ಅನ್ನದಾತನ ಬದುಕು ಬದಲಿಸುವ ಬಜೆಟ್-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಸಚಿವ ಶಿವಾನಂದ ಪಾಟೀಲ ಸ್ವಾಗತಿಸಿದ್ದಾರೆ.ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ…

Read More

ಬಾಬಾನಗರದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಬಜೆಟ್ ನಲ್ಲಿ ಅನುಮೋದನೆ: ತಿಕೋಟ ರೈತ ಮುಖಂಡರ ಹರ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆಯಡಿ ನೀರನ್ನು ಸಂಗ್ರಹಿಸಲು ಬಾಬಾನಗರದಲ್ಲಿ ಆಣೆಕಟ್ಟು ಕಟ್ಟಲು ಇಂದಿನ ಬಜೆಟ್ ನಲ್ಲಿ ಸೇರ್ಪಡೆಯಾಗಿರುವುದು ವಿಜಯಪುರ ಜಿಲ್ಲೆಯ ಅತೀ ಎತ್ತರದ ಪ್ರದೇಶದ ರೈತರಿಗೆ ನಮ್ಮ ಸರ್ಕಾರ ಈ ಬಜೆಟ್ ನಲ್ಲಿ ವಿಶೇಷ ಕೊಡುಗೆ ನೀಡಿದೆ ಎಂದು ತಿಕೋಟಾ ತಾಲೂಕಿನ ರೈತ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.ರೈತ ಮುಖಂಡರಾದ ಸೋಮನಾಥ ಬಾಗಲಕೋಟ, ಸಿದ್ದು ಗೌಡನವರ, ಮಧು ಸಾಹುಕಾರ ಜಾಧವ, ಎ.ಎಂ.ಪಾಟೀಲ ಬಿಜ್ಜರಗಿ, ಮಲ್ಲಿಕಾರ್ಜುನ ಲೋಣಿ, ಎಂ.ಎಸ್.ರುದ್ರಗೌಡರ, ಮಧುಕರ ಜಾಧವ,…

Read More

ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಜಿಲ್ಲೆಯ ಇಂಡಿಯ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 4.60 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಪ್ರಕಾಶ ಈರಪ್ಪ ಗೊಡಬೋಳೆ ಅವರು ಅಕ್ರಮ ಆಸ್ತಿ ಗಳಿಸಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಗೋಡಬೊಳೆ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ…

Read More

ಅಕ್ರಮ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ, ಅಕ್ಕಿ ವಶ

ಸಪ್ತಸಾಗರ ವಾರ್ತೆ , ವಿಜಯಪುರ,ಮಾ 6:ನಗರದ ಆರ್ ಎನ್ಎಸ್ ಶೋ ರೂಮ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಆರ್ ಎನ್ಎಸ್ ಶೋ ರೂಮ್ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, 35,060 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಟಿ.ರಾಜು ಎಂಬುವವರ ಮೇಲೆ ಜಲ ನಗರ…

Read More

ಕೃ.ಮೇ.ಯೋಜನೆಯ ಸಂತ್ರಸ್ತರಿಗೆ ನ್ಯಾಯ ಕಲ್ಪಿಸಿ: ನಿರಾಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಮಾ.5:ವಿಜಯಪುರ-ಬಾಗಲಕೋಟೆ ಉಭಯ ಜಿಲ್ಲೆಗಳಲ್ಲಿ 2023 ರ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಂದುವರೆಸುವುದಾಗಿ ಹಾಗೂ ಸಂತ್ರಸ್ತರ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿಯೂ ಕಾಂಗ್ರೆಸ್ ನಾಯಕರು ನೀರಾವರಿ ಯೋಜನೆಗೆ ಪ್ರತಿ ವರ್ಷ ರೂ 40,000 ಕೋಟಿಯಂತೆ ಮುಂದಿನ 5 ವರ್ಷಗಳ ಅವಧಿಯಲ್ಲಿ ಎರಡು ಲಕ್ಷ ಕೋಟಿ ಹಣ ಖರ್ಚು ಮಾಡಿ ನೀರಾವರಿ ಯೋಜನೆಯನ್ನು ಪೂರ್ತಿಮಾಡುವುದಾಗಿಯೂ ವಾಗ್ದಾನ ಮಾಡಿದ್ದರು. ಆದರೆ ಕಳೆದ 3 ವರ್ಷದಲ್ಲಿ ಯು.ಕೆ.ಪಿಗೆ…

