ನೀರಾವರಿಗೆ ನೀಡಿದಷ್ಟೇ ವಿದ್ಯುತ್‌ಗೂ ಪ್ರಾಮುಖ್ಯತೆ: ಐನಾಪುರದಲ್ಲಿ 110 ಕೆವಿ ಸ್ಟೇಶನ್ ನಿರ್ಮಾಣ- ಸಚಿವ ಎಂ.ಬಿ. ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ನಮ್ಮ ಸರ್ಕಾರ ನೀರಾವರಿಯಷ್ಟೇ ವಿದ್ಯುತ್ತಿಗೂ ಪ್ರಾಮುಖ್ಯತೆ ನೀಡಿದೆ. ಜಲಕ್ರಾಂತಿಯೊಂದಿಗೆ ಇಂಧನ ಕ್ರಾಂತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಹೇಳಿದರು.ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನಗರದಲ್ಲಿ ನಿರ್ಮಿಸಲಾದ ವಿಜಯಪುರದ ಕಾರ್ಯ ಮತ್ತು ಪಾಲನೆ ವಿಭಾಗೀಯ ಕಚೇರಿಯ ನೂತನ ಕಟ್ಟಡವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.ನೀರಿಗೆ ಆದ್ಯತೆ ನೀಡಿದ ಮಾದರಿಯಲ್ಲೇ ರೈತರಿಗೆ ವಿದ್ಯುತ್…

Read More

ಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವನ್ನು ವಿಜಯಪುರದಲ್ಲಿ ಆಯೋಜಿಸುವ ಮೂಲಕ ಈ ಬೃಹತ್ ಕ್ರೀಡಾಕೂಟವು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಆಯೋಜನೆಗೊಂಡಿದ್ದು, ವಿಜಯಪುರ ನಗರಕ್ಕೆ ಹೊಸ ಔಟ್‌ಲುಕ್ ನೀಡಿದೆ ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಭಾನುವಾರ ನಗರದಲ್ಲಿ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯ ಮಟ್ಟದ ಪಂದ್ಯಾಟಗಳನ್ನು…

Read More

ಭೃಷ್ಟಾಚಾರ: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ವಿಜಯಪುರ ಜಿಲ್ಲೆಯಲ್ಲಿನ ಕಾರ್ಮಿಕ ಅಧಿಕಾರಿ ಕಛೇರಿಯಲ್ಲಿ ವ್ಯಾಪಕವಾಗಿ ಅವ್ಯವಹಾರ ಮತ್ತು ಭೃಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಜಿಲ್ಲೆಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯ ಕೈಗೊಂಡಿದ್ದಾರೆ.ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕಾರ್ಮಿಕ ಇಲಾಖೆಯನ್ನು ಶೋಧನೆ ಮಾಡಲು ಶೋಧನಾ ವಾರಂಟ್ ಹೊರಡಿಸಿದ್ದು, ಹೀಗಾಗಿ ವಿಜಯಪುರ ಜಿಲ್ಲೆಯ…

Read More

ನಾಗಠಾಣದಲ್ಲಿ ಸಂಭ್ರಮದ ಚೌಡೇಶ್ವರಿ ದೇವಿಯ ಜಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ಬಾದ್ಮಿ ಅಮಾವಾಸ್ಯೆ ನಿಮಿತ್ತ ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವ ಬಹು ವಿಜೃಂಭಣೆಯಿಂದ ಜರುಗಿದ್ದು, ದೇವಿಯ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು.ಶುಕ್ರವಾರ ಸಂಜೆ ಭಕ್ತ ಮಹಿಳೆಯರು ಅಂಬಲಿ ಬಿಂದಿಗೆ ಹೊತ್ತು, ಬಾಸಿಂಗ, ಕಳಸದ ಮೆರವಣಿಗೆಯು ಗುಡಿ ತಲುಪಿ, ಅಲ್ಲಿ ಎಲ್ಲರೂ ಅಂಬಲಿ ಅರ್ಪಿಸಿ, ಪುನೀತರಾದರು.ಚೌಡೇಶ್ವರಿ ದೇವಿಯ ಮುಖವಾಡ ಹೊತ್ತವರು ಅಪಾರ ಸಂಖ್ಯೆಯ ಭಕ್ತರು, ಬಾಜಾ-ಭಜಂತ್ರಿ, ಡೊಳ್ಳು ವಾದ್ಯಗಳು ಹಾಗೂ ಭಕ್ತರ ಜಯಘೋಷಗಳೊಂದಿಗೆ ಇಡೀ ಗ್ರಾಮದ ಭಕ್ತರ ಮನೆ ಮನೆಗೆ…

