ಎಸ್ಎಸ್ಎಲ್ಸಿ ಪರೀಕ್ಷಾ‌ ಕೇಂದ್ರ, ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾರ್ಚ್ 23: ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರೀಕ್ಷೆಗಳ ನೇರ ವೀಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ತಾಂತ್ರಿಕ ವ್ಯವಸ್ಥೆಗಳು ದೋಷ ರಹಿತವಾಗಿ ಕಾರ್ಯ ನಿರ್ವಹಿಸುವಂತೆ…

Read More

ದೇವರ ದಾಸಿಮಯ್ಯನವರ ವಚನಗಳ ಸಾರ ಸಮಾಜಕ್ಕೆ ದಾರಿ ದೀವಿಗೆ: ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.23:ಜೀವನ ಎಂಬ ರಥದಲ್ಲಿ ಭಕ್ತಿ ಎಂಬ ಕೀಲಿ ಪ್ರತಿಯೊಬ್ಬರಿಗೂ ಅತೀ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಇಂದಿನ‌ ಒತ್ತಡದ‌ ಬದುಕಿನಲ್ಲಿ‌ ಬಹುತೇಕರು ಭಕ್ತಿ‌ಮಾರ್ಗದಿಂದ‌ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಅದೆಷ್ಟೇ ಒತ್ತಡ ಇದ್ದರೂ ಪ್ರತಿಯೊಬ್ಬರೂ ಭಕ್ತಿ…

Read More

ಚೀಟಿ ಕಂಪನಿ :ಆಕ್ಷೇಪಣೆ ಆಹ್ವಾನ

ಸಪ್ತಸಾಗರವಾರ್ತೆ,ವಿಜಯಪುರ,ಮಾ.23:ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸದೇ ಇರುವ ಹಾಗೂ ಗುಂಪುಗಳನ್ನು ರಚಿಸದೇ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರುತಿಳಿಸಿದ್ದಾರೆ.ಈ ಪ್ರಕಟಣೆ ಹೊರಡಿಸಿದ 07 ದಿನದಲ್ಲಿ ಸಂಬಂಧಪಟ್ಟ ಚೀಟಿ ಕಂಪನಿಯ ಪೋರಮನ್‌ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಂಪರ್ಕಿಸಬಹುದಾಗಿದೆ.ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದರೆ ಗುಂಪುಗಳ ರಚಿಸದೆ ಇರುವಂತಹ ಕಂಪನಿಗಳ ಹೆಸರನ್ನು ಇಲಾಖೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಒಟ್ಟು 38 ಚೀಟಿ ನಿಧಿಗಳ ಕಂಪನಿಗಳಿದ್ದು…

Read More

ಅಮೆರಿಕ ಸಮ್ಮೇಳನದಲ್ಲಿ ಡಾ. ಅರುಣ ಇನಾಮದಾರ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 23:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೆರಿಕದಲ್ಲಿ ನಡೆಯಲಿರುವ ಅಮೆರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ‌ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.ಅಮೆರಿಕದಲ್ಲಿರುವ ಡೆನವರ್ ನಲ್ಲಿ ಈ ಸಮ್ಮೇಳನ ಮಾರ್ಚ 26 ರಿಂದ ಮಾರ್ಚ್31ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.ಇದೇ ವೇಳೆ, ಮಾರ್ಚ್ 25ರಂದು ಚಿಕ್ಯಾಗೋದ ಪ್ರತಿಷ್ಠಿತ ಇಲಿನಾಯಿಸ ವಿಶ್ವವಿದ್ಯಾಲಯದಲ್ಲಿ ಚಿಕ್ಕ ಮಕ್ಕಳಲ್ಲಿ ಚರ್ಮ ರೋಗ ವಿಷಯ ಕುರಿತು ಇನಾಮದಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೇ,…

