ನಂಜನಗೂಡು ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ:ತಪಸ್ಸಿನಿಂದ ತೇಜಸ್ಸನ್ನು ಸಂಪಾದಿಸಿದವರು ಗುರುರಾಯರು-ಪಂಡಿತ ಗೋಪಿನಾಥಾಚಾರ್ಯ ಗಲಗಲಿ
ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 19:ಇಲ್ಲಿಯ ನಂಜನಗೂಡು ಶ್ರೀ ರಾಘ ವೇಂದ್ರ ಸ್ವಾಮಿಗಳವರ ಮಠದಲ್ಲಿ ಗುರುವಾರ ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ವೇದಾಂತ ಸಾಮ್ರಾಜ್ಯ ಪಟ್ಟಾಭಿಷೇಕ ದಿನೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ವೃಂದಾವನದ ನಿರ್ಮಾಲ್ಯ ವಿಸರ್ಜನ, ಬಳಿಕ ಪಂಚಾಮೃತ ಅಭಿಷೇಕ, ಅಷ್ಟೋತ್ತರ ನಡೆದವು. ನಂತರ ಮಠದ ಪ್ರಾಂಗಣದಲ್ಲಿ ರಾಯರ ಪಟ್ಟಾಭಿಷೇಕದ ಭಾವಚಿತ್ರದಿಂದೊಡಗೂಡಿ ಪುಷ್ಪಗಳಿಂದ ಅಲಂಕೃತ ಭವ್ಯ ರಥೋತ್ಸವ ನಡೆದು ಭಕ್ತ ವೃಂದದ ಭಕ್ತಿಗೀತೆಗಳ ಗಾಯನ ಶ್ರೀಮಠದ ತುಂಬೆಲ್ಲ ಮಾರ್ದನಿಸಿತು.ಮುಂಜಾನೆಯಿಂದಲೇ ನಗರದ ವಿವಿಧ ಬಡಾವಣೆಗಳಿಂದ ಭಕ್ತರು…