Read More

ವೃಕ್ಷ ಅಭಿಯಾನ, ಮೆರಾಥಾನ್‌ ಎಫೆಕ್ಟ್‌:ಬಿರು ಬೇಸಿಗೆಯಲ್ಲೂ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗದ ತಾಪಮಾನಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ನಗರದಲ್ಲಿ ಹಲವು ವರ್ಷಗಳಿಂದ ಮೆರಾಥಾನ್‌ ನಡೆಸುತ್ತಿದ್ದೇವೆ. ಇದರಿಂದಾಗಿ ವಿಜಯಪುರದ ವಾತಾವರಣ ಸಂಪೂರ್ಣ ಬದಲಾಗಿದೆ. ಈ ವರ್ಷ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗಿಲ್ಲ. ಇದರಿಂದಾಗಿ ವಿಜಯಪುರಕ್ಕೆ ಗ್ರೇಟರ್‌ ಲುಕ್‌ ಬಂದಿದೆ ಎಂದು ವೃಕ್ಷೋತ್ಥಾನ್‌ ಹಾಗೂ ಮೆರಾಥಾನ್‌ ರೂವಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದ ಬಿಎಲ್‌ ಡಿಇ ಸಂಸ್ಥೆಯಲ್ಲಿ ಶನಿವಾರ ಬ್ಯಾಡ್ಮಿಂಟನ್‌ ಅಂಗಳ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಮೆರಾಥಾನ್‌ ಕೂಡಾ ನಡೆಸುತ್ತಿರುವುದರಿಂದ ವಿಜಯಪುರಕ್ಕೆ ಹೊಸ ಲುಕ್‌…

Read More

ಜನ-ಜಾನುವಾರು ಹಾನಿ ತಪ್ಪಿಸಲು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನ ಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಹವಾಮಾನ ಮಾಹಿತಿ ಹಾಗೂ ಗುಡುಗು-ಮಿಂಚು ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಂಸಿ) ಅಭಿವೃದ್ಧಿಪಡಿಸಿರುವ SIDILU ಆ್ಯಪ್ ನಲ್ಲಿ ಪಡೆಯಬಹುದು ಎಂದವರು ತಿಳಿಸಿದ್ದಾರೆ.ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ (NDMA) ಅಭಿವೃದ್ಧಿಪಡಿಸಿರುವ…

Read More

ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಜ್ಞಾನಪ್ರಸಾರದಮಾಧ್ಯಮ: ಡಾ. ಕುಶಾಲ ಬರಗೂರು ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಮನೆಗೊಂದು ಗ್ರಂಥಾಲಯ ಅನುಷ್ಠಾನಕಾರ್ಯಕ್ರಮ ರಾಜ್ಯವ್ಯಾಪಿ ಶರವೇಗದಲ್ಲಿ ನಡೆಯುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಡಾ. ಕುಶಾಲ್ ಬರಗೂರು ಹೇಳಿದರು.ವಿಜಯಪುರದ ಗಣೇಶ ನಗರ ಬಡಾವಣೆಯ ಶಿಕ್ಷಕ ಸಾಹಿತಿಸಿದ್ದನಗೌಡ ಪೊಲೀಸಪಾಟೀಲ ಅವರ ನಿವಾಸದಲ್ಲಿ ಮನೆಗೊಂದುಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ರಾಜ್ಯದ ಒಂದು ಲಕ್ಷಕ್ಕೂ ಅಧಿಕ ಮನೆಯಲ್ಲಿ ಗ್ರಂಥಾಲಯವನ್ನು ಸ್ಥಾಪಿಸುವ ಗುರಿಯನ್ನು ಪ್ರಾಧಿಕಾರ ಹೊಂದಿದೆ. ಇದು ಬೇರೆ ಬೇರೆ ರಾಜ್ಯಗಳಿಗಷ್ಟೇ ಅಲ್ಲ. ಅಂತರಾಷ್ಟ್ರೀಯ…

