ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅನನ್ಯ: ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 18:ದೇಶ ಕಾಯುವ ಸೈನಿಕರು ಜೈ ಜವಾನ್. ಅನ್ನ ನೀಡುವ ರೈತರು ಜೈ ಕಿಸಾನ್. ಅದೇ ರೀತಿ ದೇಶ ಕಟ್ಟುವ ಶಿಕ್ಷಕರು ಜೈ ಶಿಕ್ಷಕ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಶ ಕಟ್ಟುವುದು ಮತ್ತು ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪಾಲಕರನ್ನು ಹೊರತುಪಡಿಸಿದರೆ ಮಕ್ಕಳು…

Read More

ಸಂಶೋಧನೆ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 18:ಸಂಶೋಧನೆ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಔಷಧ ಮಂಡಳಿ ಮತ್ತು ಭಾರತದ ಔಷಧ ಶಿಕ್ಷಕರ ಸಂಘದ ರಾಜ್ಯ ಶಾಖೆ ಆಯೋಜಿಸಿರುವ ಔಷಧೀಯ ಶಿಕ್ಷಣ, ಸಂಶೋಧನೆ ಮತ್ತು ಉದ್ಯಮದಲ್ಲಿ ಪ್ರಗತಿಗಳು ವಿಷಯ ಕುರಿತ ಎರಡು ದಿನಗಳ ರಾಷ್ಟ್ರೀಯ…

Read More

ಎಸ್ಸೆಸ್ಸೆಲ್ಸಿ‌ ಸುಸೂತ್ರ‌ ಪರೀಕ್ಷೆಗೆ ಜಿಲ್ಲಾಡಳಿತ‌‌ ಸಂಪೂರ್ಣ ಸಜ್ಜು: ಮಾ.18ರಿಂದ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ‌ ಪರೀಕ್ಷೆ‌ ಆರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಜಿಲ್ಲೆಯಾದ್ಯಂತ ಒಟ್ಟು 137 ಪರೀಕ್ಷಾ ಕೇಂದ್ರಗಳಲ್ಲಿ ಇದೇ ಮಾರ್ಚ್ 18 ರಿಂದ ಎಸ್ ಎಸ್ ಎಲ್‌ಸಿ‌ ಪರೀಕ್ಷೆ ಆರಂಭಗೊಳ್ಳಲಿದ್ದು, ನಕಲು ಮುಕ್ತ ಹಾಗೂ ಪಾರದರ್ಶಕ‌ ಪರೀಕ್ಷೆ ನಡೆಸಲು ಜಿಲ್ಲಾಡಳಿತ‌ ಸಕಲ‌ ಸಿದ್ಧತೆ ಮಾಡಿಕೊಂಡಿದೆ.ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜಿಲ್ಲೆಯ 7 ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ನೋಡಲ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯುವ‌ ನಿಟ್ಟಿನಲ್ಲಿ‌ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಆನಂದ‌…

Read More

ಆರೋಗ್ಯದ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17 :ಜೀವನದಲ್ಲಿ ಪ್ರತಿಯೊಬ್ಬರೂ ಆರೋಗ್ಯದಿಂದ ಇದ್ದರೆ ಮಾತ್ರ ತಾವು ಸಂಪಾದಿಸಿದ ಐಶ್ವರ್ಯವನ್ನು ಅನುಭವಿಸಲು ಸಾಧ್ಯವಾಗುತ್ತದೆ. ಇದಕ್ಕಾಗಿ ಪ್ರತಿಯೊಬ್ಬರೂ ಬೆಳಗಿನ ಸಮಯದಲ್ಲಿ ವಾಯುವಿಹಾರ, ಯೋಗ,ಧ್ಯಾನ, ಪ್ರಾಣಾಯಾಮ ಮಾಡುವುದರ ಮೂಲಕ ಆರೋಗ್ಯ ಭಾಗ್ಯವನ್ನು ಹೊಂದಬೇಕೆಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಡಾ. ಬಿ.ಎಂ ಪಾಟೀಲ್ ಗುರೂಜಿ ಹೇಳಿದರು.ಮಂಗಳವಾರ ನಗರದ ಐತಿಹಾಸಿಕ ಸ್ಮಾರಕ ಗೋಲಗುಂಬಜ್ ವಾಯುವಿಹಾರಿಗಳನ್ನು ಉದ್ದೇಶಿಸಿ ಆರೋಗ್ಯ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಬ್ಯಾಂಕಿನ ಹಿಂದಿನ ಅಧ್ಯಕ್ಷ ವಿಜಯಕುಮಾರ ಇಜೇರಿ, ಮಾಜಿ ಉಪ…

Read More

ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ- ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.17: ಪೌರ ಕಾರ್ಮಿಕ ವೇತನ ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುಯಲ್ ಸ್ಕೆವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013 ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹೊರಗುತ್ತಿಗೆ ಆಧಾರ ಮೇಲೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ…

