ರೌಡಿಶೀಟರ್ ಗಳ ಮನೆ ಪರಿಶೀಲನೆ ನಡೆಸಿದ ಪೊಲೀಸರು

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪೊಲೀಸ ಇಲಾಖೆಯು ದಿನನಿತ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು, ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಶಾಂತಿಯುತ ವಾತಾವರಣ ನಿರ್ಮಿಸುವ ಉದ್ದೇಶದಿಂದ ಠಾಣೆಗಳ ವ್ಯಾಪ್ತಿಯಲ್ಲಿ ಕಂಡು ಬರುವ ರೌಡಿ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ, ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಸರ್ಕಾರವು ರೌಡಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಕ್ರಮದ ಭಾಗವಾಗಿ ಠಾಣೆ/ ವೃತ್ತ ಮಟ್ಟದಲ್ಲಿ ‘ರೌಡಿ ನಿಗ್ರಹ ದಳ’ (Anti Rowdy Squad) ರಚಿಸಿ, ಕ್ರಮ ವಹಿಸಲು…

Read More

ಹಿರಿಯ ಪತ್ರಕರ್ತೆ ಕೆ. ಶಾಂತಕುಮಾರಿ ಸೇರಿ ಹಲವರ ಪುಸ್ತಕ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಜೂ. 9:ಕರ್ನಾಟಕ ಸಾಹಿತ್ಯ ಅಕಾಡೆಮಿಯು ‘ ಮಹಿಳಾ ಮುನ್ನಡೆ ” ಯೋಜನೆಯಡಿ ರಾಜ್ಯದ ಸಾಧಕ ಮಹಿಳೆಯರ 54 ಪುಸ್ತಕಗಳನ್ನು ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕೃತಿ ಬಿಡುಗಡೆ ಮಾಡಲಾಯಿತು.ಈ ಯೋಜನೆ ಅಡಿ ಹಿರಿಯ ಪತ್ರಕರ್ತೆ ಕೆ. ಶಾಂತಕುಮಾರಿ ಬರೆದ ‘ ಕಮಲಾದೇವಿ ಚಟ್ಟೋಪಾಧ್ಯಾಯ ” ಪುಸ್ತಕವು ಬಿಡುಗಡೆಯಾಯಿತು. ಹಿರಿಯ ಪತ್ರಕರ್ತರು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪ್ರೋತ್ಸಾಹಿಸಲು ಮತ್ತೊಮ್ಮೆ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಹಾಗೂ…

Read More

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ.09:ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಮಂಗಳವಾರ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು.ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ…

Read More

ಜಿಲ್ಲಾ ಮತದಾರರ ಸಹಾಯವಾಣಿ-1950 ಪ್ರಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.9:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಗತಿಯಲ್ಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮತದಾರರ ಸಹಾಯವಾಣಿ ಸಂಖ್ಯೆ-1950 ಪ್ರಾರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ ಐಆರ್) ಕುರಿತು ಯಾವುದೇ ಮಾಹಿತಿ ಪಡೆಯಲು ಅಥವಾ ಈ ಕುರಿತು ಕುಂದುಕೊರತೆಗಳನ್ನು ದಾಖಲಿಸಲು ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು. ಈ ಮೂಲಕ ಅಗತ್ಯ ಮಾಹಿತಿ ಮತ್ತು ಸಲಹೆಗಳನ್ನು ಪಡೆದುಕೊಳ್ಳಬಹುದಾಗಿದೆ.ಸಾರ್ವಜನಿಕರು…

Read More

ಡಾ.ಸುಜಾತಾ ಚಲವಾದಿ ಸ್ವಾಭಿಮಾನಿಪುಸ್ತಕ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9 :ಸ್ವಾಭಿಮಾನಿ ಕರ್ನಾಟಕ ವೇದಿಕೆಯುಡಾ. ಸುಜಾತಾ.ಚಲವಾದಿ ಸೇರಿದಂತೆ ಹಲವರಿಗೆ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಯನ್ನು ಪ್ರಕಟಿಸಿದೆ.ಡಾ. ಸಿ. ಸೋಮಶೇಖರ್ಸರ್ವಮಂಗಳ ದತ್ತಿ ಪ್ರಶಸ್ತಿಗೆ ಡಾ. ಸುಜಾತಾ ಚಲವಾದಿ ಅವರ‘ಮನುಷ್ಯ ಮತ್ತು ಪ್ರೀತಿ’ ಪ್ರಬಂಧ ಸಂಕಲನವನ್ನು ಆಯ್ಕೆಮಾಡಲಾಗಿದೆ.ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷಡಾ. ಆರ್.ಸುನಂದಮ್ಮ, ವೇದಿಕೆಯ ಅಧ್ಯಕ್ಷ ಡಾ. ದ್ವಾರನಕುಂಟೆಪಾತಣ್ಣ ಹಾಗೂ ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷಎಚ್.ಆರ್ ಸುಜಾತ ಅವರ ನೇತೃತ್ವದ ಸಮಿತಿಯುಪುರಸ್ಕೃತರನ್ನು ಆಯ್ಕೆ ಮಾಡಿದೆ. ಜೂ.13ರಂದು ಸಂಜೆ 5ಗಂಟೆಗೆ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರೊ. ಎಸ್.ಜಿ.ಸಿದ್ದರಾಮಯ್ಯಅವರು…

