ಶ್ರೀಶೈಲಕ್ಕೆ ತೆರಳುತ್ತಿರುವ ನಂದಿ ಸೇನೆ ರಥಯಾತ್ರೆ ವಿಜಯಪುರಕ್ಕೆ ಆಗಮನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 8:ಶ್ರೀ ಶ್ರೀಶೈಲ ಜಗದ್ಗುರುಗಳು ಅವರ ದಿವ್ಯ ಸಾನ್ನಿಧ್ಯದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಚಾಲನೆ ನೀಡಿದ ನಂದಿ ಸೇನೆ ರಥಯಾತ್ರೆ ವಿಜಯಪುರ ನಗರಕ್ಕೆ ಅಗಮಿಸಿತು. ಶ್ರೀರಾಮ ನವಮಿ ಉತ್ಸವ ಸಮಿತಿ , ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ನಗರಕ್ಕೆ ಸ್ವಾಗತಿಸಿ ಬೀಳ್ಕೊಡಲಾಯಿತು.ಸಮಾಜ ಸೇವಕರು ಹಾಗೂ ಶ್ರೀರಾಮ ನವಮಿ ಉತ್ಸವ ಸಮಿತಿ ಸಂಸ್ಥಾಪಕ…

Read More

ವಿಜಯಪುರದಲ್ಲಿ ನಾಳೆ ಭೀಮಗಾಯನ

ಸಪ್ತಸಾಗರ ವಾರ್ತೆ,ವಿಜಯಪುರ,ಮಾ.8:ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ 9ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂಜೆ 4 ಗಂಟೆಗೆ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ.ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ.ಸಿದ್ಧಾರ್ಥ ಯುವ ಕ್ರೀಡಾ…

Read More

ಮಹಿಳೆಯರ ಹಕ್ಕು, ಸಾಧನೆ ಅರಿಯಲು ಪುಸ್ತಕಗಳು ಸಹಾಯಕಾರಿ: ಪ್ರೊ. ವಿಜಯಾ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7: ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಇಂತಹ ಮಹಿಳಾ ಕೇಂದ್ರಿಕೃತ ಪುಸ್ತಕ ಪ್ರದರ್ಶನಗಳು ಸಹಾಯಕವಾಗುತ್ತವೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿಶ್ವವಿದ್ಯಾನಿಲಯ ಗ್ರಂಥಾಲಯದ ಸಹಯೋಗದಲ್ಲಿ ಮಾರ್ಚ್ 7 ರಿಂದ ಮಾರ್ಚ್ 10 ರವರೆಗೆ ವಿಶ್ವವಿದ್ಯಾನಿಲಯ ಗ್ರಂಥಾಲಯ ಆವರಣದಲ್ಲಿ ವಿಶೇಷ ಪುಸ್ತಕ ಪ್ರದರ್ಶನವನ್ನು…

Read More

ಮಾ.14 ರಂದು ರಂಭಾಪುರಿ ಶಾಖಾ ಪೀಠದ ಭೂಮಿ ಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7 :ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಪೀಠ ಖಾಸಾ ಶಾಖಾ ಬಾಳೆಹೊನ್ನೂರು ಬೃಹನ್ಮಠದ ಭೂಮಿ ಪೂಜೆಯನ್ನು ಮಾ.14 ರಂದು ಶನಿವಾರ ಸಂಜೆ 4.30 ಗಂಟೆಗೆ ಜರುಗಲಿದೆ ಎಂದು ಆಲಮೇಲದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ನಗರದ ಪ.ಗು.ಹಳಕಟ್ಟಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ರಂಭಾಪುರಿ ಪೀಠ ಹಾಗೂ ಶಾಲೆ ಕಾಲೇಜು ಸೇರಿದಂತೆ ಸೇವಾ ಮನೋಭಾವನೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಈ ನಾಡು ಬಹಳಷ್ಟು ಧಾರ್ಮಿಕ ಶ್ರೀಮಂತಿಕೆ ಹೊಂದಿದೆ. ರಂಭಾಪುರಿ ಪೀಠ ಪಂಚ ಪೀಠಗಳಲ್ಲಿ…

Read More

ವಸತಿ‌ ನಿಲಯಗಳಲ್ಲಿ ಮನೆ ವಾತಾವರಣ ನಿರ್ಮಿಸುತ್ತಿದ್ದೇವೆ: ಜಿಲ್ಲಾಧಿಕಾರಿ ಡಾ.‌ ಆನಂದ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7:ವಸತಿ ನಿಲಯಗಳು ಮಕ್ಕಳ‌ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳಾಗಿದ್ದು, ಈ ಕೇಂದ್ರಗಳಲ್ಲಿ ಮಕ್ಕಳ‌ ಓದಿಗೆ‌ ಪೂರಕವಾಗಿ ಅವರ ಉತ್ತಮ‌ ವ್ಯಕ್ತಿತ್ವ ರೂಪಿಸಲು ಮನೆಯ ವಾತಾವರಣ ನಿರ್ಮಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ‌ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಫರ್ಲ‌ ಹೊಟೇಲ್ ಹಿಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ 2025-26ನೇ ಸಾಲಿನ‌ ವಸತಿ ನಿಲಯ…

Read More

ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ: ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.7:ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೂಡಲೇ ಪೂರ್ಣಗೊಳಿಸಬೇಕು ಎಂಸು ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ‌ ನಾನಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಪಂಗಳಿಗೆ ಬಿಡುಗಡೆ ಮಾಡಿರುವ ಸಾಮಗ್ರಿ ವೆಚ್ಚದ ಅನುದಾನವನ್ನು ವಿಳಂಬ ಮಾಡದೇ ಇದೇ ಮಾ. 16ನೇ ತಾರೀಖಿನೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿಸಲ್ಪಟ್ಟ…

