ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲಾ ಓಬಿಸಿ ಮೋರ್ಚಾ ವತಿಯಿಂದ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ಎಂ. ನಾಗರಾಜ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ ಅವರನ್ನು ಅಭಿನಂದಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಪ್ರಾಧ್ಯಾಪಕರಾಗಿ ಹಾಗೂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಪ್ರೊ….

Read More

ನೀರಿಗಾಗಿ ಖಾಲಿ ಕೊಡಗಳೊಂದಿಗೆ ತೆಗ್ಗೆಹಳ್ಳಿ ಮಹಿಳೆಯರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 20: ತಾಲೂಕಿನ ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಸುಮಾರು 300 ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರಿಗಾಗಿ ಕೇವಲ ಒಂದು ಬಾವಿಯನ್ನೇ ಅವಲಂಬಿಸಬೇಕಾಗಿದೆ. ಈ ಬಾವಿಯಿಂದ ದಿನಕ್ಕೆ ಕೇವಲ 15 ನಿಮಿಷಗಳ ಕಾಲ ಮಾತ್ರ ನೀರು ಪೂರೈಕೆಯಾಗುತ್ತಿದೆ. ನಂತರ ನೀರಿನ ಅಗತ್ಯಕ್ಕಾಗಿ ಗ್ರಾಮಸ್ಥರು ಸುತ್ತಮುತ್ತಲಿನ ತೋಟಗಳಿಗೆ ತೆರಳಿ…

Read More

ಶಿಫಾಗೆ ಮತ್ತೊಂದು ಜಾಗತಿಕ ಗೌರವ: ರಷ್ಯಾದ ಪರಮಾಣು ಶಕ್ತಿ ವಿಶ್ವ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವಿಶ್ವ ಯುವ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಗಮನ ಸೆಳೆದಿದ್ದ ವಿಜಯಪುರದ ಕುಮಾರಿ ಶಿಫಾ ಜಮಾದಾರ ಅವರು ಇದೀಗ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ (IAEA) ಹಾಗೂ ರಷ್ಯಾ ಸರ್ಕಾರದ ಸಹಯೋಗದಲ್ಲಿ ರಷ್ಯಾದ ಆಬ್ನಿನ್ಸ್ಕ್ ನಗರದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಮಾಣು ಶಕ್ತಿಯ ಶಾಂತಿಯುತ ಬಳಕೆ, ಹಸಿವು ನಿವಾರಣೆ ಹಾಗೂ ಜಾಗತಿಕ ಅಭಿವೃದ್ಧಿಗೆ ಪರಮಾಣು…

Read More

ಸುಳ್ಳು ಫೈರಿಂಗ್ ಪ್ರಕರಣ ಬಯಲು – ದೂರುದಾರ ಸೇರಿ ಮೂವರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 19:ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಫೈರಿಂಗ್ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ದೊರೆತಿದ್ದು, ದೂರುದಾರನೇ ಸುಳ್ಳು ಕಥೆ ಸೃಷ್ಟಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಜೂ. 3ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 255/2026 ದಾಖಲಿಸಲಾಗಿತ್ತು. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ದಯವಂತ ಡೇರೆ ಅವರು, ತೊರವಿ ಗ್ರಾಮದ ಹದ್ದಿಯಲ್ಲಿರುವ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಮುಖ ಮುಚ್ಚಿಕೊಂಡು ಬಂದು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ ಎಂದು…

Read More

ಕ್ಯಾಂಪಸ್ ಸಂದರ್ಶನ:ಬಿಎಲ್ಡಿಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 18:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಜೂನ್ 16 ಮಂಗಳವಾರ ಮತ್ತು ಜೂನ್ 17 ಬುಧವಾರ ಎರಡು ದಿನ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 46 ಡಿಪ್ಲೋಮಾ ಮತ್ತು 48 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಧಾರವಾಡದ ನಿಡೆಕ್(NIDEK) ಸಂಸ್ಥೆ ಮತ್ತು ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಹಾಗೂ ಐಟಿಐ ವತಿಯಿಂದ ಆಯೋಜಿಸಲಾದ ಈ ಕ್ಯಾಂಪಸ್ ಸಂದರ್ಶನದಲ್ಲಿ ನಿಡೆಕ್ ಮುಖ್ಯ ವ್ಯವಸ್ಥಾಪಕ ಸೋಮಶೇಖರ, ವ್ಯವಸ್ಥಾಪಕ ಮಂಜುನಾಥ, ಮಾನವ ಸಂಪನ್ಮೂಲ ವಿಭಾಗದ ಚಂದನಾ ಹಾಗೂ ನಿಶ್ಮಿತಾ ಸಂದರ್ಶನ…

Read More

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ನೀಡಿ: ಸ್ವಾಮೀಜಿಗಳಿಂದ ಸಿಎಂಗೆ ಮನವಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.17:ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಟ್ರಸ್ಟ್ ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸ್ವಾಮೀಜಿಗಳು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.ಮುಖ್ಯಮಂತ್ರಿಗಳ ಸದಾಶಿವನಗರ ನಿವಾಸಕ್ಕೆ ಸ್ವಾಮೀಜಿಗಳು ಬುಧವಾರ ಭೇಟಿ ನೀಡಿ ಮನವಿ ಮಾಡಿದರು. ಸರ್ವಧರ್ಮ…

