ಸುಪ್ರಿಯಾಗೆ ಪಿಎಚ್ ಡಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಸುಪ್ರಿಯಾ ಭೋಸಲೆ ಅವರಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ(ಡಾಕ್ಟರೇಟ್) ಲಭಿಸಿದೆ.ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಬಯೊಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿರುವ ಸುಪ್ರಿಯಾ ಭೋಸಲೆ ಅವರು ಅಲೈಡ್ ಹೆಲ್ತ್ ಸಾಯಿನ್ಸ್ ನ ಬಯೊಟೆಕ್ನಾಲಜಿ ವಿಭಾಗದಲ್ಲಿ ಡಬ್ಲ್ಯೂಎನಟಿ‌ ಬಿ- ಕೆಟೆನಿನ್ ಸಿಗ್ನಲಿಂಗ್ ಇನಗ ಹಿಪೊಕ್ಸಿಯಾ- ಇಂಡ್ಯೂಸ್ಡ್ ಪಲ್ಮನರಿ ಆರ್ಟಿಲರಿ ಸ್ಮೂಥ್ ಮಸಲ್ ಸೆಲ್ ಪ್ರಾಲಿಫಿರೇಶನ್- ರೋಲ್ ಆಫ್ ಎ ಬಯೊಆ್ಯಕ್ಟಿವ್ ಮಾಲಿಕ್ಯೂಲ್ ಆಫ್ ಮ್ಯುಕ್ಯೂನಾ ಪ್ರೂರಿಯನ್ಸ್ ವಿಷಯದಲ್ಲಿ‌…

Read More

ನಾನು ಶಾಸಕನಾದ ಬಳಿಕ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ನಿಡಗುಂದಿ/ಆಲಮಟ್ಟಿ :ಅಖಂಡ ವಿಜಯಪುರ ಜಿಲ್ಲೆಯ ಜನರು ಭೂಮಿ, ಮನೆ, ಬದುಕು ಕಳೆಕೊಂಡರೂ ಕುಡಿಯಲು ನೀರಿಗೂ ಪರದಾಟ ನಡೆಸಿದ್ದೆವು. ಆದರೆ 2004 ರಲ್ಲಿ ನಾನು ಬಸವನಬಾಗೇವಾಡಿ ಕ್ಷೇತ್ರದಿಂದ ಶಾಸಕನಾದ ಬಳಿಕವೇ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ ದೊರಕಿದ್ದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶನಿವಾರ ನಿಡಗುಂದಿ ತಾಲೂಕಿನ ವಂದಾಲ ಗ್ರಾಮದಲ್ಲಿ ರೈಲ್ವೇ ಸ್ಟೇಷನ್ ವರೆಗಿನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,…

Read More

101 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಧರಣಿ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 27:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 101ನೇ ದಿನಕ್ಕೆ ಕಾಲಿಟ್ಟಿದೆ.ವಿಜಯಪುರದ ಮೂಲ ನಿವಾಸಿ ಅಶೋಕ ಲೋಣಿ (ಕನ್ನಡಪರ ಹೋರಾಟಗಾರರು) ಕೆಜಿಎಫ್ ದಿಂದ ಆಗಮಿಸಿ, ಇಂದು ಇಡೀ ದಿನ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತ ಪಡಿಸಿ ಮಾತನಾಡಿ,ಸರ್ಕಾರ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರ ಸ್ಥಾಪಿಸಬೇಕು. ಯಾರ ಹಿತಕ್ಕಾಗಿ ಈ ಪಿಪಿಪಿ ಅನ್ನುವ ಮಾದರಿ ವಿಜಯಪುರ ಜಿಲ್ಲೆಯ ಜನರ ಮೇಲೆ ಹೇರುತ್ತಿದ್ದಾರೆ.ವಿಜಯಪುರ…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ:ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.27: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ…

