ವೃಕ್ಷಥಾನ್ ಹೆರಿಟೇಜ್ ರನ್- 20 ಸಾವಿರ ದಾಖಲೆಯ ಓಟಗಾರ ನೋಂದಣಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ವೃಕ್ಷಥಾನ್ ಹೆರಿಟೇಜ್ ರನ್ ಆರನೇ ಆವೃತಿಯಲ್ಲಿ ಈ ಬಾರಿ 20 ಸಾವಿರಕ್ಕೂ ಹೆಚ್ಚು ಓಟಗಾರರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು, ಮುಂಬೈ, ದೆಹಲಿ ಮತ್ತು ಚೆನೈ ಮಹಾನಗರಗಳನ್ನು ಹೊರತು ಪಡಿಸಿದರೆ, ವಿಜಯಪುರದಂತಹ ಟೈರ್-3 ನಗರದಲ್ಲಿ ನಡೆಯುವ ಮ್ಯಾರಥಾನ್ ನದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಓಟಗಾರರು ಭಾಗವಹಿಸುತ್ತಿರುವುದು ಇತಿಹಾಸ ಸೃಷ್ಟಿಸಲಿದೆ ಎಂದು ಕೋಟಿ ವೃಕ್ಷ ಅಭಿಯಾನ ಪ್ರತಿಷ್ಠಾನ ತಿಳಿಸಿದೆ.ಒಂದು ಸಾಮಾಜಿಕ ಉದ್ದೇಶಕ್ಕಾಗಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಒಂದಡೆ ಸೇರಿ ಓಟದ ಮೂಲಕ ವಿಜಯಪುರದ…

Read More

ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡಲು ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯ: ಸಚಿವ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡಲು ಸಿ.ಎಸ್.ಆರ್ ಅನುದಾನಡಿ ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆ ಪ್ರಾರಂಭೋತ್ಸವದ ಅಂಗವಾಗಿ 9ನೇ ತರಗತಿ ಉದ್ಘಾಟನೆ, ಸರಸ್ವತಿ ಪೂಜೆ ಹಾಗೂ ಸಿ.ಎಸ್.ಆರ್ ಅನುದಾನದಲ್ಲಿ ಶಾಲಾ ಮಕ್ಕಳಿಗಾಗಿ ಅಳವಡಿಸಿರುವ ಕ್ರೀಡಾ ಸಲಕರಣೆಗಖನ್ನು ವಿದ್ಯಾರ್ಥಿಗಳಿಂದ ಉದ್ಘಾಟಿಸಿದ…

Read More

ವೃಕ್ಷಥಾನ್ ಹೆರಿಟೇಜ್ ರನ್: ಮಕ್ಕಳಿಗೆ ನಿಬಂಧ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ನವೆಂಬರ್ 23 ರಂದು ರವಿವಾರ ನಿಬಂಧ ಸ್ಪರ್ಧೆ ಆಯೋಜಿಸಲಾಗಿದೆ.ರವಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಗಗನ ಮಹಲ ಉದ್ಯಾನದಲ್ಲಿ ಈ ಸ್ಪರ್ಧೆ ನಡೆಯಲಿದೆ. ಪ್ರಾಥಮಿಕ, ಹೈಸ್ಕೂಲು ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮೂರು ಪ್ರತ್ಯೇಕ ವಿಭಾಗಗಳಲ್ಲಿ ನಿಬಂಧ ಸ್ಪರ್ಧೆ ಆಯೋಜಿಸಲಾಗಿದೆ.ಬ್ರಿಟಿಷರ ಕಾಲದಿಂದಲೂ ಬರದ ಜಿಲ್ಲೆ ಎಂದು ಹೆಸರಾಗಿದ್ದ ವಿಜಯಪುರದಲ್ಲಿ ಈಗ ಪರಿಸ್ಥಿತಿ ಬದಲಾಗಿದೆ. ನೀರಾವರಿ, ಕೋಟಿ…

