ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More

ವಿಜಯಪುರದಲ್ಲಿ 300 ಮೀಟರ್ ಉದ್ದದ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…

Read More

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More

ತುಂಬಿದ ಇಬ್ರಾಹಿಂಪುರ ಐತಿಹಾಸಿಕ ‘ಹಿರೇಬಾವಿ’ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗ್ರಹಣ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಇದು ವಿಜಯಪುರ ನಗರದ ಮನಗೂಳಿ- ಬಸವನ ಬಾಗೇವಾಡಿ ರಸ್ತೆ ಪಕ್ಕದ ಇಬ್ರಾಹಿಂಪುರ ಬಡಾವಣೆಯಲ್ಲಿರುವ ಪ್ರಾಚೀನವಾದ ಐತಿಹಾಸಿಕ ಹಿರೇಬಾವಿ. ಇದನ್ನು ವಿಜಯಪುರದ ಎರಡನೇ ‘ತಾಜ್ ಬಾವಡಿ’ ಎಂದರೂ ತಪ್ಪಾಗಲಿಕ್ಕಿಲ್ಲ.ಇಬ್ರಾಹಿಂಪುರದ ಹಿರೇಬಾವಿ ನೋಡಿದ ಯಾರಿಗೇ ಆಗಲಿ ಥಟ್ಟನೆ ‘ತಾಜ್ ಬಾವಡಿ’ ಅವರ ನೆನಪಿಗೆ ಬರದೇ ಇರದು.ತಾಜ್ ಬಾವಡಿಯಂತೆಯೇ ವಿಶಾಲವಾಗಿದೆ ಆದಿಲಶಾಹಿ ಕಾಲದ ಈ ಹಿರೇಬಾವಿ. ನೂರಕ್ಕೂ ಅಧಿಕ ಕಟ್ಟೆಗಳು, ಹಲವು ಕಮಾನುಗಳಿರುವ ಅದ್ಭುತ, ಸುಸಜ್ಜಿತ ಹಾಗೂ ಅತ್ಯಾಕರ್ಷಕ ಕಟ್ಟಡವನ್ನು ಈ ಹಿರೇಬಾವಿ ಹೊಂದಿದೆ.ಈ…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More

ಸಹಕಾರ ವಲಯವು ಆರ್ಥಿಕ ವ್ಯವಸ್ಥೆಯ ಅಮೂಲ್ಯ ಕೊಂಡಿ: ಎಸ್.ಆರ್. ಪಾಟೀಲ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಆ. 10:ಸಹಕಾರ ವಲಯವು ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿಯೇ ಒಂದು ಅಮೂಲ್ಯ ಕೊಂಡಿಯಾಗಿದೆ. ಜನತೆಗೆ ಸಾಲ, ಉಳಿತಾಯ, ವಿಮೆ, ಕೌಟುಂಬಿಕ ಬೆಂಬಲ ಇವೆಲ್ಲವನ್ನೂ ಸಮರ್ಥವಾಗಿ ನೀಡುತ್ತಿರುವುದು ಸಹಕಾರ ಸಂಘಗಳ ಮಹತ್ವವನ್ನು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ, ಸೌಹಾರ್ದ ಸಹಕಾರ ಸಂಘಗಳು ನಂಬಿಕೆ ಮತ್ತು ಯಶಸ್ಸಿನ ನಿದರ್ಶನವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ಹೇಳಿದರು.ನವನಗರದ ಸೆಕ್ಟರ್ ನಂ.25ರಲ್ಲಿ ನೂತನ ಬಾಪೂಜಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಬಾಗಲಕೋಟೆ ಇದರ ಉದ್ಘಾಟನಾ ಸಮಾರಂಭ…

Read More

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು,…

Read More

ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More

ವಿಜಯಪುರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರು ತೀವ್ರ ತೊಂದರೆ ಅನುಭವಿಸಿದ್ದರು. ಈ ಮಧ್ಯೆ ಒಂದು ದಿನ ಮಾತ್ರ ಮಳೆ ನಿಂತು ಜನರು ಸೂರ್ಯನ ಮುಖ ಕಂಡಿದ್ದರು.ಶುಕ್ರವಾರ ಸಂಜೆ ನಗರ ಸೇರಿದಂತೆ ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲ ನಗರದಲ್ಲಿ ಧಾರಾಕಾರ ಮಳೆ ಸುರಿದು…

Read More

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…

Read More