ಮಹಿಳೆಗೆ ಎಲ್ಲ ಕ್ಷೇತ್ರದಲ್ಲೂ ಸಾಧನೆ ಗರಿ: ಸಿದ್ದಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 10 : ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ಉನ್ನತವಾದ ಸಾಧನೆಯ ನಗೆ ಬೀರಿದ್ದಾಳೆ ಎಂದು ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಿಗೇರಿ ಹೇಳಿದರು.ವಿಜಯಪುರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಸಹಯೋಗದಲ್ಲಿ ಆಯೋಜಿಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಅಂದು ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಳು. ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸ್ವ ಸ್ವಾಮರ್ಥ್ಯದ ಮೇಲೆ ಇಂದು ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾಳೆ….

Read More

ಮಾ.18 ರಿಂದ ಏ.2ರವರಿಗೆ ಜಿಲ್ಲೆಯಾದ್ಯಂತಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪಾರದರ್ಶಕ ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ ಆನಂದ‌ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಮಾ.10:ಮಾರ್ಚ್ 18 ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಸೂಚನೆ ನೀಡಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಹಾಗೂ ನಿರ್ವಹಣೆ ಕುರಿತ…

Read More

ಬಿಎಲ್ ಡಿಇ ಡೀಮ್ಡ್ ವಿವಿ ಕಾನೂನು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 10: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ‌ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು‌ ಸನ್ಮಾನಿಸಲಾಯಿತು.ಸೋಮವಾರ ನಡೆದ ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಸಿಂಧು ಪೋತದಾರ‌ ಪಾಲ್ಗೊಂಡು ಮಾತನಾಡಿದರು.ಮಹಿಳೆಯರು ಧೈರ್ಯದಿಂದ ಮುನ್ನಡೆಯಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು‌ ಎಂದು‌‌ ಹೇಳಿದ ಅವರು, ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ಸನ್ಮಾನಿಸುವ ಈ ಪ್ರಯತ್ನವನ್ನು ಪ್ರಶಂಸಿಸಿದರು.ಕಾನೂನು‌ ಶಾಲೆಯ ಪ್ರಾಚಾರ್ಯ ಡಾ. ರಘುವೀರ…

Read More

ಮಾ.23ರಂದು ಅಂಚೆ ಅದಾಲತ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.10:ಅಂಚೆ ವಿಭಾಗದ 2025-26ನೇ ಸಾಲಿನ 4ನೇ ತ್ರೈಮಾಸಿಕ ಅಂಚೆ ಅದಾಲತ್ ಕಾರ್ಯಕ್ರಮ ಮಾ.23 ರಂದು ಮಧ್ಯಾಹ್ನ 3 ಗಂಟೆಗೆ ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಬಬಲೇಶ್ವರ, ಬಸವನ ಬಾಗೇವಾಡಿ,ಚಡಚಣ, ದೇವರಹಿಪ್ಪರಗಿ, ಇಂಡಿ, ಕೊಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟೆ,ತಿಕೋಟಾ, ಆಲಮೇಲ ಹಾಗೂ ವಿಜಯಪುರ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗಳಿಗೆ ಸಲಹೆ-ಸೂಚನೆ ಹಾಗೂ ದೂರುಗಳನ್ನು ಅಂಚೆ ಅದಾಲತ್‍ನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ಮಾ. 16ರೊಳಗೆ ಯಾವುದೇ ಅಂಚೆ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಇಂತಹ…

Read More

ಡಾ. ಅಂಬೇಡ್ಕರ್‌ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 9:ವಿಜಯಪುರ ಪವಿತ್ರ‌ ಜಿಲ್ಲೆ.‌ ಸಂವಿಧಾನ ಶಿಲ್ಪಿ ಡಾ. ‌ಅಂಬೇಡ್ಕರ್ ಅವರು ನಮ್ಮ‌ ಈ ನೆಲಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಹಾಗಾಗಿ‌ ರಾಜ್ಯ ಸರ್ಕಾರ ಈ‌ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು‌ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಅಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಸಂಜೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ‌…

Read More

ಮಾ. 15ರಂದು ಒಂದು ದಿನದ ಕಾಂಗ್ರೆಸ್ ಕಾರ್ಯಾಗಾರ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ಮಾ. 15 ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವಿಜಯಪುರದಿಂದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರ ನೇತೃತ್ವದಲ್ಲಿ ನಡೆಯಿತು.ಕೆ.ಪಿ. ಸಿ. ಸಿ. ಸಂಯೋಜಕ ಮಹಾಬಳೇಶ್ವರ ಜಿ. ಎಸ್. ಅವರು ಮಾತನಾಡಿ, ನಮ್ಮ ಸರಕಾರ ಅನೇಕ ಯೋಜನೆಗಳನ್ನು ಮಾಡಿ ನುಡಿದಂತೆ ನಡೆದಿದೆ. ಆದರೆ ಇದರ ಕುರಿತು ಯಾವುದೇ ರೀತಿ ಕಟ್ಟಕಡೆಯ ಜನರಿಗೆ ಸರಿಯಾಗಿ ಮಾಹಿತಿ ಪ್ರಚಾರ ಮಾಡುತ್ತಿಲ್ಲ. ಸುಳ್ಳು…