Read More

ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಧಾನ ಪರಿಷತ್ ಸ್ಥಾನ ನೀಡಿ: ಪೂಜಾರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ ಸಮುದಾಯದ ಜನರು ಬೇಷರತ್ತಾಗಿ, ಇಡೀ ಒಂದು ವರ್ಗವಾಗಿ ಮತ ನೀಡಿರುವುದೇ ಮುಖ್ಯ ಕಾರಣ. ಇದರಿಂದಾಗಿ ರಾಜ್ಯದಲ್ಲಿ ಸ್ಪಷ್ಟ ಬಹುಮತದ ಕಾಂಗ್ರೆಸ್ ಸರ್ಕಾರ ರಚನೆಯಾಗಲು ಸಾಧ್ಯವಾಗಿದೆ. ಆದರೆ, ವಿಜಯಪುರ ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಈ ಸಮುದಾಯವು ರಾಜಕೀಯ ಅಧಿಕಾರದ ಅಸ್ಪೃಶ್ಯತೆಯನ್ನು ಅನುಭವಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ವಿಧಾನಪರಿಷತ್ ಸ್ಥಾನಗಳ ಆಯ್ಕೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಅವಕಾಶ ಮಾಡಿಕೊಡಬೇಕು ಎಂದು…

Read More

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ. ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.9:ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ಆರೋಗ್ಯಯುತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ನಿಯಮಾನುಸಾರ ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ ಐಆರ್) ಕುರಿತು ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮತದಾರರ ಪಟ್ಟಿ…

Read More

ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 9: ಮೊಬೈಲ್ ಒಂದು ಸಂವಹನ ಸಾಧನ, ಆದರೆ ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ.’ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಇದು ಘೋಷಣೆ ಅಷ್ಟೇ ಅಲ್ಲ. ಬದಲಿಗೆ ಇಂದಿನ ಮಕ್ಕಳನ್ನು ರಕ್ಷಿಸುವ ಜೀವನಾಡಿಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ‘ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್‌ ಜಗತ್ತಿನಿಂದ ಹೊರಬಂದು, ನೈಜ ಜ್ಞಾನದ ಮೂಲವಾದ ಪುಸ್ತಕವನ್ನು ಹಿಡಿದಾಗ ಮಾತ್ರ…

Read More

ವಿಜಯಪುರದಲ್ಲಿ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶಕ್ಕೆ ಬ್ಯಾನರ್ ಅನಾವರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 8:ಸಮಸ್ತ ಬ್ರಾಹ್ಮಣ ಸಂಘಟನೆಗಳು ತಾಲೂಕು ಹಾಗೂ ಜಿಲ್ಲಾ ಘಟಕಗಳ ಸಹಕಾರದೊಂದಿಗೆ, ಶ್ರೀ ಚಿದಂಬರ ಸೇವಾ ಸಮಿತಿ ಮತ್ತು ಮಂಗಳಸೂತ್ರ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಶ್ರೀ ಚಿದಂಬರೇಶ್ವರ ಸಾಂಸ್ಕೃತಿಕ ಭವನ, ರಿಂಗ್ ರೋಡ್, ಮನಗೂಳಿ ರಸ್ತೆಯಲ್ಲಿನಡೆಯಲಿರುವ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶದ ಬ್ಯಾನರ್ ಅನ್ನು ಅನಾವರಣಗೊಳಿಸಲಾಯಿತು.ಈ ಸಮಾವೇಶವು ಜು. 11 ಮತ್ತು 12 ರಂದು ಎರಡು ದಿನಗಳ ಕಾಲ ನಡೆಯಲಿದೆ. ಜೊತೆಗೆ, ಕಲ್ಯಾಣ ಪ್ರಾಪ್ತಿಗಾಗಿ…

Read More

ಸಚಿವ ಎಂ. ಬಿ. ಪಾಟೀಲ ಟೆಂಪಲ್ ರನ್

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 8:ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ರವಿವಾರ ನಾನಾ ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಸಲ್ಲಿಸಿದರು.ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಅವರು, ತಿಕೋಟಾ ತಾಲೂಕಿನ ಮುಮ್ಮೆಟ್ಟಿಗುಡ್ಡದಲ್ಲಿರುವ ಶ್ರೀ ಅಮೋಘಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೋಘಸಿದ್ಧೇಶ್ವರ ದೇವಸ್ಥಾನ ತನ್ನ ಐತಿಹಾಸಿಕ ಹಿನ್ನೆಲೆ ಹಾಗೂ ಧಾರ್ಮಿಕ…

Read More