ಮಾ.14 ರಂದು ರಂಭಾಪುರಿ ಶಾಖಾ ಪೀಠದ ಭೂಮಿ ಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7 :ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಪೀಠ ಖಾಸಾ ಶಾಖಾ ಬಾಳೆಹೊನ್ನೂರು ಬೃಹನ್ಮಠದ ಭೂಮಿ ಪೂಜೆಯನ್ನು ಮಾ.14 ರಂದು ಶನಿವಾರ ಸಂಜೆ 4.30 ಗಂಟೆಗೆ ಜರುಗಲಿದೆ ಎಂದು ಆಲಮೇಲದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ನಗರದ ಪ.ಗು.ಹಳಕಟ್ಟಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ರಂಭಾಪುರಿ ಪೀಠ ಹಾಗೂ ಶಾಲೆ ಕಾಲೇಜು ಸೇರಿದಂತೆ ಸೇವಾ ಮನೋಭಾವನೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಈ ನಾಡು ಬಹಳಷ್ಟು ಧಾರ್ಮಿಕ ಶ್ರೀಮಂತಿಕೆ ಹೊಂದಿದೆ. ರಂಭಾಪುರಿ ಪೀಠ ಪಂಚ ಪೀಠಗಳಲ್ಲಿ…

Read More

ವಸತಿ‌ ನಿಲಯಗಳಲ್ಲಿ ಮನೆ ವಾತಾವರಣ ನಿರ್ಮಿಸುತ್ತಿದ್ದೇವೆ: ಜಿಲ್ಲಾಧಿಕಾರಿ ಡಾ.‌ ಆನಂದ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7:ವಸತಿ ನಿಲಯಗಳು ಮಕ್ಕಳ‌ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳಾಗಿದ್ದು, ಈ ಕೇಂದ್ರಗಳಲ್ಲಿ ಮಕ್ಕಳ‌ ಓದಿಗೆ‌ ಪೂರಕವಾಗಿ ಅವರ ಉತ್ತಮ‌ ವ್ಯಕ್ತಿತ್ವ ರೂಪಿಸಲು ಮನೆಯ ವಾತಾವರಣ ನಿರ್ಮಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ‌ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಫರ್ಲ‌ ಹೊಟೇಲ್ ಹಿಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ 2025-26ನೇ ಸಾಲಿನ‌ ವಸತಿ ನಿಲಯ…

Read More

ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ: ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.7:ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೂಡಲೇ ಪೂರ್ಣಗೊಳಿಸಬೇಕು ಎಂಸು ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ‌ ನಾನಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಪಂಗಳಿಗೆ ಬಿಡುಗಡೆ ಮಾಡಿರುವ ಸಾಮಗ್ರಿ ವೆಚ್ಚದ ಅನುದಾನವನ್ನು ವಿಳಂಬ ಮಾಡದೇ ಇದೇ ಮಾ. 16ನೇ ತಾರೀಖಿನೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿಸಲ್ಪಟ್ಟ…

Read More

ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಕೊಲ್ಹಾರ, ಮಾ. 7: ವಿದ್ಯಾರ್ಥಿ ಜೀವನವು ಬದುಕಿನ ಸುವರ್ಣಾವಧಿ.ನಿಶ್ಚಿತಗುರಿ, ಅಚಲ ಶೃದ್ಧೆ, ಅವಿರತ ಪ್ರಯತ್ನ, ಸರಳವಾದ ಆಲೋಚನೆಗಳಿಂದ ಇಂದಿನ ಮಕ್ಕಳು ಸೃಜನಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು.ತಾಯಿ-ತಂದೆ-ಗುರುಗಳನ್ನು ಪ್ರೀತಿಯಿಂದ ಕಾಣುತ್ತಾ, ಅವರ ಮಾರ್ಗದರ್ಶನದಲ್ಲಿ ದೇಶದ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳಿ ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಮಸೂತಿ ಗ್ರಾಮದ ಶ್ರೀ ಗುರು ಸಂಗನ ಬಸವೇಶ್ವರ ವಜ್ರ ಮಹೋತ್ಸವ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ ಹತ್ತನೇ ವರ್ಗದ ವಿದ್ಯಾರ್ಥಿಗಳ ಶುಭ ಕೋರುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ…

Read More

ಬಿಜೆಪಿಗೆ ಅಧಿಕಾರ ಶತಸಿದ್ಧ:ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಸಂಸದ ರಮೇಶ ಜಿಗಜಿಣಗಿ ಭವಿಷ್ಯ ನುಡಿದರು.ವಿಜಯಪುರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಒಲವು ಬಿಜೆಪಿಯ ಮೇಲೆ ಎಂದಿಗೂ ಕಡಿಮೆಯಾಗಿಲ್ಲ, ಆದರೆ ಕಾಂಗ್ರೆಸ್‌ನವರು ಈ ಹಿಂದಿನ ಚುನಾವಣೆಯಲ್ಲಿ ಜನರನ್ನು ಗ್ಯಾರಂಟಿ ಹೆಸರಿನಲ್ಲಿ ಯಾಮಾರಿಸುವ ಪ್ರಯತ್ನ ಮಾಡಿದರು. ಆದರೆ ಈಗ ಗ್ಯಾರಂಟಿಗಳನ್ನೇ ಸರಿಯಾಗಿ ನೀಡುತ್ತಿಲ್ಲ. ಕೇವಲ ಖುರ್ಚಿ ಕಾದಾಟದಲ್ಲಿಯೇ…

