ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ಸಾಧ್ಯ- ಸಚಿವ ಯತೀಂದ್ರ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಸಮಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 8:ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಭಾನುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಹಾಗೂ ಲೋಕಮಾತಾ ಅಹಲ್ಯಾಬಾಯಿ ಹೊಳ್ಳರ್ 301ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಹಲ್ಯಾಬಾಯಿ ಹೋಳ್ಕರ ಶ್ರೇಷ್ಠ ಮಹಿಳೆ. ಅಪ್ರತಿಮ ಹೋರಾಟಗಾರ್ತಿ. ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿದ್ದರು ಎಂದರು.ಸಮಾಜದ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ. ಹೀಗಾಗಿ ನಾವು ನಮ್ಮ…

Read More

ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ: ಯತೀಂದ್ರ ವಾಗ್ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 7:ಗೃಹಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ನಗರಾಭಿವೃದ್ಧಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಗೆ ಆಗಮಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಬಿಜೆಪಿ ಯಾವಾಗಲೂ ಜನವಿರೋಧಿ ನೀತಿಯನ್ನು ಅನುಸರಿಸುತ್ತ ಬಂದಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದಾಗಲೂ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಲಿಲ್ಲ. ಇದೀಗ ಕಚ್ಚಾ…

Read More

ವಿಶ್ವ ಪರಿಸರ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 6:ನಗರದ ಚಿದಂಬರೇಶ್ವರ ದೇವಸ್ಥಾನ ಹತ್ತಿರ ವಿಶ್ವ ಪರಿಸರ ದಿನ ಅಂಗವಾಗಿ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯ ಸಂದೇಶ ಸಾರಲಾಯಿತು.ಚಿದಂಬರ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ ಮಾತನಾಡಿ, ಪರಿಸರ ರಕ್ಷಿತ: ರಕ್ಷತ: ಎನ್ನುವಂತೆ ಪರಿಸರವನ್ನು ನಾವು ರಕ್ಷಿಸಿದರೆ, ಅದು ನಮ್ಮನ್ನು ರಕ್ಷಿಸುತ್ತದೆ. ಪರಿಸರ ನಮಗೆ ಪ್ರಾಣವಾಯು, ಆಹಾರ ಎಲ್ಲವೂ ನೀಡಿದೆ, ಆದರೆ ನಾವು ಪ್ರತಿಯಾಗಿ ಪರಿಸರವನ್ನು ವಿನಾಶ ಮಾಡುತ್ತಿದ್ದೇವೆ. ಮಾಲಿನ್ಯಗೊಳಿಸುತ್ತಿದ್ದೇವೆ. ಹೀಗಾಗಿ ಪರಿಸರ ರಕ್ಷಣೆ ನಮ್ಮ ಜೀವನದ ಭಾಗವಾಗಬೇಕು ಎಂದರು.ಯುವ ಧುರೀಣ ಪ್ರಕಾಶ…

Read More

ಲಂಚ: ಕೆ. ಬಿ. ಜೆ. ಎನ್. ಎಲ್ ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 6:ಲಂಚ ಪಡೆಯುತ್ತಿದ್ದ ಕೆಬಿಜೆಎನ್ ಎಲ್ ಇಬ್ಬರು ಅಭಿಯಂತರರು ಸಾಲೋಟಗಿ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಸೇವಾಲಾಲ್ ಚೌವಾಣ, ಕಿರಿಯ ಅಭಿಯಂತರ ಸಾತಲಿಂಗಪ್ಪ ರೊಡಗಿ ಲೋಕಾಯುಕ್ತ ಬಲೆಗೆ ಬಿದ್ದ ಅಭಿಯಂತರರು.ಕೆಬಿಜೆಎನ್ಎಲ್ ಕೆನಾಲ್ ಕಾಮಗಾರಿ ಪೂರೈಸಿದ 3,71,419 ಮೊತ್ತದ ಬಿಲ್ ಪಾಸ್ ಮಾಡಿ ಮೇಲಾಧಿಕಾರಿ ಕಚೇರಿಗೆ ಕಳುಹಿಸಲು ಅಭಿಯಂತರ ಸೇವಾಲಾಲ್ 10,000 ರೂ. ಹಾಗೂ ಕಿರಿಯ ಅಭಿಯಂತರ ಸಾತಲಿಂಗಪ್ಪ ಅವರು 8,000 ರೂ. ಗಳ ಲಂಚದ ಬೇಡಿಕೆಯನ್ನು ಇಟ್ಟಿದ್ದರು.ನಾನಾಸಾಹೇಬ ರೋಡಗಿ…

Read More

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 06: “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು…

