ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರರ, ಡಿ.3: ಇಂಚಗೇರಿ ಆ ತತ್ವಧ್ಯಾತ್ಮ ಸಂಪ್ರದಾಯದ ಶಾಖಾಮಠವಾದ ವಿಜಯಪುರ ನಗರದ ಇಬ್ರಾಹಿಂಪುರದ ಶ್ರೀ ಜಯರಾಮೇಶ್ವರ ಮಠದ ಶ್ರೀ ಜಯರಾಮೇಶ್ವರ ಮಹಾರಾಜರ ಪುಣ್ಯಸ್ಮರಣೆ (ಜಾತ್ರಾಮಹೋತ್ಸವ)ಯನ್ನು ಬುಧವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.ಪುಣ್ಯಸ್ಮರಣೆಯ ಅಂಗವಾಗಿ ಬೆಳಿಗ್ಗೆ ಶ್ರೀ ಜಯರಾಮೇಶ್ವರ ಮಹಾರಾಜರ ಗದ್ದುಗೆಗೆ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.ಮಕ್ಕಳು ಮಹಿಳೆಯರೂ ಸೇರಿದಂತೆ ಬಹುಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಆಗಮಿಸಿ ಶ್ರೀ ಜಯರಾಮೇಶ್ವರರ ಗದ್ದುಗೆ ದರ್ಶನ ಪಡೆದರು. ಮಧ್ಯಾಹ್ನ ಪುಷ್ಪವೃಷ್ಟಿಯೊಂದಿಗೆ ಕಾರ್ಯಕ್ರಮ ಮಂಗಲಗೊಂಡಿತು. ನಂತರ ಅನ್ನಸಂತರ್ಪಣೆ ನಡೆಯಿತು.ಶ್ರೀ ಜಯರಾಮೇಶ್ವರ ಮಹಾರಾಜರ ಮಠದ…

Read More

ವಿಕಲಚೇತನರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ-ಜಿಲ್ಲಾಧಿಕಾರಿ ಡಾ. ಆನಂದ.ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಭೂತ ಸೌಕರ್ಯಗಳು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಥಳೀಯ…

Read More

ಡಿ.04 ರಂದು ಬಾಲ್ಯವಿವಾಹ ಹಾಗೂ ಪೋಕ್ಸ್‌ ಕಾಯ್ದೆ ಹಾಗೂ ಮಕ್ಕಳ‌ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.4:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹುನಮಂತರಾಯ ರಂಗಮಂದಿರದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ…

Read More

ವೃಕ್ಷಥಾನ್ ಹೆರಿಟೇಜ್ ರನ್:ಚಿತ್ರಕಲೆ, ನಿಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 3: ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಪರ್ಧೆಗಳ ಸಂಘಟನಾ ಸಮಿತಿ ಪ್ರಕಟಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಪಿ.ಯು ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಬಾಲಕರು ಹಾಗೂ ಬಾಲಕಿಯರಿಗಾಗಿ ಸ್ಪರ್ಧೆಯನ್ನು ಆಯೋಜಿಲಾಗಿತ್ತು. ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮತ್ತು ನಿಬಂಧ ಸ್ಪರ್ಧೆಯಲ್ಲಿ ಸುಮಾರು 370 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಸ್ಥಾನ ರೂ.10 ಸಾವಿರ, ದ್ವಿತೀಯ ಸ್ಥಾನ ರೂ.7500,…

Read More

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ರೈತರ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3 :ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲೆಯಲ್ಲಿ ರೈತರು ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ರೈತ ಸಂಘದ ನಿಯೋಗ ಮನವಿ ಮಾಡಿಕೊಂಡಿದೆ.ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ…