Read More

ಪ್ರೊ.ಭಗವಾನ್ ವಿರುದ್ಧ ಕಠಿಣ ಕ್ರಮಕ್ಕೆ ಸ್ವರಾಜ್ಯ ಸೇನಾ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಪ್ರೊ.ಕೆ.ಎಸ್.ಭಗವಾನ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಸ್ವರಾಜ್ಯ ಸೇನಾ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕಿರಣ ಕಾಳೆ, ಇಡೀ ವಿಶ್ವಕ್ಕೆ ಆದರ್ಶವಾಗಿರುವ ಶ್ರೀ ರಾಮನ ಬಗ್ಗೆ ಮತ್ತು ಹಿಂದೂ ಸಂಸ್ಕೃತಿ ಬಗ್ಗೆ ಪ್ರೊ. ಕೆ.ಎಸ್.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಖಂಡನೀಯ. ಚುನಾವಣೆ ಸಮಯದಲ್ಲಿ ನನ್ನ…

Read More

ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್ ನೀಡದ ಸರ್ಕಾರದ ಕ್ರಮ ಖಂಡನೀಯ: ಅಪ್ಪುರಾಜ್ ನಿಮಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಕರ್ನಾಟಕ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್‌ಗಳನ್ನು ನೀಡದೇ ಇರುವ ಸರ್ಕಾರದ ನೀತಿಯನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ತೀವ್ರವಾಗಿ ಖಂಡಿಸಿದ್ದಾರೆ.ರಾಜ್ಯದ ವಿವಿಧ ಭಾಗಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಜೀವನಪೂರ್ತಿ ದುಡಿದು ಖರೀದಿಸಿರುವ ಸಣ್ಣ-ಸಣ್ಣ ಗುಂಟಾ ಪ್ಲಾಟ್‌ಗಳಲ್ಲಿ ಮನೆ ನಿರ್ಮಿಸಿ ವಾಸಿಸಲು ಮುಂದಾಗಿದ್ದಾರೆ. ಆದರೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿದರೂ ಮೀಟರ್ ನೀಡದೇ ಅಧಿಕಾರಿಗಳು ಹಾಗೂ ಸರ್ಕಾರ…

Read More

ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದು- ಶ್ರೀನಿವಾಸ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17: ತಲೆತಲಾಂತರದಿಂದ ಬಂದ ಆಸ್ತಿಗಳನ್ನು ನಮ್ಮ ಹಿರಿಯರು ದಾನ ನೀಡಿದ್ದರ ಫಲವಾಗಿ ಆರಂಭಗೊಂಡ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿವೆ ಎಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಮುಖ್ಯ ಪ್ರಧಾನ ಆಯುಕ್ತರಾಗಿರುವ ವಿಜಯಪುರದ ಶ್ರೀನಿವಾಸ ಬಿದರಿ ಹೇಳಿದರು.ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಧಾನ ಆಯುಕ್ತರಿಂದ ಮುಖ್ಯ ಪ್ರಧಾನ ಆಯುಕ್ತರೆಂದು ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಅವರ ಸ್ನೇಹಿತರು, ಶಾಲಾ-ಕಾಲೇಜು ಸಹಪಾಠಿಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಜಯಪುರದ ದರ್ಬಾರ್, ಪಿಡಿಜೆ,…

Read More

ಸಮಾಜ ಕಾರ್ಯದಲ್ಲಿ ಕೌಶಲ್ಯ ಎಂಬುದು ಜ್ಞಾನವನ್ನು ಕ್ರಿಯೆಗೆ ತಿರುಗಿಸುವ ಸೇತುವೆ : ಸಂತೋಷ ಹಳೆಮನಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದಸಮಾಜ ಕಾರ್ಯ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಹಾಗೂ ವೃತ್ತಿ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ವೃತ್ತಿ ಮಾರ್ಗದರ್ಶನಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಂತೋಷ ಹಳೆಮನಿ ಮಾತನಾಡಿ, ಸಮಾಜ ಕಾರ್ಯ ಎಂದರೆ ಕೇವಲಪುಸ್ತಕದಲ್ಲಿರುವ ಸಿದ್ಧಾಂತವಲ್ಲ. ಅದು ಬದುಕಿನ ನಡುವೆ ಇಳಿದು, ಜನರ ನೋವಿಗೆ ಕಿವಿಯಾಗಿ, ಅವರ ಶಕ್ತಿಯಾಗುವ ಪ್ರಯೋಗ ಶಾಲೆ ಎಂದರು. ನಂತರ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆಪ್ರಸ್ತುತ ಉದ್ಯೋಗಾವಕಾಶಗಳು, ವೃತ್ತಿಪರ ರೆಸ್ಯೂಮ್ತಯಾರಿಕೆ, ಸಂದರ್ಶನ ಕೌಶಲ್ಯಗಳು, ಸಂವಹನ ಮತ್ತುವ್ಯಕ್ತಿತ್ವ…

Read More