Read More

ಆನೆ ಬೆಲೆ ಎತ್ತಿಗೆ, ಎತ್ತಿನ ಬೆಲೆ ಕುರಿಗೆ, ಕುರಿ ಬೆಲೆ ಕೋಳಿಗೆ, ಕೋಳಿ ಬೆಲೆ ಮನುಷ್ಯನಿಗೆ ಅಂದರೆ ಮನುಷ್ಯನಿಗೆ ಯಾವ ಕಿಮ್ಮತ್ತೂ ಉಳಿದಿಲ್ಲ:ಶಿವಯ್ಯ ಸ್ವಾಮೀಜಿಗಳ ಕಾಲಜ್ಞಾನ ಭವಿಷ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಶುದ್ಧ, ನಂಬಿಕೆ, ಕರ್ತವ್ಯ ಒಂದೆಡೆ ಸೇರಿದರೆ ಜಗತ್ತು ಉದ್ಧಾರವಾಗುತ್ತದೆ. ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ನಡೆದರೆ ಇಲ್ಲಿಯೂ ಇದ್ದಂತೆ. ಅಕ್ರಾಳ, ವಿಕ್ರಾಳ, ಕರಾಳ ಈ ಬಾರಿಯೂ ಇದ್ದದ್ದೇ, ಯುದ್ದ ಅಲ್ಲಿ ಅಷ್ಟೇ ಅಲ್ಲ ಇಲ್ಲಿಯೂ ಇದ್ದಂತೆಯೇ ಎಂದು ಕತಕನಹಳ್ಳಿಯ ಶ್ರೀ ಶಿವಯ್ಯ ಮಹಾಸ್ವಾಮೀಜಿ ಕಾಲಜ್ಞಾನದ ಹೇಳಿಕೆ ನುಡಿದರು.ಸುಕ್ಷೇತ್ರ ಕತಕನಹಳ್ಳಿಯಲ್ಲಿ ಶ್ರೀ ಗುರುಚಕ್ರವರ್ತಿ ಸದಾಶಿವ ಮುತ್ತ್ಯಾ ಅವರ ಜಾತ್ರಾ ಮಹೋತ್ಸವ ಪ್ರಯುಕ್ತ ಗುರು ಕರುಣೆಯ ಮೂಲಕ ಶ್ರೀ ಶಿವಯ್ಯ ಮಹಾಸ್ವಾಮೀಜಿ ಭವಿಷ್ಯದ ಕಾಲಜ್ಞಾನ ಹೇಳಿಕೆ…

Read More

ಸ್ತ್ರೀಪುರುಷರಿಬ್ಬರಿಗೂ ಸಮಾನ ಸ್ಥಾನಮಾನಗಳು ಇದ್ದಾಗ ಮಾತ್ರ ಸಮ ಸಮಾಜ ಕಟ್ಟಲು ಸಾಧ್ಯ-ಡಾ. ರಂಜಿತಾ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿನಿ ಚಂದನಾ ಶೃಂಗೇರಿ ಅವರು ಭರತನಾಟ್ಯ ಮಾಡುವುದರೊಂದಿಗೆ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.“ವೀರಾಂಗನ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ” ಪಡೆದಿದ್ದಕ್ಕಾಗಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಭಾರತಿ. ವಾಯ್.ಖಾಸನೀಸ ಮತ್ತು ಪ್ರೆಸಿಡೆನ್ಸಿ ಬಿ. ಇಡಿ ಕಾಲೇಜ್ ಪ್ರಾಚಾರ್ಯ ಡಾ.ಸುಮಾ. ಬೋಳರಡ್ಡಿ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಮುಖ್ಯ ಅತಿಥಿ ನ್ಯಾಯವಾದಿ ಡಾ.ರಂಜಿತಾ.ಕೆ.ಆರ್ ಅವರು ಮಾತನಾಡಿ, “ದಶಪುತ್ರ ಸಮ ಕನ್ಯಾ”…

Read More

ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯದಿಂದ ಶಾಸಕ ಚಿಮ್ಮನಕಟ್ಟಿಗೆ ಸನ್ಮಾನ