Read More

ಶ್ರೀಲಂಕಾದಲ್ಲಿ ವಿಜಯಪುರದ ನಾಟ್ಯಕಲಾ ನೃತ್ಯ ಅಕಾಡೆಮಿ ತಂಡದ ನೃತ್ಯ ಪ್ರದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ, ನ.೨೦: ಇಲ್ಲಿಯ ನಾಟ್ಯಕಲಾ ನೃತ್ಯ ಅಕಾಡೆಮಿ ತಂಡ ವಿದೇಶದಲ್ಲಿ ನೃತ್ಯ ಪ್ರದರ್ಶನ ನೀಡುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದೆ.ನವೆಂಬರ್ ೧೫ರಿಂದ ೧೮ ರ ವರೆಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ನೃತ್ಯ ಸಮರ್ಪಣ- ೨೦೨೫ ಉತ್ಸವದಲ್ಲಿ ತಂಡದ ಸದಸ್ಯರು ರೋಮಾಂಚನಕಾರಿ ನೃತ್ಯ ಪ್ರದರ್ಶನ ನೀಡಿದರು.ತಂಡದ ಸದಸ್ಯೆ ಸಾನ್ವಿ ದೊಡಮನಿ ಅವರು ನೀಡಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ಸನ್‌ಫೊ ಗ್ಲೋಬಲ್ ಫೆಡರೇಶನ್ ಸಸ್ಟೇನಬಿಲಿಟಿ ಕಲ್ಚರಲ್ ಡಿಪ್ಲೊಮಸಿ ಪ್ರಶಸ್ತಿ (ಯುನೈಟೆಡ್ ರಿಪಬ್ಲಿಕ್ ಆಫ್ ಇಂಡಿಯಾ ಮತ್ತು ಡೆಮಾಕ್ರಟಿಕ್ ಸೋಷಿಯಲಿಸ್ಟ್…

Read More

ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಭುವನೇಶ್ವರಿ ಮಠಪತಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20:ನಗರದ ಭುವನೇಶ್ವರಿ ದಾನಯ್ಯ ಮಠಪತಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ವಿಜಯಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮಿಜಾ ನದಾಫ ಅವರು ತಕ್ಷಣ ಜಾರಿಗೆ ಬರುವಂತೆ ಈ ನೇಮಕ ಮಾಡಿ ಆದೇಶಿಸಿದ್ದಾರೆ.

Read More

ಚಿದಂಬರ ಸೇವಾ ಸಮಿತಿ ನೇತೃತ್ವದಲ್ಲಿ ಮುರುಗೋಡಕ್ಕೆ ಪಾದಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20 : ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡದಲ್ಲಿ ಶ್ರೀ ಶಿವ ಚಿದಂಬರ ಮಹಾಸ್ವಾಮಿಗಳ ೨೬೭ ನೇ ಅವತಾರ ಜಯಂತಿ ಶೈವಾಗಮೋಕ್ಷ ಮಹೋತ್ಸವ ನ.೨೬ ರಂದು ನಡೆಯಲಿದ್ದು, ಈ ಉತ್ಸವದಲ್ಲಿ ಪಾಲ್ಗೊಳ್ಳಲು ನಗರದ ಚಿದಂಬರ ದೇವಸ್ಥಾನದಿಂದ ಭಕ್ತರು ಪಾದಯಾತ್ರೆ ಬೆಳೆಸಿದರು.ನಗರದ ಚಿದಂಬರ ದೇವಸ್ಥಾನದಿಂದ ಶ್ರೀ ಕ್ಷೇತ್ರ ಮುರಗೋಡಕ್ಕೆ ಪಾದಯಾತ್ರೆಯಲ್ಲಿ ತೆರಳಿದ ಭಕ್ತರು ವಿಜಯಪುರ ನಗರದಿಂದ ಹಲಗಣಿ, ಮುಧೋಳ, ಯರಗಟ್ಟಿ, ಹಲಕಿ ಕ್ರಾಸ್ ಮೂಲಕ ನ. ೨೬ ಕ್ಕೆ ಶ್ರೀ ಕ್ಷೇತ್ರ ತಲುಪಲಿದ್ದಾರೆ.ಈ ಪಾದಯಾತ್ರೆಯಲ್ಲಿ…

