ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ 300 ವೈಫಲ್ಯ: ಜಿಗಜಿಣಗಿ ಟೀಕೆ
ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 19:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರು ವರ್ಷದ ಆಡಳಿತದಲ್ಲಿ 300 ವೈಫಲ್ಯಗಳಿವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅವರ ಕೊರಳಿಗೆ 300 ವೈಫಲ್ಯಗಳ ಹಾರ ಹಾಕುವುದಾಗಿ ಹೇಳಿದರು.ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಿದ್ದರಾಮಯ್ಯನವರು ಪ್ರತಿಯೊಂದು ವಸ್ತುವಿನ ಮೇಲೆ ದುಬಾರಿ ತೆರಿಗೆ ಹಾಕಿ ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡಲು ನಮ್ಮದೇನೂ ಅಭ್ಯಂತರವಿಲ್ಲ. ಸರ್ಕಾರದ…


