ಕನ್ನಡ ನಮ್ಮೆಲ್ಲರ ಉಸಿರಾಗಬೇಕು: ಡಾ.ಲಕ್ಷ್ಮಿದೇವಿ ಅಲ್ಕೋಡ
ಸಪ್ತಸಾಗರ ವಾರ್ತೆ, ವಿಜಯಪುರ, ನ. 23 : ಕನ್ನಡ ಭಾಷೆಯ ಅಭಿಮಾನ ಇಟ್ಟುಕೊಳ್ಳಬೇಕು. ಈ ನಾಡಿನಲ್ಲಿ ಕನ್ನಡ ಕಡ್ಡಾಯಗೊಳಿಸಬೇಕು. ಕನ್ನಡ ನಮ್ಮೆಲ್ಲರ ಉಸಿರಾಗಬೇಕೆಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗ ಮುಖ್ಯಸ್ಥೆ ಡಾ. ಲಕ್ಷ್ಮಿದೇವಿ ಅಲ್ಕೋಡ ಅಭಿಪ್ರಾಯ ವ್ಯಕ್ತಪಡಿಸಿದರು.ರವಿವಾರ ಜಿಲ್ಲಾ, ತಾಲೂಕ ಹಾಗೂ ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಆಶ್ರಯದಲ್ಲಿ ಜರುಗಿದ ದತ್ತಿಗಳಾದ ದಿ. ಜಿ.ಎಸ್. ಬಗಲಿ ದತ್ತಿ, ದಿ.ಮಲ್ಲಪ್ಪ ಚಂದಪ್ಪ ಯಲಗೋಡ. ದತ್ತಿ, ದಿ. ಶಿವಮೂತೆ೯ಪ್ಪ ಪಾಟೀಲ ದತ್ತಿ. ಮಾತೋಶ್ರೀ…


