ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ ಫೆ.28:ಜಿಲ್ಲೆಯ ಹದಿಮೂರು ತಾಲೂಕಿನ 64 ಪರೀಕ್ಷಾ ಕೇಂದ್ರಗಳಲ್ಲಿ (ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ಶನಿವಾರ ಕನ್ನಡ ಮತ್ತು ಅರೆಬಿಕ್ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ನಗರದ ವಿ.ಬಿ. ದರಬಾರ ಕಾಲೇಜ್, ಎಸ್.ಎಸ್. ಪದವಿ ಪೂರ್ವ ಕಾಲೇಜ್ ಹಾಗೂ ಖೇಡ ಕಾಲೇಜಿನಲ್ಲಿ ನಡೆದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಸುಸೂತ್ರ ಹಾಗೂ ಸುಗಮ ಪರೀಕ್ಷೆ ನಡೆಸಲು ಕೈಗೊಳ್ಳಲಾದ ವ್ಯವಸ್ಥೆ ಕುರಿತಾಗಿ ಪರಿಶೀಲನೆ ನಡೆಸಿ,ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.ವಿದ್ಯಾರ್ಥಿಗಳು ಯಾವುದೇ…


