ಎಲ್ಲಿ ಮಹಿಳೆಯರಿಗೆ ಗೌರವವಿದೆಯೋ ಅಲ್ಲಿ ದೇವತೆಗಳು ವಾಸಿಸುತ್ತಾರೆ- ದಾನಮ್ಮ ತಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15 :ಮಹಿಳೆಯರನ್ನು ಪೂಜ್ಯನಿಯ ಭಾವದಿಂದ ನೋಡಬೇಕು. ಅವಳನ್ನು ಗೌರವಿಸಿದರೆ ದೇವತೆಗಳು ಪ್ರಸನ್ನರಾಗುತ್ತಾರೆ ಎಂದು ಶಿವಬಸವ ನಿಲಯದ ದಾನಮ್ಮತಾಯಿ ಹೇಳಿದರು.ಭಾನುವಾರ ನಗರದ ಸಾಯಿ ಪಾರ್ಕ್ ಗೀತಾ ಪಾಠಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಹಿಳೆ ಮನೆಯ ಒಳಗೂ ಮತ್ತು ಹೊರಗೂ ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತಾಳೆ. ಏನೇ ಕಷ್ಟ ಬಂದರೂ ಕುಟುಂಬ ನಿರ್ವಹಣೆ ಜೊತೆಗೆ ಉದ್ಯೋಗದಲ್ಲಿಯೂ ಕೂಡ ಎಲ್ಲರ ಮೆಚ್ಚುಗೆಗೆ ಪಾತ್ರಳಾಗುತ್ತಾಳೆ. ಹಾಗಾಗಿ ಸಮಾಜ ಅವಳಿಗೆ ಇನ್ನೂ ಹೆಚ್ಚಿನ ಅವಕಾಶವನ್ನು ಕಲ್ಪಿಸಬೇಕಾಗಿದೆ ಎಂದರು.ಕಾರ್ಯಕ್ರಮದಲ್ಲಿ…

Read More

ವಿಶ್ವ ಭಾಷಣ ದಿನ ಆಚರಿಸಿದ ಬಂಡೆ ಸಹೋದರಿಯರು

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15: ಪ್ರತಿ ವರ್ಷ ಮಾರ್ಚ್ 15 ರಂದು ವಿಶ್ವ ಭಾಷಣ ದಿನವನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 1 ನೇ ವರ್ಗದ ವಿದ್ಯಾರ್ಥಿಗಳಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಭಾಷಣ ಮಾಡಿ ಗಮನ ಸೆಳೆದರು.ಶಕ್ತಿಯುತ ಪದಗಳನ್ನು ಬಳಸುವದರಿಂದ ಭಾಷಣಗಳು ಜನರ ಮೇಲೆ ಗಾಢವಾಗಿ ಪ್ರಭಾವ ಬೀರುತ್ತವೆ.ಪ್ರಜಾಪ್ರಭುತ್ವ, ಉತ್ತಮ ಆಡಳಿತ ಮತ್ತು ಮಾನವ ಹಕ್ಕುಗಳು, ಸಮಾಜದಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯನ್ನು ಉತ್ತೇಜಿಸಿ, ಜನರ ನಡುವಿನ ಬಾಂಧವ್ಯವನ್ನು ಬಲಪಡಿಸುವುದು ವಿಶ್ವ ಭಾಷಣ ದಿನದ ಉದ್ಧೇಶವಾಗಿದೆ.ಹೊಸ ವಿಚಾರಗಳನ್ನು…

Read More

ಭೀಮಾನದಿಯಲ್ಲಿ ಯುವಕ ನೀರು ಪಾಲು

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15:ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆಇಂಡಿ ತಾಲೂಕಿನ ಪಡನೂರು ಬಳಿಯ ಭೀಮಾನದಿಯಲ್ಲಿ ಭಾನುವಾರ ನಡೆದಿದೆ.ಪಡನೂರು ಗ್ರಾಮದ ಅನೀಲಕುಮಾರ ಪೂಜಾರಿ ನೀರು ಪಾಲಾದ ಯುವಕ.ಇಂದು ಬೆಳಿಗ್ಗೆ ನದಿಯಲ್ಲಿ ಈಜಲು ತೆರಳಿದ್ದ ಯುವಕ ಪೂಜಾರಿ ನೀರಲ್ಲಿ ನಾಪತ್ತೆಯಾಗಿದ್ದಾನೆ.ಅನೀಕುಮಾರನಿಗಾಗಿ ಗ್ರಾಮಸ್ಥರಿಂದ ಶೋಧ ಕಾರ್ಯ ಕೈಗೊಂಡಿದ್ದಾರೆ.ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಮೋಟರ್ ಬೋಟ್ ಮೂಲಕ ಅನೀಲಕುಮಾರನಿಗಾಗಿ ಶೋಧನೆ ಕಾರ್ಯ ಕೈಗೊಂಡಿದ್ದಾರೆ.ಅನೀಲಕುಮಾರ ಇನ್ನೂ ಪತ್ತೆಯಾಗಿಲ್ಲ.ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.ಇಂಡಿ ಗ್ರಾಮೀಣ ಪೊಲೀಸ್ ಠಾಣಾ…

Read More

ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ: ಜಿಪಂ ಉಪಕಾರ್ಯದರ್ಶಿ ಪ್ರಕಾಶ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15 :ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ‌ ಪ್ರಕಾಶ ವಡ್ಡರ ಆವರು ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದರು.ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು…

