ಹೋರಾಟಗಾರರ ಮೇಲೆ ದೌರ್ಜನ್ಯ: ಮಾರ್ಕ್ಸ್ ವಾದಿ ಕಮ್ಯುನಿಷ್ಟ ಪಕ್ಷ ಖಂಡನೆ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 2 : ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಸೇರಿದ್ದ ಚಳವಳಿಕಾರರನ್ನು ಪೊಲೀಸರು ಬಂಧಿಸಿದ್ದು ಅಲ್ಲದೆ, ಜೈಲಿಗಟ್ಟಿ, ಪ್ರತಿಭಟನೆ ನಡೆಸುತ್ತಿದ್ದ ಟೆಂಟ್ ನ್ನು ತೆರವುಗೊಳಿಸಿದ ವಿಜಯಪುರ ಪೋಲೀಸರ ಸರ್ವಾಧಿಕಾರಿ ಕ್ರಮವನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸಿದೆ.ಹೋರಾಟಗಾರರನ್ನು ಬಂಧಿಸಿ ಜೈಲಿಗಟ್ಟಿದ ಎಲ್ಲ ಹೋರಾಟ ಸಮಿತಿಯ ಮುಖಂಡರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಸಿಪಿಐಎಂ ಆಗ್ರಹಿಸಿದೆ.ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಿ ಎಂದು ಆಗ್ರಹಿಸಿ ಹೋರಾಟ ನಡೆಸುವುದು…