Read More

ಮುದ್ದೇಬಿಹಾಳದಲ್ಲಿ ಅಕಾಲಿಕ ಆಲಿಕಲ್ಲು ಮಳೆ: ತೋಟಗಾರಿಕೆ ಬೆಳೆಗಳಿಗೆ ಅಪಾರ ನಷ್ಟ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಜಿಲ್ಲೆಯ ಮುದ್ದೇಬಿಹಾಳ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಆಲಿಕಲ್ಲು ಮಳೆ ಬಿದ್ದಿದೆ.ಕೆಲ ಹೊತ್ತು ಸುರಿದ ಆಲಿಕಲ್ಲು ಮಳೆಯಿಂದ ಜನರು ಕೂಲ್ ಕೂಲ ಆಗಿದ್ದಾರೆ.ನಿತ್ಯ ಸುಮಾರು 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಜನರಿಗೆ ಅಕಾಲಿಕ ಆಲಿಕಲ್ಲು ಮಳೆ ತಂಪೆರೆಯಿತು.ಸುಡು ಬಿಸಿಲಿನ ಮಧ್ಯೆ ಸುರಿದ ಆಲಿಕಲ್ಲು ಮಳೆಯಿಂದಾಗಿರಸ್ತೆ ಮೇಲೆಲ್ಲ ರಾಶಿರಾಶಿ ಆಲಕಲ್ಲುಗಳು ಬಿದ್ದಿದ್ದು, ಜನರು, ಮಕ್ಕಳುಆಲಿಕಲ್ಲುಗಳನ್ನು ಪಾತ್ರೆಗಳಲ್ಲಿ ತುಂಬಿಕೊಂಡು ಹೋಗುತ್ತಿರುವುದು ಕಂಡು ಬಂತು.ಅಕಾಲಿಕ ಆಲಿಕಲ್ಲು ಮಳೆಯುದ್ರಾಕ್ಷಿ, ದಾಳಿಂಬೆ ಮುಂತಾದ…

Read More

ಶೀಘ್ರದಲ್ಲೇ ರಾಜ್ಯ ಮಟ್ಟದ‌‌ ಮಕ್ಕಳ‌ ಸಾಹಿತ್ಯ ಸಮ್ಮೇಳನ ಆಯೋಜನೆ:ಕರ್ನಾಟಕ ಬಾಲ‌ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ‌ ಇಟಗಿ‌ ಹೇಳಿಕೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ರಾಜ್ಯದಲ್ಲಿ ಇದೇ ಮೊದಲ ಬಾರಿಗೆರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಬಾಲ ವಿಕಾಸ ಅಕಾಡೆಮಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ಬಾಲ‌ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ‌ ಇಟಗಿ‌ ಹೇಳಿದರು.ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಇದೇ ಮೊದಲ‌ ಬಾರಿಗೆ ಭೇಟಿ ನೀಡಿ, ರಾಜ್ಯ ಮಟ್ಟದ ಮಕ್ಕಳ‌ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ‌ ಕುರಿತು‌ ನಡೆದ ಪೂರ್ವಭಾವಿ‌ ಸಭೆಯ ಅಧ್ಯಕ್ಷತೆ‌ ವಹಿಸಿ‌ ಅವರು ಮಾತನಾಡಿದರು.ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು…

Read More

ವಿಜಯಪುರದಲ್ಲಿ 15ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ: ಹೊಟೇಲ್ ಗಳ‌ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ,ಮಾ. 17:ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರ್ ಬಳಕೆಯಾಗುತ್ತಿರುವುದನ್ನು ಗಂಭೀರವಾಗಿ‌ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಹಾಗೂ‌ ಗ್ರಾಹಕ‌ ವ್ಯವಹಾರಗಳ ಇಲಾಖೆ‌ ಅಧಿಕಾರಿಗಳು ಮಂಗಳವಾರ ಹೊಟೇಲ್ ಗಳ‌ ಮೇಲೆ ದಾಳಿ ನಡೆಸಿ 15ಕ್ಕೂ ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.ನಗರದ ಸೊಲ್ಲಾಪುರ ರಸ್ತೆ ಪಕ್ಕದಲ್ಲಿರುವ ಹೋಟೆಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರಗಳನ್ನು ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು, ಒಟ್ಟು 15 ಗೃಹ ಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ. ತನ್ಮೂಲಕ ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ…

Read More

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾರ್ಚ್ 17:“ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.“ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ…

Read More

ವೈದ್ಯಕೀಯ ವೃತ್ತಿಯಲ್ಲಿ ಪ್ರಾಕ್ಟೀಸ್ ಮಾಡಲು ನ್ಯಾಯ ಸಮ್ಮತ ಅಂಶಗಳ ಕಡೆಗೆ ಗಮನವಿರಲಿ:ಡಾ. ಅರುಣ ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ವೈದ್ಯಕೀಯ ವೃತ್ತಿಯಲ್ಲಿ ಪ್ರ್ಯಾಕ್ಟಿಸ್ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾದ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಕಾನೂನು ವಿಷಯದ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೋಂಡು ಮಾತನಾಡಿದರು.ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತವಾಗಿ ಪ್ರಾಕ್ಟೀಸ ಮಾಡಲು ಐದು ಪ್ರಮುಖ ನ್ಯಾಯಾಂಗ ಕೇಸುಗಳನ್ನು…

Read More