ಭುಗಿಲು ಪುಸ್ತಕ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರದಲ್ಲಿ ಮರುಮುದ್ರಿತ “ಭುಗಿಲು” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಮತ್ತು ಮುಖ್ಯ ವಕ್ತಾರರಾಗಿ ಭುಗಿಲು ಪುಸ್ತಕದ ಸಂಪಾದಕೀಯ ಮಂಡಳಿಯ ಸದಸ್ಯರಾದ ದು.ಗು.ಲಕ್ಷ್ಮಣ ಅವರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಷಿ ಅವರು ಉಪಸ್ಥಿತರಿದ್ದರು.ಇಂದಿರಾಗಾಂಧಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯವನ್ನೆ ಧೂಳೀಪಟ ಮಾಡಿ ದೇಶಾದ್ಯಂತ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದರೆಂದು ತಿಳಿಸಿದರು.ಮುಖ್ಯ ಅತಿಥಿಗಳಾದ…

Read More

ತ್ಯಾಗ, ಬಲಿದಾನದ ಸ್ಮರಣೆಯೇ ಸ್ವಾತಂತ್ರೋತ್ಸವ- ಅಮರೇಶ ಸಾಲಕ್ಕಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17 :ನಾವು ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ದೇಶಕ್ಕಾಗಿ ನಿಸ್ವಾರ್ಥವಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನದ ಸ್ಮರಣೆಯಾಗಿದೆ ಎಂದು ಇತಿಹಾಸ ಉಪನ್ಯಾಸಕ ಅಮರೇಶ ಸಾಲಕ್ಕಿ ಹೇಳಿದರು.ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಎಸ್.ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅಷ್ಟು ಸುಲಭವಾಗಿ ಸಿಕ್ಕಿರುವುದಿಲ್ಲ. ಅದಕ್ಕಾಗಿ…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…

Read More

ಪ್ರತಿ ಗಣೇಶ ಮಹಾಮಂಡಳಿಗೆ ರೂ.5001 ನೆರವು: ಶಾಸಕ ಯತ್ನಾಳ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ ರೂ.5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಘೋಷಣೆ ಮಾಡಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯಲ್ಲಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ…

Read More

ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More

ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More

ವಿಜಯಪುರದಲ್ಲಿ 300 ಮೀಟರ್ ಉದ್ದದ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…

Read More

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More

ತುಂಬಿದ ಇಬ್ರಾಹಿಂಪುರ ಐತಿಹಾಸಿಕ ‘ಹಿರೇಬಾವಿ’ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗ್ರಹಣ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಇದು ವಿಜಯಪುರ ನಗರದ ಮನಗೂಳಿ- ಬಸವನ ಬಾಗೇವಾಡಿ ರಸ್ತೆ ಪಕ್ಕದ ಇಬ್ರಾಹಿಂಪುರ ಬಡಾವಣೆಯಲ್ಲಿರುವ ಪ್ರಾಚೀನವಾದ ಐತಿಹಾಸಿಕ ಹಿರೇಬಾವಿ. ಇದನ್ನು ವಿಜಯಪುರದ ಎರಡನೇ ‘ತಾಜ್ ಬಾವಡಿ’ ಎಂದರೂ ತಪ್ಪಾಗಲಿಕ್ಕಿಲ್ಲ.ಇಬ್ರಾಹಿಂಪುರದ ಹಿರೇಬಾವಿ ನೋಡಿದ ಯಾರಿಗೇ ಆಗಲಿ ಥಟ್ಟನೆ ‘ತಾಜ್ ಬಾವಡಿ’ ಅವರ ನೆನಪಿಗೆ ಬರದೇ ಇರದು.ತಾಜ್ ಬಾವಡಿಯಂತೆಯೇ ವಿಶಾಲವಾಗಿದೆ ಆದಿಲಶಾಹಿ ಕಾಲದ ಈ ಹಿರೇಬಾವಿ. ನೂರಕ್ಕೂ ಅಧಿಕ ಕಟ್ಟೆಗಳು, ಹಲವು ಕಮಾನುಗಳಿರುವ ಅದ್ಭುತ, ಸುಸಜ್ಜಿತ ಹಾಗೂ ಅತ್ಯಾಕರ್ಷಕ ಕಟ್ಟಡವನ್ನು ಈ ಹಿರೇಬಾವಿ ಹೊಂದಿದೆ.ಈ…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More