ಕಾಯಕ, ದಾಸೋಹ ಬಸವಣ್ಣನವರ ಶ್ರೇಷ್ಠ ಕೊಡುಗೆ-ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ಇಂಡಿ, ಏ. 20: ಬಸವಣ್ಣನವರು ವಚನಗಳ ಮೂಲಕ ಸ್ವಾಸ್ಥ್ಯ ಸಮಾಜಕ್ಕೆ ಬೇಕಾದ ನೀತಿಸೂತ್ರಗಳ ಸಂದೇಶ ನೀಡಿದ್ದು, ಅವು ಇಡೀ ಜಗತ್ತಿನ ಮನುಕುಲಕ್ಕೆ ನೀಡಿದಂತಹ ಜೀವನ ಸಂವಿಧಾನ, ಸಾಮಾಜಿಕ ನೀತಿ ಸಂಹಿತೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಸೋಮವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಬಸವ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಯಕ, ದಾಸೋಹ ತತ್ವಗಳು ಬಸವಣ್ಣನವರ ಶ್ರೇಷ್ಠ ಕೊಡುಗೆಗಳು. ಅವರ ಶರಣ ಸಂಸ್ಕೃತಿ ಇಡೀ ವಿಶ್ವಕ್ಕೆ ಆದರ್ಶ ಮಾನವ ಸಂಸ್ಕೃತಿಯಾಗಿದೆ. ನುಡಿದಂತೆ…


