗಿಂತ ಕ್ರಿಯೆಗೆ, ಅಧಿಕಾರಕ್ಕಿಂತ ಅಂತಃಕರಣಕ್ಕೆ ಹೆಚ್ಚಿನ…

Read More

ಸ್ವಯಂ ಗಣತಿ ಮಾಡಿಕೊಳ್ಳಲು ನಾಗರಿಕರಿಗೆ ಮೇಯರ್‌ ಎಂ. ಎಸ್.‌ ಕರಡಿ ಮನವಿ: ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಮೇಯರ್ ಹಾಗೂ ಉಪ ಮೇಯರ್ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1:ನಮ್ಮ ಜನಗಣತಿ, ನಮ್ಮ ಭವಿಷ್ಯ ಧ್ಯೇಯವಾಕ್ಯದಡಿ ದೇಶ ವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ 2027 ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪ‌ಮೇಯರ್ ಸುಮಿತ್ರಾ ಜಾಧವ ಬುಧವಾರ ಚಾಲನೆ ನೀಡಿದರು.ಮೇಯರ್ ಮಡಿವಾಳಪ್ಪ ಕರಡಿ ಅವರು ತಮ್ಮ ಸ್ವಯಂ ಗಣತಿ ಮಾಡುವುದರ‌ ಮೂಲಕ ನಗರ ವ್ಯಾಪ್ತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ಕೆ ಚಾಲನೆ ನೀಡಿ, ನಗರದ ಜನತೆ ಸ್ವಯಂ ಗಣತಿ ಮಾಡಿಕೊಳ್ಳಲು ಕರೆ ನೀಡಿದರು.‌ರಾಷ್ಟ್ರೀಯ…

Read More

ಶ್ರೀ ಪ್ರಸನ್ನೇಶ್ವರ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ. 1:ನಗರದ ಝೆಂಡಾಕಟ್ಟಿ ಹಳಕೇರಿ ಗಲ್ಲಿಯ ಗಾಯಿ ಚಾಳ್ ಬಳಿ ಇರುವ ಶ್ರೀ ಪ್ರಸನ್ನೇಶ್ವರ-ಶ್ರೀ ಪ್ರಸನ್ನಾಂಜನೇಯ ಹಾಗೂ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಬುಧವಾರ ಹನುಮ ಜಯಂತಿಯನ್ನುಯ ಸಂಭ್ರಮದಿಂದ ಆಚರಿಸಲಾಯಿತು.ಅದರಂಗವಾಗಿ ಬೆಳಿಗ್ಗೆ ಸುಪ್ರಭಾತದ ಬಳಿಕ ಪಂಚಾಮೃತ ಅಭಿಷೇಕ, ಅಲಂಕಾರ ಸೇವೆ, ಶ್ರೀ ಬಾಲ ಹನುಮನ ತೊಟ್ಟಿಲೋತ್ಸವ, ಶ್ರೀ ಸತ್ಯನಾರಾಯಣ ಪೂಜೆ ಜರುಗಿತು.ಶ್ರಿ ಪ್ರಸನ್ನೇಶ್ವರ ಸೇವಾ ಭಜನಾ ಮಂಡಳಿ ಸದಸ್ಯರಿಂದ ರಾಮನಾಮದ ಭಕ್ತಿ ಸಂಗೀತ ಸೇವೆ ಅತ್ಯಂತ ಸುಶ್ರಾವ್ಯವಾಗಿ ನಡೆದು ಭಕ್ತರ ಭಕ್ತಿಯ ಪರಾಕಾಷ್ಟೆ ಮೆರೆಯಿತು.ವಾಯುಪುತ್ರನ ತೊಟ್ಟಿಲೋತ್ಸವದ ಸಂದರ್ಭದಲ್ಲಿ…

Read More

ಏ. 4ರಂದು ವೈದ್ಯಕೀಯ ಕಾರ್ಯಾಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಕಿವಿ, ಮೂಗು, ಗಂಟಲು ವಿಭಾಗದಿಂದ ಅಲರ್ಜಿ ಕ್ಷೇತ್ರದ ಹೊಸ ಒಳನೋಟಗಳು ಕುರಿತು ನಿರಂತರ ವೈದ್ಯಕೀಯ ಶಿಕ್ಷಣ(CME) ಮತ್ತು ಕಾರ್ಯಾಗಾರ ಏಪ್ರಿಲ್ 4 ರಂದು ಶನಿವಾರ ನಡೆಯಲಿದೆ.ಬಿ.ಎಲ್‌.ಡಿ.ಇ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ 2ನೇ ಮಹಡಿಯ ಮಿನಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಖ್ಯಾತ ಅಲರ್ಜಿ ತಜ್ಞೆ ಡಾ. ಗಾಯತ್ರಿ…

Read More

ಬಿಎಲ್ ಡಿಇ ಸಿದ್ದೇಶ್ವರ ಶಿಕ್ಷಣ ಕಾಲೇಜಿನಲ್ಲಿ ಪಾಲಕರ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1 : ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ” ಪಾಲಕ-ಶಿಕ್ಷಕರ ಸಭೆ”ಯನ್ನು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಅತಿಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಆಗಮಿಸಿದ್ದು, ವಿದ್ಯಾರ್ಥಿಗಳ ಪ್ರಗತಿಯ ಕುರಿತು ಚರ್ಚಿಸಲಾಯಿತು. ಸಹ ಪ್ರಾಧ್ಯಾಪಕ ಡಾ.ಎಂ.ಎಸ್. ಹಿರೇಮಠ ಮಹಾವಿದ್ಯಾಲಯ ಬೆಳೆದು ಬಂದ ಬಗೆಯನ್ನು ತಿಳಿಸಿದರು. ಸಹ ಪ್ರಾಧ್ಯಾಪಕ ಡಾ.ಎಂ.ಬಿ. ಕೋರಿ ಮಹಾವಿದ್ಯಾಲಯದ ಸೌಲಭ್ಯಗಳ ಕುರಿತು ತಿಳಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಜೆ.ಎಸ್. ಪಟ್ಟಣಶೆಟ್ಟಿ ಮಹಾವಿದ್ಯಾಲಯವು ಹೊಂದಿರುವ ವಿವಿಧ ಘಟಕಗಳ ಕುರಿತು ಮಾತನಾಡಿದರು.ಸಹಾಯಕ…

Read More

ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲು ಜಿಲ್ಲಾಧಿಕಾರಿ‌ ಖಡಕ್ ಸೂಚನೆ:ಜಿಲ್ಲೆಯಲ್ಲಿ ತಾಪಮಾನ ಹಿನ್ನೆಲೆ ಬದಲಾದ ಸರ್ಕಾರಿ ಕಚೇರಿ ಸಮಯ

ಸಪ್ತಸಾಗರ ವಾರ್ತೆ,ವಿಜಯಪುರ, ಏ.1: 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆಯಾಗುತ್ತಿದ್ದಂತೆಯೇ, ಬುಧವಾರ ಬೆಳಗ್ಗೆಯೇ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ಕೃಷಿ ಇಲಾಖೆ ಜಂಟಿ‌ ನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ,ಅಧಿಕಾರಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು.ಕಚೇರಿ ಸಮಯ ಬದಲಾವಣೆ ಹಿನ್ನೆಲೆಯಲ್ಲಿ ಬುಧವಾರ ನಗರದ ವಿವಿಧ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿ…

Read More