Read More

ವಾಹನ ಖರೀದಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜೂ.6:ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ, 2020-21 ರಿಂದ 2023-24ನೇ ಸಾಲಿನ ಜಿಲ್ಲೆಗೆ ಸಾಮಾನ್ಯ ವರ್ಗದಡಿ ಒಂದು ಇನ್ಸುಲೇಟೆಡ್ ವಾಹನ ಖರೀದಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ ದೊರೆಯಲಿದ್ದು, ಉಳಿದ ಶೇ. 60 ರಷ್ಟು ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗುತ್ತದೆ. ಅರ್ಹತೆಗಳೇನುಅರ್ಜಿದಾರರು ಕಡ್ಡಾಯವಾಗಿ ವಿಜಯಪುರ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.ಮೀನುಗಾರಿಕೆ ಅಥವಾ ಮೀನು ಮಾರಾಟ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಆಸಕ್ತರು ಮೀನುಗಾರರ ಸಹಕಾರ ಸಂಘಗಳ ಸದಸ್ಯರಾಗಿರುವುದು ಕಡ್ಡಾಯವಾಗಿದೆ.ಅರ್ಜಿದಾರರು…

Read More

ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶ್ವಪರಿಸರ ದಿನಾಚರಣೆ: ಸಸಿ ನೆಟ್ಟುಪರಿಸರ ಸಂರಕ್ಷಣೆಗೆ ವಿದ್ಯಾರ್ಥಿನಿಯರ ಸಂಕಲ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿಸಸಿಗಳನ್ನು ನೆಡುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮಬದ್ಧತೆಯನ್ನು ವ್ಯಕ್ತಪಡಿಸಿದರು.ಇದೇ ವೇಳೆ ಪರಿಸರ ಸಂರಕ್ಷಣೆಯಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಹಾಗೂ ಸಾಮಾಜಿಕ ಚಿಂತಕಬಸಂತಕುಮಾರ ಪಾಟೀಲ, “ಪ್ರತಿಯೊಬ್ಬ ಪ್ರಜೆಯೂ ಒಂದೊಂದುಮರವನ್ನು ನೆಟ್ಟರೆ ನಮ್ಮ ದೇಶ ನಂದನವನದಂತೆ ಕಂಗೋಳಿಸುತ್ತದೆ.ಪರಿಸರ…

Read More

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ: ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

ಸಪ್ತಸಾಗರ ವಾರ್ತೆ , ಹುಬ್ಬಳ್ಳಿ, ಜೂ. 5: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿ ರೈಲ್ವೆ ವಿಭಾಗವು ಶುಕ್ರವಾರ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮತ್ತು ಆವರಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ ಬೇಲಾ ಮೀನಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (DRM), ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಘೋಷಣೆ ಅಥವಾ ಆಚರಣೆಗೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದಲ್ಲಿ…

Read More

ಗಿಡ-ಮರಗಳ ಲಾಲನೆ ಪೋಷಣೆ ಅಗತ್ಯ: ನ್ಯಾಯಾಧೀಶ ಹರೀಶ ಎ.ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.5: ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪರಿಸರ ಸಮತೋಲನ ಕಾಪಾಡಲು ಗಿಡ-ಮರಗಳ ಲಾಲನೆ ಪೋಷಣೆ ಮಾಡುವುದು ತೀರಾ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.ವಿಶ್ವ ಪರಿಸರ ದಿನದ ಅಂಗವಾಗಿ ಕೂಡಗಿ ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು…

Read More

ಎ. ಎಸ್.ಐ ಹಾದಿಮನಿಯವರಿಗೆ ಬೀಳ್ಕೊಡುಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5: ಸೇವಾ ನಿವೃತ್ತಿ ಹೊಂದಿದ ಗೋಳ ಗುಮ್ಮಜ್ ಪೊಲೀಸ್ ಠಾಣೆಯ ಎಎಸ್ಐ ಎಂ. ಎ. ಹಾದಿಮನಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.ಠಾಣೆಯ ಮೇಲ್ಚಾವಣಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಾದಿಮನಿ ಅವರಿಗೆ ಶಾಲು, ಹೂವಿನ ಹಾರ ಹಾಗೂ ಫಲಪುಷ್ಪ ನೀಡಿ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.ಅನೇಕರು ಈ ಸಮಾರಂಭದಲ್ಲಿ ಹಾದಿಮನಿ ಅವರ ಪ್ರಾಮಾಣಿಕತೆ ದಕ್ಷತೆ ಹಾಗೂ ಸೇವಾ ನಿಷ್ಠೆಯನ್ನು ಪ್ರಶಂಶಿಸಿ ಮಾತನಾಡಿದರು.ಗೋಳ ಗುಮ್ಮಜ್ ಪೊಲೀಸ್ ಠಾಣೆಯ ಸಿಪಿಐ ಸಂಜೀವ್ ಕುಮಾರ್ ಬಳೆಗಾರ, ಪಿಎಸ್ಐಗಳಾದ ಮಹ್ಮದ ಘೋರಿ, ಹಸೀನಾ…

Read More