Read More

ಅಧಿಕಾರಿಗಳ ಸರಣಿ ಸಭೆ: ರೇಲ್ವೆ ಸೌಲಭ್ಯ ಫಲಪ್ರದ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 27: ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿಯನ್ನು 14 ಗಂಟೆಯಿಂದ 10 ಗಂಟೆಗೆ ಇಳಿಸಲು ಐದು ಸಲ ನಡೆಸಿರುವ ಸಭೆಗಳು ಮತ್ತು ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿರುವ ನಿರಂತರ ಸಭೆಗಳ ಫಲವಾಗಿ ಈ ವಿಶೇಷ ರೈಲು ಓಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿ ಕಡಿಮೆ ಮಾಡುವ ನಿಟ್ಟಿನಲ್ಲಿ…

Read More

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ: ಪಟ್ಟಣಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 27 :ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.ಬಿಜೆಪಿ ಕಾರ್ಯಾಲಯದಲ್ಲಿ ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂಗಳು ನಾವೆಲ್ಲರೂ ಒಂದಾಗಬೇಕು. ಹಿಂದೂಗಳ ವಿರುದ್ಧ ಅನ್ಯಾಯವಾದರೆ ಅದನ್ನು ಪ್ರತಿಭಟಿಸಬೇಕು. ಉಳಿದ ಧರ್ಮೀಯರಿಗೆ ಅನ್ಯಾಯವಾದರೆ ಅದರಲ್ಲೂ ಬೇರೆ ದೇಶದಲ್ಲಿಯೂ ಅನ್ಯಾಯವಾದರೂ…

Read More

ಲ್ಯಾಂಡ್ ಮಾಫಿಯಾದವರು ಏಕಾಏಕಿ ಒತ್ತುವರಿ ಮಾಡಿ ಸ್ಲಂ ನಿರ್ಮಾಣ ಮಾಡಲು ಅವಕಾಶ ನೀಡುವುದಿಲ್ಲ: ಡಿಕೆಸಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಡಿ.27:“ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಹಸ್ತಕ್ಷೇಪ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಪಿಣರಾಯಿ ವಿಜಯನ್ ರಂತಹ ಹಿರಿಯ…

Read More

ಪಾಲಕರು ಚಾರಿತ್ರ್ಯದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು-ಹಾರಿಕ ಮಂಜುನಾಥ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 27: ಈಗಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸ್ವಾಮಿ ವಿವೇಕಾನಂದರಂತಹ ಚಾರಿತ್ರ್ಯದ ಶಿಕ್ಷಣಕ್ಕೆ ಪಾಲಕರು ಮೊದಲಾದ್ಯತೆ ನೀಡಬೇಕು. ಪಠ್ಯ ಪುಸ್ತಕಗಳು ಮಕ್ಕಳನ್ನು ಶಿಕ್ಷಣವಂತರಾಗಿ ಮಾತ್ರ ಮಾಡುತ್ತವೆ. ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಧಾರೆ ಎರೆಯಬೇಕು ಎಂದು ಬೆಂಗಳೂರಿನ ಯುವ ವಾಗ್ಮಿ ಕುಮಾರಿ ಹಾರಿಕ ಮಂಜುನಾಥ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿ…

Read More

ಗೋಲಗುಮ್ಮಜ್ ಎಕ್ಸಪ್ರೆಸ್ ಟ್ರೈನ್ ಹುಬ್ಬಳ್ಳಿ, ಗದಗ ಬೈಪಾಸ್ ಮಾರ್ಗ ಓಡಿಸಲು ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…

Read More

ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ಕಚೇರಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಕರ್ನಾಟಕ ರಾಜ್ಯ ಸರಕಾರಿ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ (ರಿ) ಜಿಲ್ಲಾ ಶಾಖೆ ವಿಜಯಪುರ ಕಚೇರಿ ಉದ್ಘಾಟನಾ ಹಾಗೂ ಸಮಾಜ ಪರಿವರ್ತನೆಯಲ್ಲಿ ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ಡಿ. 28ರಂದು ಬೆಳಿಗ್ಗೆ 11-30 ಗಂಟೆಗೆ ಸ್ಟೇಶನ್ ರಸ್ತೆ ಅಂಬೇಡ್ಕರ್ ಸರ್ಕಲ್ ಹತ್ತಿರ ಇರುವ ಡಾ. ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.ಮಾಜಿ ಶಾಸಕ ರಾಜು ಆಲಗೂರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಕಚೇರಿ…

Read More