ಹಿರಿಯ ನ್ಯಾಯವಾದಿ ಎಸ್. ಎಚ್. ಲಗಳಿ ನಿಧನ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19: ನಗರದ ಪ್ರಖ್ಯಾತ ಹಿರಿಯ ವಕೀಲ ಸುರೇಶ ಹಣಮಂತರಾಯ ಲಗಳಿ (77) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.ಮೃತರು ಸುದೀರ್ಘ ಕಾಲ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಎಸ್. ಎಂ. ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಬಿ.ಎಲ್.ಡಿ.ಇ. ಸಂಸ್ಥೆ, ಡಿ.ಎಲ್.ಆರ್.ಸಿ. ಮತ್ತು ಸ್ಪಿನ್ನಿಂಗ್ ಮಿಲ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ವಿಜಯಪುರ ಡಿಸಿಸಿ ಬ್ಯಾಂಕ್‌ನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಖ್ಯಾತ ಕ್ರಿಮಿನಲ್ ವಕೀಲರಾಗಿದ್ದ ಇವರು, ವಿಜಯಪುರ ನಗರಸಭೆ ಸೇರಿದಂತೆ ಜಿಲ್ಲೆಯ ಹಲವು…

Read More

ಹಳ್ಳ-ಕೊಳ್ಳ ಒತ್ತುವರಿ ತೆರವುಗೊಳಿಸಿ, ಸಹಕರಿಸಿ: ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಬಬಲೇಶ್ವರ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಗ್ರಾಮಗಳಲ್ಲಿ ಹಳ್ಳ-ಕೊಳ್ಳಗಳು ಒತ್ತುವರಿಯಾಗಿವೆ. ರೈತರು ಸ್ವಯಂ ಪ್ರೇರಣೆಯಿಂದ ಹಳ್ಳ ಒತ್ತುವರಿ ತೆರುವುಗೊಳಿಸಬೇಕು. ಅಲ್ಲಿ ಬೆಳೆದಿರುವ ಗಿಡ-ಗಂಟಿ ತೆಗೆದು ಸಹಕರಿಸಿದರೆ ಹಳ್ಳ ತುಂಬಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟದ ಹೊಳೆಯನ್ನೇ ಹರಿಸುವೆ ಎಂದು ಬೃಹತ್‌ ಮತ್ತು ಮಧ್ಯಮ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಬಬಲೇಶ್ವರ ತಾಲೂಕಿನ ನಿಡೋಣಿ- ಯಕ್ಕುಂಡಿ-ನಾಗರಾಳ- ಕುಮಠೆ-ಅರ್ಜುಣಗಿ…

Read More

ನಮ್ಮ ಸಿಎಂ ಗಟ್ಟಿಯಾಗಿದ್ದಾರೆ- ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ನಮ್ಮ ಸಿಎಂ ಬಹಳ ಗಟ್ಟಿಯಾಗಿದ್ದಾರೆ.ಅವರು ಯಾವಗಲೂ ಎಂದೂ ಅಸಹಾಯಕರಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಭಾನುವಾರ ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು, ಸಿಎಂ ಅಸಹಾಯಕರಾಗಿದ್ದಾರೆ ಎಂದುಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಕ್ರಮ ಆಗುತ್ತದೆ. ನಾನು ಸಹ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೂ ನಮ್ಮ ಮೇಲೆ ಕೂಡ ಕ್ರಮವಾಗುತ್ತದೆ. ಪಕ್ಷದ ಶಿಸ್ತು ಎಲ್ಲರಿಗೂ ಅನ್ವಯಿಸುತ್ತದೆಎಲ್ಲರೂ ಪಕ್ಷದ ನಿಯಮಗಳನ್ನು…

Read More

ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟರೆ ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಭಾನುವಾರ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ನಂದ್ಯಾಳ ಗ್ರಾಮದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು.ನಿನ್ನೆ ಪ್ರಧಾನಿಗಳ ಭಾಷಣ ನೋಡಿದರೆ ಭಾಷಣದಲ್ಲಿ ಘನತೆ‌ ಗೌರವ ಇರಬೇಕು. ಅದು ಇರಲಿಲ್ಲ. ಪದೇ ಪದೇ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳನ್ನು ವಿರೋಧಿಸಿ ಮಾತನಾಡಿದರು.ತರಾತುರಿಯಲ್ಲಿ…

Read More

ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರ ಹಮ್ಮಿಕೊಳ್ಳಿ : ಶಿವಪ್ಪಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ಸಿಂದಗಿ, ಏ. 19: ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ ಹೇಳಿದರು.ನಗರದಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ತಾಲೂಕಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಮತ್ತು ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವ, ತಾಲೂಕಿನಲ್ಲಿ ಕಬ್ಬಿನ ಕ್ಷೇತ್ರ ಹೆಚ್ಚಾಗಿದ್ದು ಕಬ್ಬಿನ ಬೆಳೆಗೆ ನೀರು ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ…

Read More

ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಬದ್ಧ: ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19:ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿಯಲ್ಲಿ ಚಂದ್ರಗಿರಿ ಸಿದ್ರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಗೆ ನಮ್ಮ ತಂದೆಯವರ ಕಾಲದಿಂದಲೂ ಬರುತ್ತಿದ್ದೇವೆ. ದೇವರು, ಶ್ರೀಗಳು ಮತ್ತು ಗ್ರಾಮಸ್ಥರ ಆಶೀರ್ವಾದದಿಂದ ಜಲಸಂಪನ್ಮೂಲ‌ ಸಚಿವನಾಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ…

Read More

ಯುಕೆಪಿ ಸಂತ್ರಸ್ತರ ನೆರವಿಗೆ ಲೋಕ ಅದಾಲತ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19: ಕೃಷ್ಣ ಮೇಲ್ದಂಡೆ ಯೋಜನೆ ಭೂ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೆರವಾಗಲು ಏಪ್ರಿಲ್ ನಿಂದ ಜುಲೈ 2026ರ ವರೆಗೆ ಲೋಕ ಅದಾಲತ್ ನಡೆದಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾನೂನು‌ ಸೇವಾ ಪ್ರಾಧಿಕಾರ ಈ ಲೋಕ ಅದಾಲತ ಆಯೋಜಿಸಿದೆ. ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಮತ್ತು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ…

Read More

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ,ಬೆಂಗಳೂರು, ಏ.18:ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು. ಕೆ….

Read More

ಸುಸೂತ್ರ ಪರೀಕ್ಷೆ ನಡೆಸಲು ಎಡಿಸಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 18: 2026ನೇ ಸಾಲಿನ ಸಿಇಟಿ ಪ್ರವೇಶ ಪರೀಕ್ಷೆಗಳು ಏ. 22 ರಿಂದ 24 ರವರೆಗೆ ಜಿಲ್ಲೆಯ 30 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,13,359 ಅಭ್ಯರ್ಥಿಗಳು ಪರೀಕ್ಷೆಗೆ…

Read More

ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 17:ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೆಟ್ರೋಲ್ ಬಂಕ್ ಜಾಗದ ನಕಾಶೆ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಡಳಿತ ಕಚೇರಿಯಎಸ್ ಡಿ ಎ ಅರವಿಂದ ಪವಾರಗುತ್ತಿಗೆ ಆಧಾರದಲ್ಲಿ ಸೇವೆ ಮಾಡುವಕಂಪ್ಯೂಟರ್ ಆಪರೇಟರ್ಅಯ್ಯಬ್ ತೊನಶ್ಯಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.15,000 ನಗದು ಸ್ವೀಕಾರ ಮಾಡುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿ ಎ…

Read More