ಅಗ್ನಿ ದುರಂತ ಹಾನಿಗೆ ಪರಿಹಾರ:ದುಷ್ಕೃತ್ಯದ ಬಗ್ಗೆ ತನಿಖೆಗೆ ಆದೇಶ- ಸಚಿವ ಶಿವಾನಂದ ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 14: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್‌ ಲಿಮಿಟೆಡ್‌ ಬಳಿ ಗುರುವಾರ ಸಂಭವಿಸಿದ ಅಹಿತಕರ ಘಟನೆಯಲ್ಲಿ ಸಂಭವಿಸಿದ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಹಾಗೂ ದುರಂತದ ಬಗ್ಗೆ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.ದುರಂತದ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ಬಿ. ತಿಮ್ಮಾಪುರ ಅವರೊಂದಿಗೆ ಭೇಟಿ ನೀಡಿ ದುರಂತದಲ್ಲಿ ಹಾನಿಗೀಡಾದ ಕಬ್ಬು, ಟ್ರ್ಯಾಕ್ಟರ್‌ಗಳು, ಬೈಕ್‌ಗಳನ್ನು ವೀಕ್ಷಣೆ ಮಾಡಿ ರೈತರ…

Read More

16ರಂದು ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13: ನಗರದಲ್ಲಿ ಡಿಸೆಂಬರ್ 7 ರಂದು ನಡೆಯುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮತ್ತು ನಿಬಂಧ ಸ್ಪರ್ಧೆ ಆಯೋಜಿಸಲಾಗಿದೆ.ನವೆಂಬರ್ 16 ರಂದು ರವಿವಾರ ಬೆ.10ಗಂ. ನಗರದ ಗಗನ ಮಹಲ ಉದ್ಯಾನದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಾಥಮಿಕ ವಿಭಾಗ, ಹೈಸ್ಕೂಲು ವಿಭಾಗ ಹಾಗೂ ಪಿಯು ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ.ವಿಜಯಪುರ ನಗರದಲ್ಲಿರುವ ಪ್ರಾಚೀನ ಸ್ಮಾರಕಗಳ ಕುರಿತು ಚಿತ್ರ ಬಿಡಿಸುವ ಸ್ಪರ್ಧೆ ಇದಾಗಿದೆ. 21 ಕಿ. ಮೀ….

Read More

ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13:ಐತಿಹಾಸಿಕ ನಗರ ವಿಜಯಪುರದ ಪ್ರಗತಿ ಶಾಲೆಯ ಆವರಣದಲ್ಲಿ ನವೆಂಬರ್ 19ರಂದು ನಡೆಯುವ ಅಖಿಲ ಕರ್ನಾಟಕ 27ನೇ ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರು ಬಿಡುಗಡೆಗೊಳಿಸಿದರು.ಸಮ್ಮೇಳನದಲ್ಲಿ ಅರ್ಥಪೂರ್ಣವಾದ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ, ಮಾನಸ ಅವರು ಹಾಗೂ ನಾಡಿನ ಸಾಹಿತ್ಯ ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನ್ನಡ ಪುಸ್ತಕ ಪರಿಷತ್ತಿನ ಅಧ್ಯಕ್ಷ ಫ. ಗು ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಶಂಕರ…

Read More

ವೃಕ್ಷೋಥಾನ್ ರನ್-ನೋಂದಣಿಗೆ ನವೆಂಬರ್ 19 ಕೊನೆಯ ದಿನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13: ವೃಕ್ಷೋಥಾನ್ ಹೆರಿಟೇಜ್ ರನ್ ಆರನೇ ಆವೃತ್ತಿ ಬರುವ ಡಿಸೆಂಬರ್ 7 ರಂದು ಜರುಗಲಿದ್ದು, ನೋಂದಣಿ ಮಾಡಿಕೊಳ್ಳಲು ನವೆಂಬರ್ 19 ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಂಘಟಕ, ವಿಜಯಪುರ ಸೈಕ್ಲಿಂಗ್ ಗ್ರುಪ್ ಅಧ್ಯಕ್ಷ ಡಾ.ಮಹಾಂತೇಶ ಬಿರಾದಾರ ಹೇಳಿದರು.ವಿಜಯಪುರದಲ್ಲಿ ಬುಧವಾರ ಸಂಜೆ ನಡೆದ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 11 ಸಾವಿರಕ್ಕೂ ಹೆಚ್ಚು ಓಟಗಾರರು ನೋಂದಣಿ ಮಾಡಿಸಿಕೊಂಡಿದ್ದು, ನೋಂದಣಿಗೆ ಕೊನೆಯ 5 ದಿನಗಳು ಮಾತ್ರ ಉಳಿದಿದ್ದು,…