Read More

ಇದು ಬಜೆಟ್ ಅಲ್ಲ, ಕೇವಲ ಘೋಷಣಾ ಪತ್ರ: ಉಮೇಶ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 6:ಒಳ ಮೀಸಲಾತಿ ವಿಷಯವಾಗಿ ಯಾವ ಸೂಕ್ತ ನಿರ್ಧಾರವನ್ನು ಪ್ರಸಕ್ತ ಬಜೆಟ್ ವೇಳೆಯಲ್ಲಿ ಕೈಗೊಳ್ಳದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ, ಇದು ಬಜೆಟ್ ಆಗಿರದೇ ಕೇವಲ ಘೋಷಣಾ ಪತ್ರವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅಸಮಾಧಾನ ಹೊರಹಾಕಿದ್ದಾರೆ.ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಒಳ ಮೀಸಲಾತಿ ಜಾರಿಯ ಬಗ್ಗೆ ಯಾವ ನಿರ್ಧಾರವನ್ನು ಪ್ರಕಟಿಸದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ಅನ್ಯಾಯ…

Read More

ಬಜೆಟ್: ವಿಜಯಪುರ ಮಹಾನಗರ ನಿರ್ಲಕ್ಷ್ಯ-ಎಂಎಲ್ಸಿ ಕೇಶವ ಪ್ರಸಾದ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 6: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ವಿಜಯಪುರ ಮಹಾನಗರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಬಹುನಿರೀಕ್ಷಿತ ವಿಮಾನ ನಿಲ್ದಾಣವನ್ನು ಯಾವಾಗ ಪ್ರಾರಂಭಮಾಡಲಾಗುತ್ತದೆ ಎಂಬುದರ ಬಗ್ಗೆ ಖಚಿತತೆ ಇಲ್ಲ ಎಂದು ವಿಧಾನ ಪರಿಷತ್ ಶಾಸಕ ಕೇಶವ ಪ್ರಸಾದ ಎಸ್. ಹೇಳಿದ್ದಾರೆ.ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ನಿರ್ದಿಷ್ಟವಾದ ಅನುದಾನವನ್ನು ಒದಗಿಸಿಲ್ಲ.•ಕಳೆದ ಬಜೆಟ್ ನಲ್ಲಿ ಘೋಷಿಸಲಾದ ಫುಡ್ಪಾರ್ಕ್ ಹಾಗೂ ದ್ರಾಕ್ಷಿ ಬೆಳೆಗಾರರ ಕೋಲ್ಡ್ ಸ್ಟೋರೇಜ್ ಪ್ರಗತಿಯಾಗಿಲ್ಲ, ಈ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಿಲ್ಲ.ಉತ್ತರ ಕರ್ನಾಟಕ ಭಾಗದ ಕ್ರೀಡೆಯ ಪ್ರೋತ್ಸಾಹಕ್ಕೆ…

Read More

ಅನ್ನದಾತನ ಬದುಕು ಬದಲಿಸುವ ಬಜೆಟ್-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಸಚಿವ ಶಿವಾನಂದ ಪಾಟೀಲ ಸ್ವಾಗತಿಸಿದ್ದಾರೆ.ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ…

Read More

ಬಾಬಾನಗರದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಬಜೆಟ್ ನಲ್ಲಿ ಅನುಮೋದನೆ: ತಿಕೋಟ ರೈತ ಮುಖಂಡರ ಹರ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆಯಡಿ ನೀರನ್ನು ಸಂಗ್ರಹಿಸಲು ಬಾಬಾನಗರದಲ್ಲಿ ಆಣೆಕಟ್ಟು ಕಟ್ಟಲು ಇಂದಿನ ಬಜೆಟ್ ನಲ್ಲಿ ಸೇರ್ಪಡೆಯಾಗಿರುವುದು ವಿಜಯಪುರ ಜಿಲ್ಲೆಯ ಅತೀ ಎತ್ತರದ ಪ್ರದೇಶದ ರೈತರಿಗೆ ನಮ್ಮ ಸರ್ಕಾರ ಈ ಬಜೆಟ್ ನಲ್ಲಿ ವಿಶೇಷ ಕೊಡುಗೆ ನೀಡಿದೆ ಎಂದು ತಿಕೋಟಾ ತಾಲೂಕಿನ ರೈತ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.ರೈತ ಮುಖಂಡರಾದ ಸೋಮನಾಥ ಬಾಗಲಕೋಟ, ಸಿದ್ದು ಗೌಡನವರ, ಮಧು ಸಾಹುಕಾರ ಜಾಧವ, ಎ.ಎಂ.ಪಾಟೀಲ ಬಿಜ್ಜರಗಿ, ಮಲ್ಲಿಕಾರ್ಜುನ ಲೋಣಿ, ಎಂ.ಎಸ್.ರುದ್ರಗೌಡರ, ಮಧುಕರ ಜಾಧವ,…

Read More

ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಜಿಲ್ಲೆಯ ಇಂಡಿಯ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 4.60 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಪ್ರಕಾಶ ಈರಪ್ಪ ಗೊಡಬೋಳೆ ಅವರು ಅಕ್ರಮ ಆಸ್ತಿ ಗಳಿಸಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಗೋಡಬೊಳೆ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ…

Read More