Read More

ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20 :ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದೆ. ಅವರ ಈ ದರಿದ್ರ ರಾಜಕಾರಣದಿಂದ ಕರ್ನಾಟಕ ಜನತೆಗೆ ಶಾಪವಾಗಿ ಪರಿಗಣಿಸಿದೆ. ಇನ್ನೂ ಗೃಹ ಸಚಿವರು ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಸಂಪೂರ್ಣ ಹಾಳಾಗಿದೆ. ಹಾಡಹಗಲೇ ಕೊಲೆ, ಸುಲಿಗೆ ನಡೆಯುತ್ತಿವೆ….

Read More

ಕಾನಿಪ ಸಂಘದ ಸದಸ್ಯರಿಗೆನೇತ್ರ ಚಿಕಿತ್ಸೆ ಉಚಿತ : ಡಾ. ಪ್ರಭುಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20:ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಸಿಕೊಳ್ಳುವ ಪತ್ರಕರ್ತರು ಆಧುನಿಕ ಸಮಾಜದ ಕೈಗನ್ನಡಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆಂದು ನೇತ್ರ ತಜ್ಞ ಡಾ.ಪ್ರಭುಗೌಡ ಪಾಟೀಲ ಬಣ್ಣಿಸಿದರು.ನಗರದ ತಮ್ಮ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಭಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನೂತನ ಪದಾಧಿಕಾರಿಗಳಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ತಮ್ಮ ಲೇಖನಿಯ ಮೂಲಕ ಸಮಾಜದ ಕಣ್ತೆರೆಸುವ ಕಾರ್ಯದಲ್ಲಿ ತೊಡಗಿರುವ ಪತ್ರಕರ್ತರ ಕಣ್ಣುಗಳ ರಕ್ಷಣೆಗಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಸದಸ್ಯರಿಗೆ ಶೀಘ್ರದಲ್ಲಿಯೇ ’ಫ್ಯಾಮಿಲಿ ಕಾರ್ಡ್’ ಮಾಡಿಕೊಡುವುದಾಗಿ ತಿಳಿಸಿದ…

Read More

ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿಯ ಸದಸ್ಯರಾಗಿ ಸಾಹಿತಿ ಪ್ರೊ, ಅಡವಿಸ್ವಾಮಿ ಕೊಳಮಲಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20:ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಮನೆಗೊಂದು ಗ್ರಂಥಾಲಯದ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರಾಗಿ ಸಾಹಿತಿ ಪ್ರೊ ಅಡವಿಸ್ವಾಮಿ ಕೊಳಮಲಿ ಸೇರಿದಂತೆ ಜಿಲ್ಲೆಯ ಹತ್ತು ಜನ ಸದಸ್ಯರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯದ ಜಾಗೃತಿ ಸಮಿತಿಯ ಸದಸ್ಯರನ್ನಾಗಿ ನೇಮಿಸಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ, ಮಾನಸ ಅವರು ಇಂದು ವಿಜಯಪುರದ ತೊರವಿ ರಸ್ತೆಯಲ್ಲಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಿಗೆ…

Read More

ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯ:ಗೋಲಶೆಟ್ಟಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20 : ಉತ್ತರ ಕರ್ನಾಟಕಕ್ಕೆ ನಿತ್ಯ ಅನ್ಯಾಯವಾಗುತ್ತಿದೆ, ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ, ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಹೋರಾಟವನ್ನು ನಾವು ಇನ್ನಷ್ಟೂ ತೀವ್ರಗೊಳಿಸಲಿದ್ದೇವೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖರಾದ ನಾಗೇಶ ಗೋಲಶೆಟ್ಟಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಡು ವಿಭಜನೆ ಮಾಡುತ್ತಿಲ್ಲ, ಇದು ವಿಭಜನೆಯಲ್ಲ, ಕಳೆದ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ದೊಡ್ಡ ಪ್ರಮಾಣದ ಅನ್ಯಾಯವಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೇರಳವಾದ ಸಂಪನ್ಮೂಲಗಳಿದ್ದರೂ ಉ.ಕ….

Read More