ಬಿಸಿ ಊಟಕ್ಕೆ ಎಣ್ಣೆ, ತೊಗರಿ ಬೇಳೆ ವಿತರಿಸಿ: ಸಿಇಒಗೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 28: ಅಕ್ಷರ ದಾಸೋಹ ಯೋಜನೆಯಡಿಶಾಲೆಗಳಲ್ಲಿ ಮಧ್ಯಾಹ್ನ ಬಿಸಿ ಊಟಕ್ಕೆ ಮಕ್ಕಳಿಗೆ ಎಣ್ಣೆ, ತೊಗರಿ ಬೇಳೆ ವಿತರಿಸಬೇಕು. ಮೊಟ್ಟೆಗಳ ಖರೀದಿಮೊತ್ತ ಹೆಚ್ಚಳವಾಗಿದ್ದು, ದರ ಮರುನಿಗದಿಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದಅವರಿಗೆ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಅರ್ಜುನ ಲಮಾಣಿ, ಶೈಕ್ಷಣಿಕ ವರ್ಷ ಆರಂಭವಾಗಿ ಜೂನ ತಿಂಗಳು ಮುಗಿಯುತ್ತಾ ಬಂದರೂ ಶಾಲೆಗಳಿಗೆ ಬೇಳೆ ಹಾಗೂ ಎಣ್ಣೆಪೂರೈಕೆಯಾಗಿಲ್ಲ. ಮುಖ್ಯಗುರುಗಳು ಬೇಳೆ ಹಾಗೂ ಎಣ್ಣೆ…

Read More

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026:ಜೂನ್ 30 ರಿಂದ ಮನೆ-ಮನೆ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.28:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯು ಪ್ರಸ್ತುತ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 30 ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ ಎಂದು ವಿಜಯಪುರ ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ಜೂ.30 ರಿಂದ ಜು. 29 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಅವರು ಜಿಲ್ಲೆಯ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳು ಎನ್ಯೂಮರೇಷನ್ ಫಾರ್ಮ್ ಗಳನ್ನು…

Read More

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಸಿಎಂ ಡಿ ಕೆ ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.28:“2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ಭಾನುವಾರ ನಡೆದ ಎಐಟಿಯುಸಿ (ಇಂಟೆಕ್) 316 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.“ಇಂಟೆಕ್ ಮೂಲಕ ದೇಶದ ಶ್ರಮಿಕರ, ಕಾರ್ಮಿಕರ ಬಲ ಹೆಚ್ಚಾಗಿದೆ. ಯಾವುದೇ ರಾಜಕೀಯ ತೀರ್ಮಾನ ತೆಗೆದುಕೊಂಡರು ಕಾಂಗ್ರೆಸ್ ಕಾರ್ಯಕಾರಿ…

Read More

ಆಧ್ಯಾತ್ಮ ಭಾರತೀಯರ ಉಸಿರು: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 28:“ಜಗತ್ತಿಗೆ ವೇದೋಪನಿಷತ್ತುಗಳು ಹಾಗೂ ವಚನ ಸಾಹಿತ್ಯವನ್ನು ನೀಡಿದವರು ಭಾರತೀಯರು. ಆಧ್ಯಾತ್ಮ ನಮ್ಮ ಉಸಿರು, ಸಂಸ್ಕಾರಯುತ ಜೀವನ ನಮ್ಮ ಬದುಕಿನ ಬೆಳಕು. ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕಗಳಾಗಿದ್ದು, ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುವ ಶ್ರದ್ಧಾ ಕೇಂದ್ರಗಳಾಗಿವೆ” ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಅಭಿವೃದ್ಧಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಅಭಯಾಂಜನೇಯ ದೇವಾಲಯದ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ಬಡಾವಣೆಯ ದೇವಾಲಯಗಳಲ್ಲಿ…

