ಜ್ಞಾನಯೋಗಾಶ್ರಮಕ್ಕೆ ವಿಶೇಷ ಬಸ್ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ನಗರದ ಜ್ಞಾನಯೋಗಾಶ್ರಮದಲ್ಲಿ ಜು.೧೦ರಂದು ಜರುಗಲಿರುವ ಪರಮಪೂಜ್ಯ ಶ್ರೀ ಮಲ್ಲಿಕಾರ್ಜುನ ಮಹಾಶಿವಯೋಗಿಗಳವರ ಸ್ಮರಣೋತ್ಸವ ಹಾಗೂ ಗುರುಪೂರ್ಣಿಮಾ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಜು. ೯ರಿಂದ ೧೦ರವರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.ನಗರದ ವಿವಿಧ ಬಡಾವಣೆ, ಕೇಂದ್ರ ಬಸ್ ನಿಲ್ದಾಣ ಹಾಗೂ ಸೆಟ್‌ಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಚರಣೆ ಮಾಡಲಿವೆ. ಪ್ರಯಾಣಿಕರು ಈ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ…

Read More

ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ. ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಟಿ. ಭೂಬಾಲನ್ ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಮೊದಲಿನ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿ ಡಾ. ಆನಂದ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು.ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಡಾ. ಆನಂದ…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More