Read More

14ರಂದು ಮಧುಮೇಹ ಪಾದ ರೋಗದ ತಪಾಸಣೆ ಹಾಗೂ ಉಚಿತ ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 12:ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1…

Read More

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ನ.12:ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಕಳೆದ ವರ್ಷ…

Read More

ಖಾಲಿ ಹುದ್ದೆಗಳ ಭರ್ತಿಗೆ ನಿರಾಣಿ ಪತ್ರ

ಸಪ್ತಸಾಗರ ವಾರ್ತೆ,ವಿಜಯಪುರ, 12 :ಮೀಸಲಾತಿ ಗೊಂದಲವನ್ನು ಆದಷ್ಟು ಬೇಗ ನಿವಾರಿಸಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕು ಹಾಗೂ ಕೂಡಲೇ ವಯೋಮಿತಿಯನ್ನು ಸಡಿಲಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಒತ್ತಾಯಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಲಿಖಿತ ಪತ್ರ ಬರೆದು ಒತ್ತಾಯಿಸಿರುವ ನಿರಾಣಿ ಅವರು, ಗ್ರಾಮೀಣ ಭಾಗದ ಬಡ ನಿರುದ್ಯೋಗಿಗಳು ಸರ್ಕಾರಿ ನೌಕರಿಯನ್ನು ಪಡೆದುಕೊಳ್ಳಬೇಕೆಂಬ ಮಹದಾಸೆಯೊಂದಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಸ್ವಂತ ಊರು, ವಯಸ ವಯಸ್ಸಾದ…

Read More

ಟೆಕ್ನಾಲಜಿ ಕ್ಲಿನಿಕ್ಸ್ : ಎರಡು ದಿನಗಳ ಅರಿವು ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ,ನ.12:ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ,ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ನವೆಂಬರ್ 13 ಹಾಗೂ 14ರಂದು ಎರಡು ದಿನಗಳ “ಟೆಕ್ನಾಲಜಿ ಕ್ಲಿನಿಕ್ಸ್” – ಅರಿವು ಮೂಡಿಸುವ ಕಾರ್ಯಕ್ರಮವನ್ನು ಅಥಣಿ ರಸ್ತೆಯಲ್ಲಿರುವ ಹೊಟೇಲ್ “ಪ್ರವಾಸ” ದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10-30ಕ್ಕೆ ಕಾರ್ಯಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಅಧ್ಯಕ್ಷ ಡಾ. ಕೆ.ಎಚ್.ಮುಂಬಾರೆಡ್ಡಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ…

Read More

ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಚುರುಕು

ಸಪ್ತಸಾಗರ ವಾರ್ತೆ, ವಿಜಯಪುರ, ನ. 12: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿದ್ದಾರೆ.ಸರಕಾರಿ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು, ವೈದ್ಯರು ಸೇರಿದಂತೆ ನಾನಾ ಕ್ಷೇತ್ರಗಳ ಕ್ರೀಡಾಸಕ್ತರು ತಮ್ಮ ಕುಟುಂಬ ಸಮೇತ ನೋಂದಣಿ ಮಾಡಿಸುವ ಮೂಲಕ ಈ ಬಾರಿಯ ಓಟಕ್ಕೆ ಮೆರಗು ತರುತ್ತಿದ್ದಾರೆ.ಯಾದಗಿರಿ ಅಬಕಾರಿ ಇಲಾಖೆಯ ನಿರೀಕ್ಷಕ ಶ್ರೀಶೈಲ ಒಡೆಯರ 10…

Read More

ಜನರ ಆಶೋತ್ತರಗಳಿಗನುಗುಣವಾಗಿ ಯೋಜನೆ ರೂಪಿಸಿ ಜನರ ಜೀವನಮಟ್ಟ ಸುಧಾರಿಸಿ-ಉಪಾಧ್ಯಕ್ಷ ಡಿ.ಆರ್.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ ನ.12: ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ದಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ದಿಯ ಕ್ರೀಯಾಯೋಜನೆಗಳನ್ನು ರೂಪಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅವರು ಹೇಳಿದರು.ಮಂಗಳವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ದಿ ಯೋಜನೆಗಳನ್ನು…

Read More