ಶ್ರೀಶೈಲಕ್ಕೆ ತೆರಳುತ್ತಿರುವ ನಂದಿ ಸೇನೆ ರಥಯಾತ್ರೆ ವಿಜಯಪುರಕ್ಕೆ ಆಗಮನ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 8:ಶ್ರೀ ಶ್ರೀಶೈಲ ಜಗದ್ಗುರುಗಳು ಅವರ ದಿವ್ಯ ಸಾನ್ನಿಧ್ಯದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಚಾಲನೆ ನೀಡಿದ ನಂದಿ ಸೇನೆ ರಥಯಾತ್ರೆ ವಿಜಯಪುರ ನಗರಕ್ಕೆ ಅಗಮಿಸಿತು. ಶ್ರೀರಾಮ ನವಮಿ ಉತ್ಸವ ಸಮಿತಿ , ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ನಗರಕ್ಕೆ ಸ್ವಾಗತಿಸಿ ಬೀಳ್ಕೊಡಲಾಯಿತು.ಸಮಾಜ ಸೇವಕರು ಹಾಗೂ ಶ್ರೀರಾಮ ನವಮಿ ಉತ್ಸವ ಸಮಿತಿ ಸಂಸ್ಥಾಪಕ…