Read More

ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾ 5: ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ…

Read More

ತಾಪಮಾನ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸಲಹೆ, ಸೂಚನೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.5:ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ‌ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು‌‌ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ‌ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.ರಾಜ್ಯದ ಕೆಲ‌ ಜಿಲ್ಲೆಗಳಲ್ಲಿ 3 ರಿಂದ 6 ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ…

Read More

ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕ ಇಲಾಖೆವೆಬ್ ಸೈಟಿನಲ್ಲಿ ಪ್ರಕಟ: ದಾಖಲೆ ಸಲ್ಲಿಸಲು ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ.ಮಾ.4: 2022ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧಿಕೃತ dpl.karnataka.gov.in ವೆಬ್ ಸೈಟಿನಲ್ಲಿ ಮಾರ್ಚ್ 02ರಂದು ಪ್ರಕಟಿಸಲಾಗಿದೆ.ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರ ಪುಸ್ತಕಗಳ ಶೀರ್ಷಿಕೆ,ಲೇಖಕರ ಹೆಸರು,ಪ್ರಕಾಶಕರ ಹೆಸರು,ಮುಖಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ, ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್…

Read More

ವಿಜಯಪುರದಲ್ಲಿ ಹೋಳಿ ರಂಗಿನಾಟದಲ್ಲಿ ಮಿಂದೆದ್ದ ಜನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 4 :ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಎತ್ತ ನೋಡಿದರೂ ಬಣ್ಣದಾಟದ ಸಡಗರ….ಕೆಂಪು, ಹಳದಿ, ಕೇಸರಿ ಹೀಗೆ ನಾನಾ ಬಣ್ಣಗಳನ್ನು ಬಳಿದುಕೊಂಡು, ಇತರರಿಗೂ ಉತ್ಸಾಹದಿಂದ ಎರಚಲು ಮುಂದಾದ ಯುವಕರ ಗುಂಪು…ಅಲ್ಲಲ್ಲಿ ಹೋಲಿ ಇವೆಂಟ್‌ಗಳಲ್ಲಿ ಯುವಕರ ಅಮಿತೋತ್ಸಾಹದ ಬಣ್ಣದಾಟ, ಕುಣಿದಾಟ, ಬೈಕ್ ಮೇಲೆ ಯುವಕರ ಹರ್ಷೋದ್ಘಾರದ ಸಂಚಾರ…ಹೋಳಿ ಹುಣ್ಣಿಮೆ ಅಂಗವಾಗಿ ಬುಧವಾರ ವಿಜಯಪುರದಲ್ಲಿ ಕಂಡು ಬಂದ ದೃಶ್ಯಗಳಿವು.ಬೆಳಿಗ್ಗೆಯಿಂದಲೇ ವಿಜಯಪುರ ರಂಗಿನಾಟದಲ್ಲಿ ಮಿಂದೆದಿತ್ತು. ಸೂರ್ಯನ ಪ್ರಖರವಾದ ಬಿಸಿಲು ಬಣ್ಣದಾಟಕ್ಕೆ ಬ್ರೇಕ್ ಬೀಳಲಿಲ್ಲ. ಮಧ್ಯಾಹ್ನವಾದರೂ ಬಣ್ಣದಾಟದ ಉತ್ಸಾಹಕ್ಕೆ ಮಾತ್ರ…

Read More

ಅನ್ನದಾತರ ಸಮೃದ್ಧಿಯಲ್ಲಿ ಸಂತೃಪ್ತಿ: ಸಚಿವ ಎಂಬಿಪಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 3:ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ. ಈ ನಿಟ್ಟಿನಲ್ಲಿ ಕಾಯಕನಿರತನಾಗಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ, ಎನ್.ಆರ್.ಎಲ್.ಎಂ ಕಲಿಕಾ ಕಟ್ಟಡ, ಗೋದಾಮು ಹಾಗೂ ಜಲ ಸಂಗ್ರಹಕ್ಕೆ ಅನುಕೂಲವಾಗುವ ಕಲ್ಯಾಣಿ ಉದ್ಘಾಟನೆ ಹಾಗೂ ಡೋಣಿ ಪ್ರವಾಹದಿಂದಾಗಿ ಪುನರ್ವಸತಿ…

Read More