Read More

ಸಾಧನೆ ಮಾಡುವ ಮನಸ್ಸಿದ್ದರೆ ಅಂಗ ವೈಕಲ್ಯ ಲೆಕ್ಕಕ್ಕೆ ಬರುವುದಿಲ್ಲ; ಬಸವರಾಜ ಉಮರಾಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 28:ದೇವರು ನನಗೆ ದೃಷ್ಠಿ ಕೊಟ್ಟಿದ್ದರೆ ಬಹುಶಃ ಇಂತಹ ಸಾಧನೆ ಮಾಡುವ ಧೈರ್ಯ ಮಾಡುತ್ತಿರಲಿಲ್ಲ. ನಮ್ಮಲ್ಲಿರುವಸಮಸ್ಯೆಗಳು ನಮ್ಮ ಸಾಧನೆಗೆ ಪೂರಕವಾಗಬೇಕೆ ಹೊರತು ಮಾರಕವಾಗಬಾರದು. ಸಾಧನೆ ಮಾಡುವಮನಸಿದ್ದರೆ ಸರ್ವ ಸಿದ್ಧಿಯಾಗುತ್ತದೆ ಎಂದು ಮಾನವ ಕಂಪ್ಯೂಟರ್ ಖ್ಯಾತಿಯ ಬಸವರಾಜ ಉಮರಾಣಿ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿಆಯೋಜಿಸಲಾಗಿದ್ದ ಒಂದು ದಿನದ ವಿಶೇಷ ಉಪನ್ಯಾಸಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಅವರು, ಗಣಿತ ಎನ್ನುವುದು ಹಲವರಿಗೆ ಕಬ್ಬಿಣದ ಕಡಲೆಯಾದರೆ ಕೆಲವರಿಗೆಅದು ಎಲ್ಲದಕ್ಕಿಂತಲೂ ಸಾಮಾನ್ಯವಾದ ವಿಷಯವಾಗಿ ಕಾಣುತ್ತದೆ.ಅದಕ್ಕೆ ಕಾರಣ ಆ ವಿಷಯದ…

Read More

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ: ಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂನ್ 27: “ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ. ಇದನ್ನು ಯಾರೂ ಸಹ ಮರೆಯಬಾರದು.‌ ಈ ಹಾದಿಯಲ್ಲಿಯೇ ನಾವೆಲ್ಲರೂ ನಡೆಯಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.ಯಲಹಂಕದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಒಕ್ಕಲಿಗರ ಸಮಿತಿ ಶನಿವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಿವಕುಮಾರ್ ಅವರು ಮಾತನಾಡಿದರು.“ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು ಕೆಂಪೇಗೌಡರು. 500 ವರ್ಷಗಳ ಹಿಂದೆ ಈ ಭೂಮಿಗೆ ಪೂಜೆ ಮಾಡಿ…

Read More

ಪೋಲಿಯೋ ಹನಿ ಜೀವಮಾನದ ರಕ್ಷಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 27: ಪೋಲಿಯೋ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ. ಲಸಿಕೆ, ಜಾಗೃತಿ ಮತ್ತು ಸ್ವಚ್ಛತೆಯ ಮೂಲಕ ನಾವು ಆರೋಗ್ಯಕರ ಸಮಾಜ ನಿರ್ಮಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡ ಪಲ್ಸ್ ಪೋಲಿಯೋ ಲಸಿಕೆಯ ಜಾಗೃತಿ ಜಾಥಾ ಉದ್ಧೇಶಿಸಿ ಅವರು ಮಾತನಾಡಿದರು.ಕೇವಲ ಎರಡು ಹನಿ ಪೋಲಿಯೊ ಲಸಿಕೆ ಮಗುವಿಗೆ ಜೀವಮಾನದ ರಕ್ಷಣೆ ನೀಡುತ್ತದೆ. ಭಾರತವನ್ನು…

Read More

ಕ್ರಿಕೆಟ್ ಒಗ್ಗಟ್ಟು ಮತ್ತು ಕ್ರೀಡಾ ಮನೋಭಾವ ಬೆಳೆಸುತ್ತದೆ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24:ಕ್ರಿಕೆಟ್ ಕ್ರೀಡೆಯು ತಂಡವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರ ಪಟ್ಟಣದಲ್ಲಿ ದಿ. ಬಿ.ಎಂ. ಪಾಟೀಲ ಸ್ಮರಣಾರ್ಥ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಅನ್ನು ಮಂಗಳವಾರ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ದಿ. ಬಿ.ಎಂ. ಪಾಟೀಲ ಅವರು ಶಿಕ್ಷಣ ಪ್ರೇಮಿಯಾಗಿದ್ದು, ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯುವಂತೆ…

Read More

ಮಳೆ ಅಭಾವ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ಸಚಿವ ಡಾ. ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜಿಲ್ಲೆಯಲ್ಲಿ ಈ ವರ್ಷ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಎದುರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು,…

Read More

ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ-ಸಚಿವ ಡಾ.ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜುಲೈ 2ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ ಮಳೆ ಅಭಾವದಿಂದ ಜಿಲ್ಲೆಯಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆ ಸೇರಿದಂತೆ…

Read More