Read More

ಬಾಬಾನಗರ ಬಳಿ ಎರಡೂವರೆ ವರ್ಷದಲ್ಲಿ ಡ್ಯಾಂ ನಿರ್ಮಾಣ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಮಾ. 14:ಬಾಬಾನಗರ ಬಳಿ ಎರಡೂವರೆ ವರ್ಷದಲ್ಲಿ ಡ್ಯಾಂ ನಿರ್ಮಾಣವಾಗಲಿದ್ದು, ಇದರಿಂದ ತಿಕೋಟಾ ಭಾಗದ ರೈತರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ಬಾಬಾನಗರ ಬಳಿ ಡ್ಯಾಂ‌ ನಿರ್ಮಾಣಕ್ಕೆ ಕಾರಣರಾದ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ‌ ಅವರನ್ನು ರೈತರು ಅಭಿನಂದನೆ ಕಾರ್ಯಕ್ರಮ ಆಯೋಜಿಸಿ ಮಣುಕ(ಒಣದ್ರಾಕ್ಷಿ) ಹಾರದಿಂದ ಸನ್ಮಾನಿಸಿ ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳ‌ನ್ನು ಸಮರ್ಪಿಸಿ…

Read More

ಸ್ಪಂದನಾ ಹಾಸ್ಪಿಟಲ್ ನಲ್ಲಿ ಹೆಣ್ಣು ಮಗು ಜನಿಸಿದರೆ ಉಚಿತ ಚಿಕಿತ್ಸೆ

ಸಪ್ತಸಾಗರ ವಾರ್ತೆ,ಇಂಡಿ, ಮಾ. 14 : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸ್ಪಂದನಾ ಆಸ್ಪತ್ರೆಯಲ್ಲಿ ಮಾ. 22 ರಿಂದ ಒಂದು ವರ್ಷದ ಅವಧಿ ವರೆಗೆ ಹೆಣ್ಣು ಮಗು ಜನಿಸಿದರೆ ಸಹಜ ಹೆರಿಗೆ ಹಾಗೂ ಸಿಜರಿನ್ ಹೆರಿಗೆಯನ್ನು ಸಂಪೂರ್ಣ ಉಚಿತವಾಗಿ ಮಾಡಲಾಗುವುದು ಎಂದು ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಲಕ್ಷ್ಮಿಕಾಂತ ಮೇತ್ರಿ ಹೇಳಿದರು.ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ಇರುವ ಸ್ಪಂದನಾ ಆಸ್ಪತ್ರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರು, ಅಸಂಘಟಿತ ಕಟ್ಟಡ ಕಾರ್ಮಿಕರು, ಬಿಪಿಎಲ್, ಎಪಿಎಲ್, ಸಾಮಾನ್ಯ…

Read More

ಸರ್ಕಾರವು ಜಮೀನು ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ – ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 14:ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮಿದೇವಿ, ಶ್ರೀ‌ ಈಶ್ವರ, ಶ್ರೀ ನಂದಿ ಮತ್ತು ಶ್ರೀ ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಯುಕೆಪಿ 3ನೇ ಹಂತದ ಭೂಸ್ವಾಧೀನವಾಗಲಿರುವ ಜಮೀನುಗಳ ರೈತರಿಗೆ ಒಪ್ಪಂದದಂತೆ ಪರಿಹಾರ…

Read More

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 14: ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಅವರ ಯಶಸ್ಸಿಗೆ ಸಹಾಯ ಮಾಡಬೇಕು ಎಂದು ಇನ್ನರ್ ವೀಲ್ ಕ್ಲಪ್ ಅಧ್ಯಕ್ಷೆ ಮತ್ತು ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಉಜ್ವಲಾ ಎ. ಸರನಾಡಗೌಡ ಹೇಳಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಗುರುವಾರ ಸಬಲಾ – ಮಹಿಳಾ ಸಬಲೀಕರಣ ಘಟಕ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ…

Read More

ಸಪ್ತಸಾಗರ ಸಂಪಾದಕ ರುದ್ರಪ್ಪ ಆಸಂಗಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಮಾ. 14:ಸಪ್ತಸಾಗರ ದಿನ ಪತ್ರಿಕೆ ಸಂಪಾದಕ ಹಾಗೂ ಸಂಜೆವಾಣಿ ಜಿಲ್ಲಾ ವರದಿಗಾರ ರುದ್ರಪ್ಪ ಆಸಂಗಿ ಸೇರಿದಂತೆ ರಾಜ್ಯದ 31 ಗಣ್ಯರಿಗೆ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ಶುಕ್ರವಾರ ಸಂಜೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ವಿಜಯಪುರದ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು 4 ದಶಕಗಳ ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿರುವುದನ್ನು ಪರಿಗಣಿಸಿ ಮಾಧ್ಯಮ ಅಕಾಡೆಮಿಯ 2025ನೇ…

Read More

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 13:ಬದುಕೆಂಬ ಆಟದಲ್ಲಿ ಹಲವು ತಿರುವುಗಳಿದ್ದು, ಒಂದು ಕೆಟ್ಟ ಘಳಿಗೆಯಲ್ಲಿ ಅಂಟಿಕೊಂಡ ದುಶ್ಚಟ ಕ್ಷಣಿಕ ತೃಪ್ತಿ ನೀಡುತ್ತೆ ವಿನಃ ನಮ್ಮ ಬದುಕಿಗೆ ಸ್ಫೂರ್ತಿ ನೀಡಲ್ಲ. ಮಾದಕ ವ್ಯಸನಗಳಿಗೆ ಬಲಿಯಾಗದೇ ಇಂದಿನ ಯುವಕರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಜುಮನಾಳ ಗ್ರಾಮದ ಜಟ್ಟಿಂಗೇಶ್ವರ ಗುಡಿಯಲ್ಲಿ ವಿಜಯಪುರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಎನ್ ಎಸ್ ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಜರುಗಿದ 2025-26…

Read More