Read More

ಎಸ್.ವಿ. ಬುರ್ಲಿ ಹಾಗೂ ಜಯಶ್ರೀ ಬುರ್ಲಿ ಇವರಿಗೆ ಜೀವಮಾನದ ಅಂತರಾಷ್ಟ್ರೀಯ ಫೆಲೋಷಿಪ್-26 ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಜಿಲ್ಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರು ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ ಇಂಡಿಯಾದ ನ್ಯಾಷನಲ್ ಡೈರೆಕ್ಟರ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ. ಬುರ್ಲಿ ಇವರಿಗೆ ಹಾಗೂ ಜಯಶ್ರೀ ಬುರ್ಲಿ ಜೀವಶಾಸ್ತ್ರಉಪನ್ಯಾಸಕಿ ಇವರಿಗೆ ಇಂಡೋ–ನಾಮ್ ಸೈಂಟಿಫಿಕ್‌ ಸಮ್ಮಿತ್ -26 ಫೆಲೋ ಶಿಪ್ ಪ್ರಶಸ್ತಿ ಘೋಷಿಸಲಾಗಿದೆ.ಮೇ 17 ರಿಂದ22 ರವರೆಗೆ ವಿಯೆಟ್ನಾಂನ ಡನಾಂಗ್ ದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ…

Read More

ಗಾನಗಂಗೋತ್ರಿ ಗಾಯನ: ವಿದ್ಯಾಶ್ರೀ ನಡುಗಡ್ಡಿ ಆಯ್ಕೆ

ಸಪ್ತಸಾಗರ ವಾರ್ತೆ, ಇಂಡಿ, ಮೇ 15: ಬೆಂಗಳೂರಿನ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 11 ನೇ ರಾಷ್ಟ್ರೀಯ ನೃತ್ಯ ಕಲಾ ಮೇಳ ಹಾಗೂ 75 ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಇದೇ ಮೇ 23,24 ರಂದು ಬೆಂಗಳೂರಿನ ಸಂಸ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕವನ ವಾಚನ, ನೃತ್ಯಾoಜಲಿ, ಸಮೂಹ ನೃತ್ಯ ಪ್ರದರ್ಶನ ಹಾಗೂ…

Read More

ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಾಳ ಹೊಸ ಪಕ್ಷದ ಬ್ಲಾಕ್ ಮೇಲ್: ಯತ್ನಾಳಗೆ ಸಚಿವ ಎಂಬಿಪಿ ಟಾಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15 :ಶಾಸಕ ಯತ್ನಾಳರಿಗೆ ಬಿಜೆಪಿ ವ್ಯಾಮೋಹ ಹೋಗಿಲ್ಲ. ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ರೀತಿ ಹೊಸ ಪಕ್ಷದ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದೇ ಇಲ್ಲ ಬಿಡಿ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ಪ್ರಯತ್ನ ಅಲ್ಲ. ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬೇಕಾದರೆ ಯತ್ನಾಳರು ಪಕ್ಷ ಕಟ್ಟಲಿ ಅದಕ್ಕೆ ಶುಭವಾಗಲಿ. ಅವರು ತಮಿಳುನಾಡಿನ…

Read More