Read More

ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಕೊಲ್ಹಾರ, ಮಾ. 7: ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ.ನಿಶ್ಚಿತಗುರಿ, ಅಚಲ ಶೃದ್ಧೆ, ಅವಿರತ ಪ್ರಯತ್ನ, ಸರಳವಾದ ಆಲೋಚನೆಗಳಿಂದ ಇಂದಿನ ಮಕ್ಕಳು ಸೃಜನಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು.ತಾಯಿ-ತಂದೆ-ಗುರುಗಳನ್ನು ಪ್ರೀತಿಯಿಂದ ಕಾಣುತ್ತಾ, ಅವರ ಮಾರ್ಗದರ್ಶನದಲ್ಲಿ ದೇಶದ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳಿ ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಮಸೂತಿ ಗ್ರಾಮದ ಶ್ರೀ ಗುರು ಸಂಗನ ಬಸವೇಶ್ವರ ವಜ್ರ ಮಹೋತ್ಸವ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ ಹತ್ತನೇ ವರ್ಗದ ವಿದ್ಯಾರ್ಥಿಗಳ ಶುಭ ಕೋರುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ…

Read More

ಬಿಜೆಪಿಗೆ ಅಧಿಕಾರ ಶತಸಿದ್ಧ:ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಸಂಸದ ರಮೇಶ ಜಿಗಜಿಣಗಿ ಭವಿಷ್ಯ ನುಡಿದರು.ವಿಜಯಪುರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಒಲವು ಬಿಜೆಪಿಯ ಮೇಲೆ ಎಂದಿಗೂ ಕಡಿಮೆಯಾಗಿಲ್ಲ, ಆದರೆ ಕಾಂಗ್ರೆಸ್‌ನವರು ಈ ಹಿಂದಿನ ಚುನಾವಣೆಯಲ್ಲಿ ಜನರನ್ನು ಗ್ಯಾರಂಟಿ ಹೆಸರಿನಲ್ಲಿ ಯಾಮಾರಿಸುವ ಪ್ರಯತ್ನ ಮಾಡಿದರು. ಆದರೆ ಈಗ ಗ್ಯಾರಂಟಿಗಳನ್ನೇ ಸರಿಯಾಗಿ ನೀಡುತ್ತಿಲ್ಲ. ಕೇವಲ ಖುರ್ಚಿ ಕಾದಾಟದಲ್ಲಿಯೇ…

Read More

ಇದು ಬಜೆಟ್ ಅಲ್ಲ, ಕೇವಲ ಘೋಷಣಾ ಪತ್ರ: ಉಮೇಶ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 6:ಒಳ ಮೀಸಲಾತಿ ವಿಷಯವಾಗಿ ಯಾವ ಸೂಕ್ತ ನಿರ್ಧಾರವನ್ನು ಪ್ರಸಕ್ತ ಬಜೆಟ್ ವೇಳೆಯಲ್ಲಿ ಕೈಗೊಳ್ಳದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ, ಇದು ಬಜೆಟ್ ಆಗಿರದೇ ಕೇವಲ ಘೋಷಣಾ ಪತ್ರವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅಸಮಾಧಾನ ಹೊರಹಾಕಿದ್ದಾರೆ.ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಒಳ ಮೀಸಲಾತಿ ಜಾರಿಯ ಬಗ್ಗೆ ಯಾವ ನಿರ್ಧಾರವನ್ನು ಪ್ರಕಟಿಸದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ಅನ್ಯಾಯ…

Read More

ಬಜೆಟ್: ವಿಜಯಪುರ ಮಹಾನಗರ ನಿರ್ಲಕ್ಷ್ಯ-ಎಂಎಲ್ಸಿ ಕೇಶವ ಪ್ರಸಾದ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 6: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ವಿಜಯಪುರ ಮಹಾನಗರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಬಹುನಿರೀಕ್ಷಿತ ವಿಮಾನ ನಿಲ್ದಾಣವನ್ನು ಯಾವಾಗ ಪ್ರಾರಂಭಮಾಡಲಾಗುತ್ತದೆ ಎಂಬುದರ ಬಗ್ಗೆ ಖಚಿತತೆ ಇಲ್ಲ ಎಂದು ವಿಧಾನ ಪರಿಷತ್ ಶಾಸಕ ಕೇಶವ ಪ್ರಸಾದ ಎಸ್. ಹೇಳಿದ್ದಾರೆ.ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ನಿರ್ದಿಷ್ಟವಾದ ಅನುದಾನವನ್ನು ಒದಗಿಸಿಲ್ಲ.•ಕಳೆದ ಬಜೆಟ್ ನಲ್ಲಿ ಘೋಷಿಸಲಾದ ಫುಡ್ಪಾರ್ಕ್ ಹಾಗೂ ದ್ರಾಕ್ಷಿ ಬೆಳೆಗಾರರ ಕೋಲ್ಡ್ ಸ್ಟೋರೇಜ್ ಪ್ರಗತಿಯಾಗಿಲ್ಲ, ಈ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಿಲ್ಲ.ಉತ್ತರ ಕರ್ನಾಟಕ ಭಾಗದ ಕ್ರೀಡೆಯ ಪ್ರೋತ್ಸಾಹಕ್ಕೆ…

Read More