Read More

ಬಿ. ಎಲ್. ಡಿ. ಇ. ಎಫ್. ಎಂ ರೆಡಿಯೋ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ಶಿಕ್ಷಣ, ಆರೋಗ್ಯ, ಸಮಾಜ ಸೇವೆಯ ಮೂಲಕ ಮನೆಮಾತಾಗಿರುವ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಇದೀಗ ಮಾಧ್ಯಮ ಕ್ಷೇತ್ರಕ್ಕೂ ಮುಂದಡಿ ಇಟ್ಟಿದೆ. ಜಿಲ್ಲೆಯ ಜನರಿಗೆ ಎಫ್. ಎಂ. ರೇಡಿಯೂ ಮೂಲಕ ಮತ್ತಷ್ಟು ಹತ್ತಿರವಾಗಲು ಸಂಸ್ಥೆ ಈಗ ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ಸಮುದಾಯ ರೇಡಿಯೋ ಕೇಂದ್ರ ಪ್ರಾರಂಭಿಸಿದೆ.ರೈತರು, ಮಹಿಳೆಯರು, ಯುವಕರು ಹಾಗೂ ಸಮಾಜದ ನಾನಾ ಸ್ತರದ ಜನರನ್ನು ಕೇಂದ್ರೀಕರಿಸಿ ಅನೇಕ ಕಾರ್ಯಕ್ರಮಗಳನ್ನೂ ಈ ಬಾನುಲಿ ಕೇಂದ್ರ ಸಿದ್ಧಪಡಿಸಿದ್ದು, ಇದೇ ಡಿಸೆಂಬರ್ 7…

Read More

ಶಾಲ್ಮೋನ್ ಚೋಪಡೆಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಅವರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ನರ್ಸಸ್ ಅವಾರ್ಡ್-2025 ಲಭಿಸಿದೆ.ಕರ್ನಾಟಕ ನ್ಯೂಸಪೇಪರ್ಸ್ ಅಸೋಸಿಯೇಶನ್ ಮತ್ತು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನೀಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನಹಾಲ್ ನಲ್ಲಿ ನವೆಂಬರ್ 27 ರಂದು ಗುರುವಾರ ನಡೆದ ಕಾರ್ಯಕ್ರಮದಲ್ಲಿ ಗಣ್ಯರಾದ ಡಾ. ಲವಿನಾ ಜನಾರ್ಧನ, ಡಾ….

Read More

ಕ್ರೆಡಿಟ್ ಬ್ಯಾಂಕ್ ಮೌಲ್ಯಯುತ ಅಧ್ಯಯನ ವ್ಯವಸ್ಥೆ: ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2: ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಅಕ್ಯಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ವ್ಯವಸ್ಥೆಯು ವಿದ್ಯಾರ್ಥಿಗಳ ಅಧ್ಯಯನ ವಿಧಾನದಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಅಂತರಿಕ ಗುಣಮಟ್ಟ ಭರವಸೆ ಕೋಶ, ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ ಪಿಎಮ್-ಉಷಾ, ಭಾರತದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದೊಂದಿಗೆ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗಾಗಿ…

Read More

ಡಿ.21 ರಿಂದ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.2 :ಜಿಲ್ಲೆಯಾದ್ಯಂತ ಡಿಸೆಂಬರ್ 21 ರಿಂದ 24ರವರೆಗೆ ನಾಲ್ಕು ದಿನಗಳವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಿಸೆಂಬರ್ 21ರಂದು ಬೂತ್ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ನಂತರದ ಮೂರು ದಿನ ಮನೆ ಮನೆಗೆ…

Read More

ಮಾನಸಿಕ ಆರೋಗ್ಯ ಕಾಪಾಡುವುದು ಅವಶ್ಯ: ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2: ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾನಸಿಕ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮಹತ್ವದ ಅಂಶವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಮಾಜ ಕಾರ್ಯ ವಿಭಾಗ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ ಪಿಎಮ್ -ಉಷಾ, ಭಾರತದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದೊಂದಿಗೆ ಇತ್ತೀಚಿಗೆ ಹಮ್ಮಿಕೊಂಡಿದ್ದ “ಮಾನಸಿಕ ಬೆಂಬಲ ಹೊಂದಲು ಆಪ್ತಸಮಾಲೋಚನೆ”…

Read More