Read More

ನಂಜನಗೂಡು ಮಠದಲ್ಲಿ ಶ್ರೀ ಸುಯತೀಂದ್ರರ ಆರಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ,ಮಾ. 8:ನವಮಂತ್ರಾಲಯದ ರೂವಾರಿ ಶ್ರೀ ಸುಯತೀಂದ್ರ ಶ್ರೀಪಾದಂಗಳವರ ಆರಾಧನೆಯನ್ನು ಭಾನುವಾರ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅತ್ಯಂತ ಭಕ್ತಪೂರ್ವಕವಾಗಿ ಆಮಂತ್ರಿತ ಭಕ್ತರ ಸಮ್ಮುಖದಲ್ಲಿ ಆಚರಿಸ ಲಾಯಿತು.ಅದರಂಗವಾಗಿ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಅಷ್ಟೋತ್ತರ ನಡೆದು, ಬಳಿಕ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ಮಾಡ ಲಾಯಿತು. ಬಳಿಕ ಪ್ರಲ್ಹಾದರಾಜರಿಗೆ ಕನಕಾಭಿಷೇಕ ನಡೆದು, ಶ್ರೀ ಸುಯತೀಂದ್ರರ ಭಾವಚಿತ್ರವನ್ನಿಟ್ಟ ರಥೋತ್ಸವ ಜರುಗಿತು.2009ರಲ್ಲಿ ಪೀಠಾಧಿಕಾರಿಗಳ ಅವಧಿಯಲ್ಲಿ ಶತಮಾನ ಕಂಡರಿಯದ ಪ್ರವಾಹದಿಂದ ತಲ್ಲಣಿಸಿದ ಮಂತ್ರಾಲಯ ಪುಣ್ಯಕ್ಷೇತ್ರ ನಿರ್ಮಿಸಿದ ಪರಿಯಲ್ಲೆ ಶ್ರೀ ಸುಯತೀಂದ್ರತೀರ್ಥರು ತಾವು…

Read More

ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟಲು ಆಗ್ರಹಿಸಿ ಸಹಿ ಸಂಗ್ರಹ ಮತ್ತು ಸಾಹಿತ್ಯ ಮಾರಾಟ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 8: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾನುವಾರ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವಿಜಯಪುರ ಜಿಲ್ಲಾ ಘಟಕವು ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟಲು ಆಗ್ರಹಿಸಿ ಸಹಿ ಸಂಗ್ರಹ ಮತ್ತು ಸಾಹಿತ್ಯ ಮಾರಾಟವನ್ನು ನಗರದ ಗಾಂಧಿ ವೃತದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಜ್ಞಾನ ಪ್ರಪಂಚಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅದನ್ನೆಲ್ಲ ಲೆಕ್ಕಿಸದೆ ಬರಿ ಹೆಣ್ಣು ಭೋಗದ ವಸ್ತು ಎಂಬಂತೆ ಬಿತ್ತರಿಸಲಾಗುತ್ತಿದೆ. ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಊಳಿಗಮಾನ್ಯ…

Read More

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಡಿಸಿ ಆಶಯ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 8:ಜಿಲ್ಲಾ ಪಂಚಾಯತಿ, ಕೌಶಲ್ಯಾಭಿವೃದ್ಧಿ ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ-2026 ಕ್ಕೆ ಜಿಲ್ಲಾಧಿಕಾರಿಗಳಾದ ಕೆ. ಆನಂದ ಅವರು ಚಾಲನೆ‌ ನೀಡಿದರು.ಸ್ವ-ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಹಲವಾರು ವಸ್ತುಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಪ್ರಶಂಸಿಸಿದರು….

Read More

ಮಹಿಳೆಯರು ಆರ್ಥಿಕವಾಗಿ‌‌ ಸಬಲರಾಗಬೇಕು- ಡಿಸಿ ಡಾ. ಆನಂದ‌ ಕೆ.ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 8:ಮಹಿಳೆಯರು ಸ್ತ್ರೀ‌ಶಕ್ತಿ ಮತ್ತು ಸ್ವಸಹಾಯ ಸಂಘಗಳಲ್ಲಿ‌ ಕ್ರಿಯಾಶೀಲರಾಗಿ ಆರ್ಥಿಕ ಸಬಲೀಕರಣ ಹೊಂದಬೇಕು ಎಂದು‌‌ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.‌ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ, ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ‌ರು.ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆ ಜಾರಿಗೊಳಿಸಿದೆ….

Read More