ಸಪ್ತಸಾಗರ ವಾರ್ತೆ, ಬಾದಾಮಿ, ಮಾ. 22ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರಿಗೆ ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯದ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಅವರ ಗೃಹ ಕಚೇರಿಯಲ್ಲಿ ಆಯೋಜಿಸಲಾಯಿತು.ವಿಧಾನಸಭಾ ಅಧಿವೇಶನದಲ್ಲಿ ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಎದುರಾಗುತ್ತಿರುವ ಸಮಸ್ಯೆಯನ್ನು ಚುಕ್ಕೆ ಗುರುತಿನ ಪ್ರಶ್ನೆಯ ಮೂಲಕ ಸದನದಲ್ಲಿ ಪ್ರಸ್ತಾಪಿಸಿದ್ದಕ್ಕಾಗಿ ಸಮುದಾಯದ ಮುಖಂಡರು ಮತ್ತು ಬಂಧುಗಳು ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಮಾತನಾಡಿ, ಸಿಳ್ಳೆಕ್ಯಾತ–ಕಿಳ್ಳೆಕ್ಯಾತರು ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯವಾಗಿದ್ದು, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ…

Read More

ಕದಂಬ ಸೈನ್ಯ ವತಿಯಿಂದನಾಡಗೀತೆ ಅರ್ಥ ಬರೆಯುವ ಸ್ಪರ್ಧೆ: ವಿವಿಧ ಕ್ಷೇತ್ರದಸಾಧಕರಿಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ನಾಡಗೀತೆ ಅರ್ಥ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಆರು ಶಾಲೆಯ ಒಂದನೂರ ಮೂವತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ವಿಜೇತರಾಗಿದ್ದರು. ಇವರಿಗೆ ಮಂಡ್ಯದ ಡಾ.ಹರ್ಡಿಕರ್ ಭವನದಲ್ಲಿ ಮಾರ್ಚ್ 11 ರಂದು ನಾಡಗೀತೆ ಆಥ೯ ಬರೆಯುವ ಸ್ಪರ್ಧೆ ವಿಜೇತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನುಪೂಜ್ಯ ಚೆನ್ನವೀರ ಮಹಾ ಸ್ವಾಮೀಜಿ ವಹಿಸಿಕೊಂಡಿದ್ದರು.ಈ ಕಾರ್ಯಕ್ರಮಕ್ಕೆ…

Read More

ವಿಜಯಪುರ: ಸಂಭ್ರಮದ ರಮಜಾನ್ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21 :ವಿಜಯಪುರ ಜಿಲ್ಲೆಯಾದ್ಯಂತ ಈದ್ – ಉಲ್- ಫಿತರ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಳೆದ ಒಂದು ತಿಂಗಳುಗಳಿಂದ ರೋಜಾ, ರಾತ್ರಿ ಹೊತ್ತು ವಿಶೇಷ ತರಾವೀಹ್ ನಮಾಜ್ ಸಲ್ಲಿಸಿದ ಮುಸ್ಲಿಂ ಬಾಂಧವರು ಶನಿವಾರ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು. ಹೊಸ ಬಟ್ಟೆ ಧರಿಸಿ, ಅತ್ತರ ಎಂಬ ಸುಗಂಧದ್ರವ್ಯ ಹಚ್ಚಿಕೊಂಡು, ಕಣ್ಣಿಗೆ ಸುರಮಾ ಹಚ್ಚಿಕೊಂಡು ನಮಾಜ್ ಸಲ್ಲಿಕೆಗೆ ಮಸಜೀದ್ ಹೆಜ್ಜೆ ಹಾಕುತ್ತಿರುವ ದೃಶ್ಯ ಕಂಡು ಬಂದಿತು.ವಿಜಯಪುರದ ದಖನಿ ಈದ್ಗಾ, ಆಲಂಗೀರ ಈದ್ಗಾ, ಜಾಮೀಯಾ ಮಸಜೀದ್, ಧಾತರಿ…

Read More

ಆಲಿಕಲ್ಲು ಮಳೆ:ಬೆಳೆ ಹಾನಿ ಸಮೀಕ್ಷೆಗ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದಾಗಿ ಉಂಟಾಗಿರುವ ಹಾನಿಯ ಕುರಿತು ಸಮಗ್ರ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ‌ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ…

Read More