ಜ. 9ರಂದು ಸಿಎಂರಿಂದ ಚೆನ್ನಮ್ಮ ಮೂರ್ತಿ ಅನಾವರಣಕ್ಕೆ ನ್ಯಾಯವಾದಿ ಶ್ರೀಶೈಲ ಮುಳಜಿ ವಿರೋಧ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 5 :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 9ರಂದು ವೀರ ರಾಣಿ ಚೆನ್ನಮ್ಮಳ ಮೂರ್ತಿ ಅನಾವರಣ ಮಾಡಬಾರದು ಎಂದು ಲಿಂಗಾಯತ ಪಂಚಮಸಾಲಿ ವಕೀಲ ಪರಿಷತ್ತಿನ ರಾಜ್ಯ ಸಂಚಾಲಕ ಹಾಗೂ ನ್ಯಾಯವಾದಿ ಶ್ರೀಶೈಲ ಮುಳಜಿ ಅವರು ಹೇಳಿದ್ದಾರೆ.ಸೋಮವಾರ ನಗರದ ಕಿತ್ತೂರರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಜನೇವರಿ 9 ರಂದು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಕಿತ್ತೂರರಾಣಿ ಚೆನ್ನಮ್ಮ ಅವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚೆನ್ನಮ್ಮ…


