ನಿರ್ಲಕ್ಷಿತರಿಗೆ ಕಾಕಾ ಕಾರಖಾನೀಸರಿಂದ ಶಿಕ್ಷಣ ದಾಸೋಹ – ಬಿ.ಆರ್.ಬನಸೋಡೆ ಅಭಿಮತ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.30: ನಿರ್ಲಕ್ಷಿತಗೊಳಗಾದವರನ್ನು ಸುಶಿಕ್ಷಿತರನ್ನಾಗಿಸಿದ ಶ್ರೇಯಸ್ಸು ಕಾಕಾ ಕಾರಖಾನೀಸರಿಗೆ ಸಲ್ಲುತ್ತದೆ. ಎಂದು ಜಾತಿಭೇದ, ಲಿಂಗಭೇದ ಮತ್ತು ವರ್ಣಭೇದ ಹೋಗಲಾಡಿಸಲು ಅಹರ್ನಿಶಿ ದುಡಿದವರು. ಅವರು ಕೇವಲ ಸಹಾನುಭೂತಿ ತೋರದೇ, ಅವರಲ್ಲಿ ಒಂದಾಗಿ ಅನುಭೂತಿಯನ್ನು ತೋರಿದ ಮಹಾನ್ ಧೀಮಂತರು ಎಂದು ಬಣ್ಣಿಸಿದರು.ಬ್ರಾಹ್ಮಣನಾಗಿದ್ದರೂ ನಾನು ಎಂದೆಂದೂ ಹರಿಜನನಾಗಿರುತ್ತೇನೆ ಎನ್ನುವ ಮೂಲಕ ಅದರಂತೆ ಬದುಕು ಸಾಗಿಸಿದವರು. ಸಮಾನತೆ ತರಲು ನಿರಂತರ ಹೋರಾಡಿದ ಹುಟ್ಟು ಸನ್ಯಾಸಿ, ದೇಶಪ್ರೇಮಿ, ಶತಾಯುಷಿ, ಸಾಬರಮತಿ ಆಶ್ರಮದಲ್ಲಿದ್ದು ಅಪ್ಪಟ ಗಾಂಧಿ ಅನುಯಾಯಿಯಾಗಿ ಪದ್ಮಶ್ರೀ ಕಾಕಾ ಕಾರಖಾನೀಸರು ಜನಾನುರಾಗಿಯಾಗಿದ್ದರು…


